Sunday, December 7, 2025
Sunday, December 7, 2025

Shimoga District Chamber Of Commerce ದೇಶದ ಆರ್ಥಿಕ ಕೊಡುಗೆ ನೀಡುವಲ್ಲಿಪಿಯರ್ ಲೈಟ್ ಸಂಸ್ಥೆ ಮಹತ್ತರ ಪಾತ್ರ-ಎನ್‌.ಗೋಪಿನಾಥ್

Date:

Shimoga District Chamber Of Commerce ಫೌಂಡ್ರಿ ಕ್ಷೇತ್ರದಲ್ಲಿ ಐದು ದಶಕಗಳ ಸಾರ್ಥಕ ಸೇವೆ ಸಲ್ಲಿಸಿರುವ ಪಿಯರ್‌ಲೈಟ್ ಲೈರ‍್ಸ್ ಸಂಸ್ಥೆಯು ದೇಶಕ್ಕೆ ಆರ್ಥಿಕ ಕೊಡುಗೆ ನೀಡುವಲ್ಲಿಯೂ ಮಹತ್ತರ ಪಾತ್ರ ವಹಿಸಿದೆ ಎಂದು ಶಿವಮೊಗ್ಗ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಅಧ್ಯಕ್ಷ ಎನ್.ಗೋಪಿನಾಥ್ ಹೇಳಿದರು.

ಶಿವಮೊಗ್ಗ ನಗರದ ಪಿಯರ್‌ಲೈಟ್ ಲೈನರ‍್ಸ್ ಸಂಸ್ಥೆ ಐದು ದಶಕ ಪೂರೈಸಿರುವ ಹಿನ್ನೆಲೆಯಲ್ಲಿ ಶಿವಮೊಗ್ಗ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ವತಿಯಿಂದ ಆತ್ಮೀಯವಾಗಿ ಸನ್ಮಾನಿಸಿ ಮಾತನಾಡಿ, ಕೈಗಾರಿಕಾ ಕ್ಷೇತ್ರದಲ್ಲಿ ಉತ್ತಮ ಸೇವೆ ಸಲ್ಲಿಸುವ ಜತೆಯಲ್ಲಿ ಶಿವಮೊಗ್ಗ ಜಿಲ್ಲೆಯನ್ನು ಅಂತರಾಷ್ಟ್ರೀಯ ಮಟ್ಟದಲ್ಲಿ ಗುರುತಿಸುವಂತೆ ಮಾಡಿದ ಕೀರ್ತಿ ಸಲ್ಲುತ್ತದೆ ಎಂದು ತಿಳಿಸಿದರು.

1974ರಲ್ಲಿ ಸಂಸ್ಥೆ ಆರಂಭಗೊಂಡು ಸಿಲಿಂಡರ್ ಲೈನರ‍್ಸ್ ಮತ್ತು ಇಂಜಿನ್ ಉತ್ಪನ್ನಗಳ ತಯಾರಿಕೆಯಲ್ಲಿ ಗುಣಮಟ್ಟ ಮತ್ತು ನಾವೀನ್ಯತೆಯ ಮೂಲಕ ಖ್ಯಾತಿ ಹೊಂದಿದೆ. ವಿಶ್ವದ ಬಹುತೇಕ ರಾಷ್ಟ್ರ ಗಳಿಗೆ ಉತ್ಪನ್ನಗಳನ್ನು ಸರಬರಾಜು ಮಾಡುತ್ತಿರುವುದು ವಿಶೇಷ ಎಂದರು.

ಇಟಲಿ, ಅಮೇರಿಕಾ, ಇಂಗ್ಲೆಂಡ್, ಯುಎಇ, ಜರ್ಮನಿ ಮತ್ತು ಹಲವಾರು ದೇಶಗಳಲ್ಲಿರುವ ಗೌರವಾನ್ವಿತ ಗ್ರಾಹಕರನ್ನು ಪಿಯರ್‌ಲೈಟ್ ತಲುಪುತ್ತಿದೆ. ಫೌಂಡ್ರಿ ಉತ್ಪನ್ನಗಳು ಮೂರು ದಶಕಗಳಿಂದಲೂ ವಿದೇಶಗಳಿಗೆ ರಫ್ತಾಗುತ್ತಿದೆ. ಪಿಯರ್‌ಲೈಟ್ ಲೈನರ‍್ಸ್ ಪ್ರೈವೇಟ್ ಲಿಮಿಟೆಡ್ ಸಂಸ್ಥೆಯು ಹೆಚ್ಚು ನುರಿತ ಹಾಗೂ ಅನುಭವಿ ವೃತ್ತಿಪರರ ತಂಡ ಹೊಂದಿರುವ ಮೂಲಕ ಗ್ರಾಹಕರ ಬೇಡಿಕೆಗಳನ್ನು ನೀರಿಕ್ಷೆಗೆ ತಕ್ಕಂತೆ ಪೂರೈಸುತ್ತಿದೆ ಎಂದು ತಿಳಿಸಿದರು.

ಪಿಯರ್‌ಲೈಟ್ ಲೈನರ‍್ಸ್ ಸಂಸ್ಥೆಯ ರಾಮಪ್ರಸಾದ್.ಎಚ್.ಜಿ., ಶಿವದಾಸ್ ಜಿ.ದಿವೇಕರ್, ಸವ್ಯಸಾಚಿ.ಎಚ್.ಆರ್., ಅಂಕಿತ್ ಎಸ್.ದಿವೇಕರ್, ಜೆ.ರಘುದತ್ ಅವರನ್ನು ಶಿವಮೊಗ್ಗ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ವತಿಯಿಂದ ಅಭಿನಂದಿಸಲಾಯಿತು.

Shimoga District Chamber Of Commerce ಶಿವಮೊಗ್ಗ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಉಪಾಧ್ಯಕ್ಷ ಬಿ.ಗೋಪಿನಾಥ್, ಕಾರ್ಯದರ್ಶಿ ವಸಂತ್ ಹೋಬಳಿದಾರ್, ಸಹ ಕಾರ್ಯದರ್ಶಿ ಜಿ.ವಿಜಯಕುಮಾರ್, ಮಾಜಿ ಅಧ್ಯಕ್ಷ ಡಿ.ಎಂ.ಶಂಕರಪ್ಪ, ನಿರ್ದೇಶಕ ಇ.ಪರಮೇಶ್ವರ್, ಪ್ರದೀಪ್ ಎಲಿ ಮತ್ತಿತರರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಡಿಸೆಂಬರ್ 6. ಸಾಮಾಜಿಕ ಭದ್ರತಾ ಸೌಲಭ್ಯ ವಿಸ್ತರಣೆ ಅರಿವು ಕಾರ್ಯಾಗಾರ

Shivamogga District Chamber of Commerce and Industry ಶಿವಮೊಗ್ಗ ಜಿಲ್ಲಾ...

Madhu Bangarappa ಹವಾಮಾನಾಧಾರಿತಬೆಳೆವಿಮೆ ಮೊತ್ತ ಪಾವತಿ ನ್ಯೂನತೆ ಸರಿಪಡಿಸಲು ಶೀಘ್ರ ಕ್ರಮ- ಮಧು ಬಂಗಾರಪ್ಪ

Madhu Bangarappa ಅತಿವೃಷ್ಟಿ, ಅನಾವೃಷ್ಟಿ, ತಾಪಮಾನದ ಏರಿಳಿತದಂತಹ ಹವಾಮಾನ ವೈಪರಿತ್ಯಗಳಿಂದ ತೋಟಗಾರಿಕೆ...

DC Shivamogga ಕೆಎಸ್ಎಫ್ ಸಿ ಎಸ್ ಸಿ ಮಳಿಗೆಗಳಲ್ಲಿ ಸಗಟು ಭತ್ತ ಖರೀದಿ ವ್ಯವಸ್ಥೆ- ಗುರುದತ್ತ ಹೆಗಡೆ

DC Shivamogga 2025-26 ನೇ ಸಾಲಿನ ಮುಂಗಾರು ಋತುವಿನಲ್ಲಿ ಕನಿಷ್ಟ ಬೆಂಬಲ...