Sunday, February 1, 2026
Sunday, February 1, 2026

Purushothamana Prasanga Movie  ಪುರುಷೋತ್ತಮನ ಪ್ರಸಂಗ, ಸಿನಿಮಾ ಇಂದು ಬೆಳ್ಳಿತೆರೆಗೆ

Date:

Purushothamana Prasanga Movie  ಇಂದು ರಾಜ್ಯಾದ್ಯಂತ ಪುರುಷೋತ್ತಮನ ಪ್ರಸಂಗ ಸಿನಿಮಾ ಬಿಡುಗಡೆಗೊಂಡಿದೆ.

ಪುರುಷೋತ್ತಮನ ಪ್ರಸಂಗ ಸಿನಿಮಾವನ್ನು ದೇವದಾಸ್ ಕಾಪಿಕಾಡ್ ನಿರ್ದೇಶನ ಮಾಡಿದ್ದಾರೆ. ಚಿತ್ರದಲ್ಲಿ ಅಜಯ್ ಪೃಥ್ವಿ ನಾಯಕನಾಗಿ, ರಿಷಿಕಾ ನಾಯ್ಕ್ ಮತ್ತು ದೀಪಿಕಾ ಪುರುಷೋತ್ತಮ ನಾಯಕಿಯರಾಗಿ ಅಭಿನಯಿಸಿದ್ದಾರೆ.

ಉಳಿದಂತೆ ನವೀನ್ ಡಿ ಪಡೀಲ್ , ಅರವಿಂದ್ ಬೋಳಾರ್, ದೀಪಕ್ ರೈ ಪಣಾಜೆ, ಸಾಹಿಕೃಷ್ಣ ಕುಡ್ಲ, ದೇವದಾಸ್ ಕಾಪಿಕಾಡ್ ತಾರಾಗಣದಲ್ಲಿದ್ದಾರೆ.

ನಕುಲ್ ಅಭಯಂಕರ್ ಸಂಗೀತ, ವಿಷ್ಣು ಪ್ರಸಾದ್ ಪಿ ಛಾಯಾಗ್ರಹಣ ಸಿನಿಮಾಗಿದೆ. ಈ ಚಿತ್ರವನ್ನು ರಾಷ್ಟ್ರಕೂಟ ಪಿಕ್ಚರ್ಸ್‌ ಲಾಂಛನದಲ್ಲಿ ವಿ.ರವಿಕುಮಾರ್‌ ನಿರ್ಮಿಸಿದ್ದಾರೆ.

Purushothamana Prasanga Movie  ಒಂದೇ ಹಂತದಲ್ಲಿ ಸತತ 29 ದಿನಗಳ ಕಾಲ ಪುರುಷೋತ್ತಮನ ಪ್ರಸಂಗ ಸಿನಿಮಾದ ಚಿತ್ರೀಕರಣ ನಡೆದಿತ್ತು. ಮಂಗಳೂರು ಸುತ್ತಮುತ್ತಲಿನ ಬಜಪೆ, ಮುರನಗರ, ಕೆಂಜಾರ್ ಮೊದಲಾದ ಪ್ರದೇಶಗಳಲ್ಲಿ ಚಿತ್ರೀಕರಣ ನಡೆದಿದೆ. ಅಲ್ಲದೇ ದುಬೈನಲ್ಲಿ 7 ದಿನಗಳ ಕಾಲ ಚಿತ್ರೀಕರಣ ನಡೆದಿತ್ತು. ಉತ್ತಮ ಹಾಸ್ಯ ಕಥಾಹಂದರವನ್ನು ಒಳಗೊಂಡಿರುವ ಸಿನಿಮಾದಲ್ಲಿ ಪ್ರತಿಯೊಂದು ಪಾತ್ರವೂ ಇಲ್ಲಿ ಕತೆಗೆ ಪೂರಕವಾಗಿ ಪ್ರಾಮುಖ್ಯತೆಯನ್ನು ಪಡೆದಿದೆ. ಈ ಸಿನಿಮಾದ ಮೂಲಕ ಅಜಯ್ ಎಂಬ ನವ ನಟನನ್ನು ಹಾಗೂ ರಿಷಿಕಾ ನಾಯ್ಕ ಮತ್ತು ದೀಪಿಕಾ ಎಂಬುವರನ್ನು ನಟಿಯಾಗಿ ಕನ್ನಡಕ್ಕೆ ಪರಿಚಯಿಸಲಾಗಿದೆ. ಹಾಸ್ಯ ದಿಗ್ಗಜರನ್ನೊಳಗೊಂಡ ತಾರಾಗಣದಲ್ಲಿ ಬಹಳಷ್ಟು ಮಂದಿ ಹೊಸಬರಿಗೂ ಅವಕಾಶ ನೀಡಲಾಗಿದೆ ಎಂದು ನಿರ್ದೇಶಕ ದೇವದಾಸ್ ಕಾಫಿ ಕಾಡ್ ಅವರು ಹೇಳಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...

MESCOM ಹೊಳೆಹೊನ್ನೂರು ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಹೊಳೆಹೊನ್ನೂರು ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಫೆ. 03 ರಂದು ಬೆಳಿಗ್ಗೆ...

Shivamogga Police ವ್ಯಕ್ತಿ ಮೇಲೆ ಮಾರಣಾಂತಿಕ ಹಲ್ಲೆ, ಮೂವರಿಗೆ 5 ವರ್ಷ ಜೈಲು ಶಿಕ್ಷೆ

Shivamogga Police ಮಾರಣಾಂತಿಕವಾಗಿ ಹಲ್ಲೆ ಮಾಡಿ ಹಾಗೂ ಅವಾಚ್ಯ ಶಬ್ದಗಳಿಂದ ಬೈದು...