Monday, February 2, 2026
Monday, February 2, 2026

Chikmagalur News ಚಿಕ್ಕಮಗಳೂರು‌ ಜಿಲ್ಲೆಯಲ್ಲಿ ಬರಗಾಲ ಪರಿಹಾರ ಕ್ರಮಗಳ ಬಗ್ಗೆ ಮಾಹಿತಿ ನೀಡಲು ಎಎಪಿ ಒತ್ತಾಯ

Date:

Chikmagalur News ಚಿಕ್ಕಮಗಳೂರು, ಜಿಲ್ಲೆಯನ್ನು ಬರಗಾಲ ಪ್ರದೇಶವೆಂದು ಘೋಷಿಸಿರುವ ಸರ್ಕಾರ ಎಷ್ಟರ ಮಟ್ಟಿಗೆ ರೈತರಿಗೆ ಸೌಲಭ್ಯ ಹಾಗೂ ಜಾನುವಾರುಗಳಿಗೆ ಮೇವು ಸರಬರಾಜುಗೊಂಡಿವೆ ಎಂಬುದರ ಸಂಪೂರ್ಣ ಮಾಹಿತಿ ನೀಡಬೇಕು ಎಂದು ಎಎಪಿ ಮಾಧ್ಯಮ ಪ್ರತಿನಿಧಿ ಡಾ.ಕೆ.ಸುಂದರಗೌಡ ಪ್ರಶ್ನಿಸಿದ್ದಾರೆ.

ಈ ಕುರಿತು ಗುರುವಾರ ಪತ್ರಿಕಾ ಹೇಳಿಕೆ ನೀಡಿರುವ ಅವರು ಜಿಲ್ಲೆಯಲ್ಲಿ ಬರಗಾಲದ ಛಾಯೆ ಆವರಿಸಿಕೊoಡಿದ್ದು ಉಸ್ತುವಾರಿ ಸಚಿವರು ಗೋವುಗಳಿಗೆ ಮೇವು ಒದಗಿಸಿರುವ ಮತ್ತು ಬರಪೀಡಿತ ಪ್ರದೇಶಕ್ಕೆ ನೀರು ಸರಬ ರಾಜು ಯಾವ ರೀತಿಯಲ್ಲಿ ನಿರ್ವಹಿಸಲಾಗಿದೆ ಎಂಬುದರ ಮಾಹಿತಿಯನ್ನು ಹೇಳಬೇಕಿದೆ ಎಂದಿದ್ದಾರೆ.

ಬಯಲುಸೀಮೆ ಗ್ರಾಮದ ಜನತೆ ಹಾಗೂ ಸಾಕುಪ್ರಾಣಿಗಳು ಬರಗಾಲದಿಂದ ತತ್ತರಿಸಿ ಕುಡಿಯುವ ನೀರಿಗೂ ಹಾಹಕಾರಪಡುವಂತಾಗಿದೆ. ಈ ಸಂಬoಧ ಉಸ್ತುವಾರಿ ಸಚಿವರು ರೈತರ ಬದುಕು ಕಟ್ಟಿಕೊಳ್ಳಲು ಯಾ ವ ರೀತಿಯಲ್ಲೂ ಕ್ರಮವಹಿಸದಿರುವುದು ಜನರ ಮೇಲಿರುವ ವಿಶ್ವಾಸವನ್ನು ತೋರ್ಪಡಿಸುತ್ತದೆ ಎಂದಿದ್ದಾರೆ.
ಲೋಕಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ಮತದಾರರಿಗೆ ಕೈ ಮುಗಿಯುವುದನ್ನು ಬಿಟ್ಟರೆ ಬರ‍್ಯಾವ ಚಟುವಟಿಕೆ ಹಾಗೂ ರೈತರಿಗೆ ಸವಲತ್ತುಗಳನ್ನು ಒದಗಿಸುವುದು ಕಾಣಿಸುತ್ತಿಲ್ಲ. ಮತದಾರರ ತಾಳ್ಮೆ ಪರೀಕ್ಷಿಸುವ ಮೊ ದಲೇ ಸರ್ಕಾರವು ಎಚ್ಚೆತ್ತುಕೊಂಡು ರೈತರ ಬದುಕನ್ನು ಪುನಶ್ಚೇತನಗೊಳಿಸಬೇಕು. ಸಮಯಕ್ಕೆ ಮೇವನ್ನು ಒದಗಿಸಿ ಗೋವುಗಳ ಸುಸ್ಥಿತಿ ಕಾಪಾಡಬೇಕು ಎಂದು ಒತ್ತಾಯಿಸಿದ್ದಾರೆ.

ಜಿಲ್ಲೆಯ ಪ್ರತಿ ಹೋಬಳಿ ಮಟ್ಟದಲ್ಲಿ ಗೋಶಾಲೆಗಳನ್ನು ತೆರೆದು ಮುಂದಿನ ಜೂನ್ ಮಾಹೆಯವರೆಗೆ ಸಾಕು ಪ್ರಾಣಿಗಳ ಸಂರಕ್ಷಣೆ ರಾಜ್ಯಸರ್ಕಾರ ಮುಂದಾಗಬೇಕು. ಉಸ್ತುವಾರಿ ಸಚಿವರು ಹಾಗೂ ಸ್ಥಳೀಯ ಶಾಸಕರು ಈ ಬಗ್ಗೆ ಸಮಗ್ರ ಮಾಹಿತಿಯನ್ನು ಸರ್ಕಾರಕ್ಕೆ ತಲುಪಿಸಿ ಗೋವುಗಳ ರಕ್ಷಣೆಗೆ ಕಾರ್ಯಪ್ರವೃತ್ತರಾಗಬೇಕು ಎಂದಿದ್ದಾರೆ.
ಮಲೆನಾಡು ಪ್ರದೇಶವಾದ ಪಶ್ಚಿಮಘಟ್ಟಗಳ ಸಾಲಿನಲ್ಲಿ ದಿನೇ ದಿನೇ ಮಳೆಯ ಕೊರತೆಯಿಂದ ಹಸಿರು ಕವಚ ನಾಶವಾಗುತ್ತಿದೆ. ಅತಿಯಾದ ವಾಹನ ದಟ್ಟಣೆಯಿಂದ ಶೇ.೪೦ ಪರಿಸರವನ್ನು ಕಳೆದುಕೊಳ್ಳುವ ಜೊತೆಗೆ ಆಮ್ಲಜನಕದ ಕೊರತೆ ಉದ್ಬವಿಸಿದ್ದು ಇದೇ ರೀತಿ ಮುಂದುವರೆದರೆ ಮುಂದಿನ ಪೀಳಿಗೆಗೆ ಸೂಕ್ಷ್ಮ ಪರಿಸರವನ್ನು ಕೊಂಡೊಯ್ಯ ಕಷ್ಟಸಾಧ್ಯ ಎಂದಿದ್ದಾರೆ.

Chikmagalur News ಕಾಡನ್ನು ಕಡಿದು ಮರುಭೂಮಿಯನ್ನಾಗಿಸಿರುವುದು ದೊಡ್ಡ ದುರಂತವಾಗಿದೆ. ಕಾಡಿನ ನಾಶದಿಂದ ಹಲವಾರು ವನ್ಯಜೀವಿಗಳು ಆಹಾರವನ್ನಾರಸಿ ನಾಡಿನ ಕೃಷಿ ಬೆಳೆಗಳನ್ನು ನಾಶ ಮಾಡುವ ಸನ್ನಿವೇಶಕ್ಕೆ ಮಾನವ ನಿರ್ಮಿತ ಅಪರಾಧವಾಗಿವೆ. ಇವುಗಳ ನಿವಾರಣೆಗೆ ಬುದ್ದಿವಂತ ಮಾನವ ಹಸಿ ಕವಚದ ಬೆಳವಣಿಗೆಯ ನ್ನು ಕೈಗೆತ್ತಿ ಕೊಳ್ಳಬೇಕಾಗಿರುವುದು ಅನಿರ್ವಾಯವಾಗಿದೆ ಎಂದು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...

MESCOM ಹೊಳೆಹೊನ್ನೂರು ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಹೊಳೆಹೊನ್ನೂರು ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಫೆ. 03 ರಂದು ಬೆಳಿಗ್ಗೆ...

Shivamogga Police ವ್ಯಕ್ತಿ ಮೇಲೆ ಮಾರಣಾಂತಿಕ ಹಲ್ಲೆ, ಮೂವರಿಗೆ 5 ವರ್ಷ ಜೈಲು ಶಿಕ್ಷೆ

Shivamogga Police ಮಾರಣಾಂತಿಕವಾಗಿ ಹಲ್ಲೆ ಮಾಡಿ ಹಾಗೂ ಅವಾಚ್ಯ ಶಬ್ದಗಳಿಂದ ಬೈದು...