Friday, April 18, 2025
Friday, April 18, 2025

Shiva Rajkumar “ನನಗೆ ರಾಜಕಾರಣ ಗೊತ್ತಿಲ್ಲ ಗೀತಾ ಸಂಸದೆ ಆದರೆ ಸಂತೋಷ”- ನಟ ಶಿವರಾಜ್ ಕುಮಾರ್

Date:

Shiva Rajkumar ಕಾಂಗ್ರೆಸ್ ಪಕ್ಷ ಟಿಕೇಟ್ ಕೊಟ್ಟರೆ ಗೀತಾಳನ್ನ ಎಂಪಿ ಆಗಿ ನೋಡುವ ಆಸೆ ಇದೆ. ಗೀತಾ ಎಂಪಿ ಆಗುವ ಮೂಲಕ ಇತರೆ ಮಹಿಳೆಯರಿಗೆ ಮಾದರಿಯಾಗಲಿದ್ದಾರೆ ಎಂದು ನಟ ಡಾ. ಶಿವರಾಜ್ ಕುಮಾರ್ ಅಭಿಪ್ರಾಯಪಟ್ಟಿದ್ದಾರೆ.

ನಗರದ ಕಲ್ಲಹಳ್ಳಿಯಲ್ಲಿರುವ ಸಚಿವ ಮಧು ಬಂಗಾರಪ್ಪನವರ ಸ್ವಗೃಹದಲ್ಲಿ ನಡೆದ ಸಚಿವರ ಹುಟ್ಟುಹಬ್ಬ ಕಾರ್ಯಕ್ರಮದಲ್ಲಿ ಭಾಗಿಯಾಗಿ ಮಾತನಾಡಿದ ಅವರು, ನಾನು ರಾಜಕೀಯಕ್ಕೆ ಬರೊಲ್ಲ. ಅದರ ಬಗ್ಗೆ ಆಸಕ್ತಿ ಇಲ್ಲ. ಜನರ ಸೇವೆ ಮಾಡೋಕೆ ರಾಜಕೀಯದಲ್ಲಿದ್ದುಕೊಂಡು ಸೇವೆ ಮಾಡೋದು ಗೊತ್ತಿಲ್ಲ. ಜನ ಕಷ್ಟ ಅಂತ ಬಂದರೆ ಹಣಕೊಟ್ಟು ಕಳುಹಿಸುವೆ. ಆದರೆ ರಾಜಕಾರಣಗೊತ್ತಿಲ್ಲ. ಆದರೆ ಗೀತ ಅದೇ ಕುಟುಂಬದಿಂದ ಬಂದವಳು ರಾಜಕೀಯ ರಕ್ತದಲ್ಲಿ ಬಂದಿದೆ. ಎಂಪಿ ಆಗಿ ಆಯ್ಕೆಯಾದರೆ ಸಂತೋಷ ಎಂದರು.

ಸಿನಿಮಾದ ಬಗ್ಗೆ ಮಾತನಾಡಿದ ನಟ ಡಾ. ಶಿವರಾಜ್ ಕುಮಾರ್, ವೇದ ಸಿನಿಮಾದಲ್ಲಿ ಕಂಟೆಂಟ್ ಇತ್ತು. ಅದಾದ ನಂತರ ಅದರ ರೀತಿಯ ಸಿನಿಮಾ ಬರಲೇ ಇಲ್ಲ ಎಂಬ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದ ಅವರು, ವೇದ ನಂತರ ಗೋಸ್ಟ್ ಕಂಟೆಂಟ್ ಓರಿಯಂಟ್ ಸಿನಿಮಾಳಾಗಿದ್ದವು. ಜನರಿಗೆ ಇಷ್ಟವಾಗಿತ್ತು ಎಂದರು.

ಶೀಘ್ರದಲ್ಲಿಯೇ ಬಿಡುಗಡೆಯಾದ ಕರಟಕ ಧಮನಕ ಸಿನಿಮಾ ಬಗ್ಗೆ ಒಳ್ಳೆ ಕಥೆ ಇದೆ. ಬೇರೆ ಹೆಸರು ಇಡಬಹುದಿತ್ತು. ಆದರೆ ಕಥೆಗಾಗಿ ಅದೇ ಸಿನಿಮಾ ಟೈಟಲ್ ನ್ನ ಉಳಿಸಿಕೊಳ್ಳಲಾಗಿದೆ ಎಂದರು.

Shiva Rajkumar ಪತ್ರಿಕಾ ಗೋಷ್ಟಿಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ, ಗೀತಾ ಶಿವರಾಜ್‌ಕುಮಾರ್, ಎಂ. ಶ್ರೀಕಾಂತ್, ಸೇರಿದಂತೆ ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರು ಹಾಜರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

MESCOM ಏಪ್ರಿಲ್ 19 ಆಲ್ಕೊಳ ಫೀಡರ್ ಎ.ಎಫ್. 3 & 5 ರ ವ್ಯಾಪ್ತಿಯಲ್ಲಿ ವಿದ್ಯುತ್ ಸರಬರಾಜು ವ್ಯತ್ಯಯ

MESCOM ಆಲ್ಕೊಳ ವಿದ್ಯುತ್ ವಿತರಣಾ ಕೇಂದ್ರದಿಂದ ಸರಬರಾಜಾಗುವ ಫೀಡರ್ ಎ.ಎಫ್-3 ಮತ್ತು...

Sonia Gandhi ಸೋನಿಯಾ & ರಾಹುಲ್ ಮೇಲೆ ಬಿಜೆಪಿ ಸರ್ಕಾರದ ದ್ವೇಷ ರಾಜಕಾರಣ- ಶಿವಮೊಗ್ಗ ಎನ್ಎಸ್ ಯು ಐ ಆರೋಪ- ಪ್ರತಿಭಟನೆ

ಕೇಂದ್ರ ಬಿ ಜೆ ಪಿ ಸರ್ಕಾರ ಜಾರಿ ನಿರ್ದೇಶನಾಲಯದ ಮೂಲಕ ನ್ಯಾಷನಲ್...

MESCOM ಏಪ್ರಿಲ್ 18 ಆಲ್ಕೊಳ ಸುತ್ತಮುತ್ತ ವಿದ್ಯುತ್ ಸರಬರಾಜು ವ್ಯತ್ಯಯ

MESCOM ಆಲ್ಕೊಳ ವಿದ್ಯುತ್ ವಿತರಣಾ ಕೇಂದ್ರದ ವ್ಯಾಪ್ತಿಯಲ್ಲಿ ತುರ್ತು ಕಾಮಗಾರಿ ಹಮ್ಮಿಕೊಂಡಿರುವುದರಿಂದ...