Wednesday, May 6, 2026
Wednesday, May 6, 2026

Shiva Rajkumar “ನನಗೆ ರಾಜಕಾರಣ ಗೊತ್ತಿಲ್ಲ ಗೀತಾ ಸಂಸದೆ ಆದರೆ ಸಂತೋಷ”- ನಟ ಶಿವರಾಜ್ ಕುಮಾರ್

Date:

Shiva Rajkumar ಕಾಂಗ್ರೆಸ್ ಪಕ್ಷ ಟಿಕೇಟ್ ಕೊಟ್ಟರೆ ಗೀತಾಳನ್ನ ಎಂಪಿ ಆಗಿ ನೋಡುವ ಆಸೆ ಇದೆ. ಗೀತಾ ಎಂಪಿ ಆಗುವ ಮೂಲಕ ಇತರೆ ಮಹಿಳೆಯರಿಗೆ ಮಾದರಿಯಾಗಲಿದ್ದಾರೆ ಎಂದು ನಟ ಡಾ. ಶಿವರಾಜ್ ಕುಮಾರ್ ಅಭಿಪ್ರಾಯಪಟ್ಟಿದ್ದಾರೆ.

ನಗರದ ಕಲ್ಲಹಳ್ಳಿಯಲ್ಲಿರುವ ಸಚಿವ ಮಧು ಬಂಗಾರಪ್ಪನವರ ಸ್ವಗೃಹದಲ್ಲಿ ನಡೆದ ಸಚಿವರ ಹುಟ್ಟುಹಬ್ಬ ಕಾರ್ಯಕ್ರಮದಲ್ಲಿ ಭಾಗಿಯಾಗಿ ಮಾತನಾಡಿದ ಅವರು, ನಾನು ರಾಜಕೀಯಕ್ಕೆ ಬರೊಲ್ಲ. ಅದರ ಬಗ್ಗೆ ಆಸಕ್ತಿ ಇಲ್ಲ. ಜನರ ಸೇವೆ ಮಾಡೋಕೆ ರಾಜಕೀಯದಲ್ಲಿದ್ದುಕೊಂಡು ಸೇವೆ ಮಾಡೋದು ಗೊತ್ತಿಲ್ಲ. ಜನ ಕಷ್ಟ ಅಂತ ಬಂದರೆ ಹಣಕೊಟ್ಟು ಕಳುಹಿಸುವೆ. ಆದರೆ ರಾಜಕಾರಣಗೊತ್ತಿಲ್ಲ. ಆದರೆ ಗೀತ ಅದೇ ಕುಟುಂಬದಿಂದ ಬಂದವಳು ರಾಜಕೀಯ ರಕ್ತದಲ್ಲಿ ಬಂದಿದೆ. ಎಂಪಿ ಆಗಿ ಆಯ್ಕೆಯಾದರೆ ಸಂತೋಷ ಎಂದರು.

ಸಿನಿಮಾದ ಬಗ್ಗೆ ಮಾತನಾಡಿದ ನಟ ಡಾ. ಶಿವರಾಜ್ ಕುಮಾರ್, ವೇದ ಸಿನಿಮಾದಲ್ಲಿ ಕಂಟೆಂಟ್ ಇತ್ತು. ಅದಾದ ನಂತರ ಅದರ ರೀತಿಯ ಸಿನಿಮಾ ಬರಲೇ ಇಲ್ಲ ಎಂಬ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದ ಅವರು, ವೇದ ನಂತರ ಗೋಸ್ಟ್ ಕಂಟೆಂಟ್ ಓರಿಯಂಟ್ ಸಿನಿಮಾಳಾಗಿದ್ದವು. ಜನರಿಗೆ ಇಷ್ಟವಾಗಿತ್ತು ಎಂದರು.

ಶೀಘ್ರದಲ್ಲಿಯೇ ಬಿಡುಗಡೆಯಾದ ಕರಟಕ ಧಮನಕ ಸಿನಿಮಾ ಬಗ್ಗೆ ಒಳ್ಳೆ ಕಥೆ ಇದೆ. ಬೇರೆ ಹೆಸರು ಇಡಬಹುದಿತ್ತು. ಆದರೆ ಕಥೆಗಾಗಿ ಅದೇ ಸಿನಿಮಾ ಟೈಟಲ್ ನ್ನ ಉಳಿಸಿಕೊಳ್ಳಲಾಗಿದೆ ಎಂದರು.

Shiva Rajkumar ಪತ್ರಿಕಾ ಗೋಷ್ಟಿಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ, ಗೀತಾ ಶಿವರಾಜ್‌ಕುಮಾರ್, ಎಂ. ಶ್ರೀಕಾಂತ್, ಸೇರಿದಂತೆ ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರು ಹಾಜರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Kuvempu University ಹತ್ತು ಚಿನ್ನದ ಪದಕ ಮುಡಿಗೇರಿಸಿದ ಕುವೆಂಪು ವಿವಿಗೇ ಪ್ರಥಮ ವಿದ್ಯಾರ್ಥಿಎಂ.ಎ.(ಕನ್ನಡ) ವಿಭಾಗದ ಪ್ರತಿಭೆ, ಹೆಚ್.ಎಂ.ಅಭಿಷೇಕ್.

Kuvempu University ಕುವೆಂಪು ವಿಶ್ವವಿದ್ಯಾಲಯದ ಘಟಿಕೋತ್ಸವದಲ್ಲಿ ವಿದ್ಯಾರ್ಥಿಗಳು ಶೈಕ್ಷಣಿಕ ಸಾಧನೆಯ ಮೂಲಕ ಗಮನ...

Kuvempu university ಕುವೆಂಪು ವಿವಿಯಿಂದ ಗೌರಗ ಡಾಕ್ಟರೇಟ್ ಪಡೆದ ಮಹನಿಯರ ಮಾಹಿತಿ

Kuvempu university ಕುವೆಂಪು ವಿಶ್ವವಿದ್ಯಾಲಯದ 35ನೇ ವಾರ್ಷಿಕ ಘಟಿಕೋತ್ಸವದಲ್ಲಿ ನಾಡಿನ ಮೂವರು ಗಣ್ಯ...

Kuvempu University ವಿದ್ಯಾರ್ಥಿಗಳು ಜೀವನದಲ್ಲಿ ಯಶಸ್ಸಿನ ಎತ್ತರಗಳನ್ನ ಸಾಧಿಸಿ,ದೇಶದವಾಭಿವೃದ್ಧಿಗೆ ಕೊಡುಗೆ ನೀಡಿ- ಗೌ.ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್

Kuvempu University “ಕೇವಲ ಉದ್ಯೋಗಾಕಾಂಕ್ಷಿಯಾಗಿರದೆ ಅವಕಾಶಗಳ ಸೃಷ್ಟಿಕರ್ತರಾಗಿ. ಸ್ಟಾರ್ಟ್‌ಅಪ್ ಸಂಸ್ಕೃತಿ, ನಾವೀನ್ಯತೆ...

S.N. Channabasappa ಕನ್ನಡ ಸಾಹಿತ್ಯ ಪರಿಷತ್ತಿನ 111 ವರ್ಷಗಳ ಸೇವೆ ಅಪ್ರತಿಮ- ಎಸ್.ಎನ್.ಚನ್ನಬಸಪ್ಪ

S.N. Channabasappa "ಕನ್ನಡ ನಾಡು, ನುಡಿ ಮತ್ತು ಸಂಸ್ಕೃತಿಯನ್ನು ಕಟ್ಟುವಲ್ಲಿ ಕನ್ನಡ...