Monday, April 21, 2025
Monday, April 21, 2025

Sri Adichunchanagiri Mutt ಮಗು ಮೊದಲು ತನ್ನಲ್ಲಿ ತಾನು ಆತ್ಮವಿಶ್ವಾಸ ಮೂಡಿಸಿ ಕೊಳ್ಳುವುದು ಅಗತ್ಯ- ಶ್ರೀಪ್ರಸನ್ನನಾಥಶ್ರೀ

Date:

Sri Adichunchanagiri Mutt ಮಗು ಮೊದಲು ತನ್ನಲ್ಲಿ ತಾನು ಆತ್ಮವಿಶ್ವಾಸ ಮೂಡಿಸಿಕೊಳ್ಳುವುದು ಅತ್ಯವಶ್ಯಕ. ತನ್ನ ಕಲಿಕೆಯೇ ತನ್ನ ಏಳಿಗೆ ಎಂಬ ಅರಿವು ಮೂಡಿದರೆ ಕಲಿಕೆಯ ಶ್ರಮ ಸಾರ್ಥಕವಾಗುತ್ತದೆ ಎಂದು ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪ್ರಧಾನ ಕಾರ್ಯದರ್ಶಿ ಪ್ರಸನ್ನನಾಥ ಸ್ವಾಮೀಜಿ ಹೇಳಿದರು.


ಅವರು ತಮ್ಮ ವಿದ್ಯಾಸಂಸ್ಥೆಯ ೧೦ನೇ ತರಗತಿ ವಿದ್ಯಾರ್ಥಿಗಳಿಗೆ ಆಯೋಜಿಸಿದ್ದ ಶಾರದಾ ಪೂಜೆಯಲ್ಲಿ ಮಾತನಾಡಿದರು.
ಮೊಬೈಲ್ ಬಳಕೆ ಅತಿಯಾದರೆ ಅದು ನಮ್ಮ ಜೀವನವನ್ನೇ ಹಾಳು ಮಾಡುತ್ತದೆ. ಅದನ್ನು ಹಿತಮಿತವಾಗಿ ಬಳಸಿದರೆ ನಮ್ಮ ಜೀವನಕ್ಕೆ ಸಹಾಯ ಮಾಡುತ್ತದೆ. ಆದರೆ ವಿದ್ಯಾರ್ಥಿಗಳಾದ ನಿಮಗೆ ಅದರಲ್ಲಿ ಕೆಟ್ಟದ್ದನ್ನು ಬಳಸಿಕೊಳ್ಳುವ ಮನಸ್ಥಿತಿಯೇ ಹೆಚ್ಚಾಗಿರುತ್ತದೆ. ಆದ್ದರಿಂದ ಪರೀಕ್ಷೆ ಮುಗಿಯುವ ತನಕ ಮೊಬೈಲನ್ನು ಮುಟ್ಟದೇ ಪುಸ್ತಕದ ಮೊರೆ ಹೋಗಿ ಅದು ನಿಮ್ಮ ಭವಿಷ್ಯವನ್ನು ರೂಪಿಸುತ್ತದೆ ಎಂದ ಅವರು, ಪರೀಕ್ಷೆಗೆ ಕೆಲವೇ ದಿನಗಳು ಇರುವ ಈ ಸಂದರ್ಭದಲ್ಲಿ ಪ್ರತಿ ನಿಮಿಷವನ್ನೂ ಕೂಡ ವ್ಯಯಮಾಡದೇ ಸದುಪಯೋಗಪಡಿಸಿಕೊಂಡು ಅಭ್ಯಾಸ ಮಾಡಿದ್ದೇ ಆದರೆ ಪರೀಕ್ಷೆಯಲ್ಲಿ ನಿಮ್ಮ ನಿರೀಕ್ಷೆಯ ಗೋಲನ್ನು ಮುಟ್ಟಲು ಸಾಧ್ಯವಾಗುತ್ತದೆ ಎಂದರು.
Sri Adichunchanagiri Mutt ತಾನು ಓದಲು ಕೂರುವ ಸ್ಥಳದಲ್ಲಿ ವೇಳಾ ಪಟ್ಟಿ, ದಿನಚರಿಯ ಪಟ್ಟಿಯನ್ನು ಸದಾ ಕಣ್ಣಿಗೆ ಕಾಣುವಂತೆ ಇರಿಸಿಕೊಳ್ಳಬೇಕು. ತರಗತಿಯಲ್ಲಿ ತನಗಿಂತ ಹೆಚ್ಚು ಅಂಕ ಪಡೆದ ಸಹಪಾಠಿಯನ್ನು ಕಂಡು ಅಸೂಯೆ ಪಡದೆ ಅವನ ಓದಿನ ವಿಧಾನವನ್ನು ಅರಿತು ತಾನೂ ಅದನ್ನು ಕ್ರಮೇಣ ಅಳವಡಿಸಿಕೊಳ್ಳಬಹುದು ಎಂದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Sri Chidambara Mahaswami ಗುಬ್ಬಿ ಚಿದಂಬರಾಶ್ರಮದಲ್ಲಿಎಲೆಕ್ಟ್ರಿಷಿಯನ್ ವೃತ್ತಿ ಶಿಕ್ಷಣಕ್ಕೆ ಅರ್ಜಿ ಆಹ್ವಾನ

Sri Chidambara Mahaswami ಶ್ರೀ ಶ್ರೀ ಚಿದಂಬರ ಮಹಾಸ್ವಾಮಿಗಳು ಶ್ರೀ ಚಿದಂಬರಾಶ್ರಮವನ್ನು...

CM Siddharamaih ಪೌರ ಕಾರ್ಮಿಕರ ಸೇವೆ ಖಾಯಂಗೊಳಿಸುವ ಕಾರ್ಯ ನಡೆಯುತ್ತಿದೆ- ಸಿದ್ಧರಾಮಯ್ಯ

CM Siddharamaih ಎಲ್ಲಾ ಪೌರ ಕಾರ್ಮಿಕರ ಸೇವೆಯನ್ನು ಕಾಯಂಗೊಳಿಸುವ ಕಾರ್ಯ ನಡೆಯುತ್ತಿದೆ.ಈಗಾಗಲೇ...

DC Shivamogga ಪರೀಕ್ಷಾರ್ಥಿಯ ಜನಿವಾರ ತೆಗೆಸಿದ ಪ್ರಕರಣ, ಈರ್ವರು ಗೃಹ ರಕ್ಷಕ ದಳ ಸಿಬ್ಬಂದಿ ಅಮಾನತು-ಗುರುದತ್ತ‌ ಹೆಗಡೆ

DC Shivamogga ಶಿವಮೊಗ್ಗ ನಗರದ ಖಾಸಗಿ ಶಿಕ್ಷಣ ಸಂಸ್ಥೆಯೊಂದರಲ್ಲಿ ಇತ್ತೀಚಿಗೆ...

Mental health ಮಾನಸಿಕ ಸಮಸ್ಯೆಗಳು‌‌ ಮತ್ತು‌ ಸೂಕ್ತ ಪರಿಹಾರಗಳು ...

Mental health ಮಾನಸಿಕ ಖಾಯಿಲೆಗಳು ಯಾರಿಗಾದರೂ ಬರಬಹುದು : ಸೂಕ್ತ...