Wednesday, May 6, 2026
Wednesday, May 6, 2026

KKSRTC ಮೃತರ ಕುಟುಂಬಕ್ಕೆ ಪರಿಹಾರ ನೀಡದ ವಿಜಯನಗರ ರಾಜ್ಯ ಸಾರಿಗೆ ಸಂಸ್ಥೆ ಬಸ್ ಜಫ್ತಿ ಮಾಡಿಸಿದ ನ್ಯಾಯಾಲಯ

Date:

KKSRTC ಹೊಸಪೇಟೆಯ ಜೆಎಂಎಫ್‌ಸಿ ನ್ಯಾಯಾಲಯದ ಆವರಣಕ್ಕೆ ಕಲ್ಯಾಣ ಕರ್ನಾಟಕ ಸಾರಿಗೆ ಸಂಸ್ಥೆ (ಕೆಕೆಎಸ್‌ಆರ್‌ಟಿಸಿ ) ಬಸ್ ಬಂದು ನಿಂತುಕೊಂಡಿತ್ತು. ನ್ಯಾಯಾಲಯದ ಒಂದಷ್ಟು ಅಧಿಕಾರಿಗಳು, ಪೊಲೀಸರೂ ಜತೆಗಿದ್ದ ಕಾರಣ, ಆ ಬಸ್ ನಂತರ ಮುಂದಕ್ಕೆ ಚಲಿಸಲಿಲ್ಲ. ಅಪಘಾತ ಸಂತ್ರಸ್ತರ ಕುಟುಂಬಕ್ಕೆ ಪರಿಹಾರ ನೀಡಿಲ್ಲ ಎಂಬ ಕಾರಣಕ್ಕೆ ಆ ಬಸ್ ಅನ್ನು ಜಪ್ತಿ ಮಾಡಲಾಗಿತ್ತು.
ಹೌದು, ಅಪಘಾತ ಪ್ರಕರಣವೊಂದಕ್ಕೆ ಸಂಬಂಧಿಸಿ ಮೃತರ ಕುಟುಂಬಸ್ಥರಿಗೆ ಪರಿಹಾರ ನೀಡುವಲ್ಲಿ ವಿಳಂಬ ಮಾಡುತ್ತಿರುವ ಕಾರಣ, ಕಲ್ಯಾಣ ಕರ್ನಾಟಕ ಸಾರಿಗೆ ಸಂಸ್ಥೆಯ ಬಸ್ ಅನ್ನು ಹೊಸಪೇಟೆ ಜೆಎಂಎಫ್‌ಸಿ ಕೋರ್ಟ್ ಶುಕ್ರವಾರ ಜಪ್ತಿ ಮಾಡಿದೆ. ನಾಲ್ಕು ವರ್ಷ ಹಿಂದಿನ ಅಪಘಾತ ಪ್ರಕರಣ ಇದು. ಕೇಸ್ ವಿಚಾರಣೆ ಬಳಿಕ ಮೃತರ ಕುಟುಂಬಗಳಿಗೆ ಪರಿಹಾರ ನೀಡಬೇಕು ಎಂದು ಕೋರ್ಟ್ ಆದೇಶಿಸಿತ್ತು. ಆದರೆ ಅದನ್ನು ನಿಗಮ ಪಾಲಿಸಿರಲಿಲ್ಲ.
ಹೊಸಪೇಟೆ ವ್ಯಾಪ್ತಿಯಲ್ಲಿ ಕಲ್ಯಾಣ ಕರ್ನಾಟಕ ಸಾರಿಗೆ ಸಂಸ್ಥೆಯ ಬಸ್ ೨೦೨೦ರಲ್ಲಿ ಅಪಘಾತಕ್ಕೆ ಈಡಾಗಿತ್ತು. ಆ ಅಪಘಾತದಲ್ಲಿ ಟಿಬಿ ಡ್ಯಾಂ ನಿವಾಸಿಗಳಾದ ವಸಂತ ಕುಮಾರ್ ಮತ್ತು ವಿಜಯಾ ಎಂಬುವವರು ಮೃತಪಟ್ಟಿದ್ದರು. ಈ ಕುರಿತು ಕೇಸ್ ದಾಖಲಾಗಿತ್ತು.
ಈ ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಲಯ ೨೦೨೩ರಲ್ಲಿ ಮೃತರ ಕುಟುಂಬದವರಿಗೆ ಅನುಕ್ರಮವಾಗಿ ೧೫ ಲಕ್ಷ ರೂಪಾಯಿ ಮತ್ತು ೨೧ ಲಕ್ಷ ರೂಪಾಯಿ ಪರಿಹಾರ ನೀಡಬೇಕು ಎಂದು ಕಲ್ಯಾಣ ಕರ್ನಾಟಕ ಸಾರಿಗೆ ಸಂಸ್ಥೆಗೆ ಆದೇಶ ನೀಡಿತ್ತು. ಆದರೆ ಕೋರ್ಟ್ KKSRTC ಆದೇಶವನ್ನು ಕಲ್ಯಾಣ ಕರ್ನಾಟಕ ಸಾರಿಗೆ ಸಂಸ್ಥೆ ಪಾಲಿಸಲಿಲ್ಲ. ಈ ವಿಚಾರವಾಗಿ ಕಲ್ಯಾಣ ಕರ್ನಾಟಕ ಸಾರಿಗೆ ಸಂಸ್ಥೆಯ ಗಮನಸೆಳೆದರೂ ನಿರ್ಲಕ್ಷಿಸಿತ್ತು. ಈ ಹಿನ್ನೆಲೆಯಲ್ಲಿ ಬಸ್ ಜಫ್ತಿಗೆ ನ್ಯಾಯಾಲಯ ಆದೇಶಿಸಿತ್ತು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Kuvempu University ಹತ್ತು ಚಿನ್ನದ ಪದಕ ಮುಡಿಗೇರಿಸಿದ ಕುವೆಂಪು ವಿವಿಗೇ ಪ್ರಥಮ ವಿದ್ಯಾರ್ಥಿಎಂ.ಎ.(ಕನ್ನಡ) ವಿಭಾಗದ ಪ್ರತಿಭೆ, ಹೆಚ್.ಎಂ.ಅಭಿಷೇಕ್.

Kuvempu University ಕುವೆಂಪು ವಿಶ್ವವಿದ್ಯಾಲಯದ ಘಟಿಕೋತ್ಸವದಲ್ಲಿ ವಿದ್ಯಾರ್ಥಿಗಳು ಶೈಕ್ಷಣಿಕ ಸಾಧನೆಯ ಮೂಲಕ ಗಮನ...

Kuvempu university ಕುವೆಂಪು ವಿವಿಯಿಂದ ಗೌರಗ ಡಾಕ್ಟರೇಟ್ ಪಡೆದ ಮಹನಿಯರ ಮಾಹಿತಿ

Kuvempu university ಕುವೆಂಪು ವಿಶ್ವವಿದ್ಯಾಲಯದ 35ನೇ ವಾರ್ಷಿಕ ಘಟಿಕೋತ್ಸವದಲ್ಲಿ ನಾಡಿನ ಮೂವರು ಗಣ್ಯ...

Kuvempu University ವಿದ್ಯಾರ್ಥಿಗಳು ಜೀವನದಲ್ಲಿ ಯಶಸ್ಸಿನ ಎತ್ತರಗಳನ್ನ ಸಾಧಿಸಿ,ದೇಶದವಾಭಿವೃದ್ಧಿಗೆ ಕೊಡುಗೆ ನೀಡಿ- ಗೌ.ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್

Kuvempu University “ಕೇವಲ ಉದ್ಯೋಗಾಕಾಂಕ್ಷಿಯಾಗಿರದೆ ಅವಕಾಶಗಳ ಸೃಷ್ಟಿಕರ್ತರಾಗಿ. ಸ್ಟಾರ್ಟ್‌ಅಪ್ ಸಂಸ್ಕೃತಿ, ನಾವೀನ್ಯತೆ...

S.N. Channabasappa ಕನ್ನಡ ಸಾಹಿತ್ಯ ಪರಿಷತ್ತಿನ 111 ವರ್ಷಗಳ ಸೇವೆ ಅಪ್ರತಿಮ- ಎಸ್.ಎನ್.ಚನ್ನಬಸಪ್ಪ

S.N. Channabasappa "ಕನ್ನಡ ನಾಡು, ನುಡಿ ಮತ್ತು ಸಂಸ್ಕೃತಿಯನ್ನು ಕಟ್ಟುವಲ್ಲಿ ಕನ್ನಡ...