Sunday, June 21, 2026
Sunday, June 21, 2026

KKSRTC ಮೃತರ ಕುಟುಂಬಕ್ಕೆ ಪರಿಹಾರ ನೀಡದ ವಿಜಯನಗರ ರಾಜ್ಯ ಸಾರಿಗೆ ಸಂಸ್ಥೆ ಬಸ್ ಜಫ್ತಿ ಮಾಡಿಸಿದ ನ್ಯಾಯಾಲಯ

Date:

KKSRTC ಹೊಸಪೇಟೆಯ ಜೆಎಂಎಫ್‌ಸಿ ನ್ಯಾಯಾಲಯದ ಆವರಣಕ್ಕೆ ಕಲ್ಯಾಣ ಕರ್ನಾಟಕ ಸಾರಿಗೆ ಸಂಸ್ಥೆ (ಕೆಕೆಎಸ್‌ಆರ್‌ಟಿಸಿ ) ಬಸ್ ಬಂದು ನಿಂತುಕೊಂಡಿತ್ತು. ನ್ಯಾಯಾಲಯದ ಒಂದಷ್ಟು ಅಧಿಕಾರಿಗಳು, ಪೊಲೀಸರೂ ಜತೆಗಿದ್ದ ಕಾರಣ, ಆ ಬಸ್ ನಂತರ ಮುಂದಕ್ಕೆ ಚಲಿಸಲಿಲ್ಲ. ಅಪಘಾತ ಸಂತ್ರಸ್ತರ ಕುಟುಂಬಕ್ಕೆ ಪರಿಹಾರ ನೀಡಿಲ್ಲ ಎಂಬ ಕಾರಣಕ್ಕೆ ಆ ಬಸ್ ಅನ್ನು ಜಪ್ತಿ ಮಾಡಲಾಗಿತ್ತು.
ಹೌದು, ಅಪಘಾತ ಪ್ರಕರಣವೊಂದಕ್ಕೆ ಸಂಬಂಧಿಸಿ ಮೃತರ ಕುಟುಂಬಸ್ಥರಿಗೆ ಪರಿಹಾರ ನೀಡುವಲ್ಲಿ ವಿಳಂಬ ಮಾಡುತ್ತಿರುವ ಕಾರಣ, ಕಲ್ಯಾಣ ಕರ್ನಾಟಕ ಸಾರಿಗೆ ಸಂಸ್ಥೆಯ ಬಸ್ ಅನ್ನು ಹೊಸಪೇಟೆ ಜೆಎಂಎಫ್‌ಸಿ ಕೋರ್ಟ್ ಶುಕ್ರವಾರ ಜಪ್ತಿ ಮಾಡಿದೆ. ನಾಲ್ಕು ವರ್ಷ ಹಿಂದಿನ ಅಪಘಾತ ಪ್ರಕರಣ ಇದು. ಕೇಸ್ ವಿಚಾರಣೆ ಬಳಿಕ ಮೃತರ ಕುಟುಂಬಗಳಿಗೆ ಪರಿಹಾರ ನೀಡಬೇಕು ಎಂದು ಕೋರ್ಟ್ ಆದೇಶಿಸಿತ್ತು. ಆದರೆ ಅದನ್ನು ನಿಗಮ ಪಾಲಿಸಿರಲಿಲ್ಲ.
ಹೊಸಪೇಟೆ ವ್ಯಾಪ್ತಿಯಲ್ಲಿ ಕಲ್ಯಾಣ ಕರ್ನಾಟಕ ಸಾರಿಗೆ ಸಂಸ್ಥೆಯ ಬಸ್ ೨೦೨೦ರಲ್ಲಿ ಅಪಘಾತಕ್ಕೆ ಈಡಾಗಿತ್ತು. ಆ ಅಪಘಾತದಲ್ಲಿ ಟಿಬಿ ಡ್ಯಾಂ ನಿವಾಸಿಗಳಾದ ವಸಂತ ಕುಮಾರ್ ಮತ್ತು ವಿಜಯಾ ಎಂಬುವವರು ಮೃತಪಟ್ಟಿದ್ದರು. ಈ ಕುರಿತು ಕೇಸ್ ದಾಖಲಾಗಿತ್ತು.
ಈ ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಲಯ ೨೦೨೩ರಲ್ಲಿ ಮೃತರ ಕುಟುಂಬದವರಿಗೆ ಅನುಕ್ರಮವಾಗಿ ೧೫ ಲಕ್ಷ ರೂಪಾಯಿ ಮತ್ತು ೨೧ ಲಕ್ಷ ರೂಪಾಯಿ ಪರಿಹಾರ ನೀಡಬೇಕು ಎಂದು ಕಲ್ಯಾಣ ಕರ್ನಾಟಕ ಸಾರಿಗೆ ಸಂಸ್ಥೆಗೆ ಆದೇಶ ನೀಡಿತ್ತು. ಆದರೆ ಕೋರ್ಟ್ KKSRTC ಆದೇಶವನ್ನು ಕಲ್ಯಾಣ ಕರ್ನಾಟಕ ಸಾರಿಗೆ ಸಂಸ್ಥೆ ಪಾಲಿಸಲಿಲ್ಲ. ಈ ವಿಚಾರವಾಗಿ ಕಲ್ಯಾಣ ಕರ್ನಾಟಕ ಸಾರಿಗೆ ಸಂಸ್ಥೆಯ ಗಮನಸೆಳೆದರೂ ನಿರ್ಲಕ್ಷಿಸಿತ್ತು. ಈ ಹಿನ್ನೆಲೆಯಲ್ಲಿ ಬಸ್ ಜಫ್ತಿಗೆ ನ್ಯಾಯಾಲಯ ಆದೇಶಿಸಿತ್ತು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Raghavendra ಪಿಎಂ- ವಿಬಿಆರ್ ವೈ ಯೋಜನೆಯಿಂದ ಉದ್ಯೋಗ ಸೃಷ್ಠಿ- ಬಿ.ವೈ.ರಾಘವೇಂದ್ರ

B.Y. Raghavendra ಪ್ರಧಾನ ಮಂತ್ರಿ ವಿಕಸಿತ್ ರೋಜ್ ಗಾರ್ ಯೋಜನೆ ಅಡಿಯಲ್ಲಿ...

Rotary Organization ಸಮಾಜಮುಖಿ ಸೇವೆಗಳ ಮೂಲಕ ರೋಟರಿ ಸಂಸ್ಥೆ ಮುಂಚೂಣಿಯಲ್ಲಿದೆ- ರೋಟರಿ ಗೌರ್ನರ್ ಕೆ.ಫಾಲಾಕ್ಷ

Rotary Organization ಮನುಕುಲದ ಮಾನವೀಯ ಸೇವೆಯಲ್ಲಿ ರೋಟರಿ ಸಂಸ್ಥೆ ಮುಂಚೂಣಿಯಲ್ಲಿದೆ ಪ್ರಪಂಚಾದ್ಯಂತ...

DC Shivamogga ಹುಲಿಕಲ್ ಘಾಟಿಯಲ್ಲಿ ಮಜಲು ಬಸ್ ವಾಹನಗಳ ಸಂಚಾರಕ್ಕೆ ಅವಕಾಶ- ಪ್ರಭುಲಿಂಗ ಕವಳಿಕಟ್ಟಿ

DC Shivamogga ಸಾರ್ವಜನಿಕ ಹಿತದೃಷ್ಟಿಯನ್ನು ಗಮನದಲ್ಲಿಟ್ಟುಕೊಂಡು ಜೂ. 18 ರಿಂದ ರಾಜ್ಯ...