Wednesday, January 21, 2026
Wednesday, January 21, 2026

Supreme Court ಜನಪ್ರತಿನಿಧಿಗಳ ಮತಕ್ಕಾಗಿ ಹಣಬೇಡಿಕೆ & ಸದನದಲ್ಲಿ ಹಣ ಪಡೆದು ಪ್ರಶ್ನೆ ಕೇಳಿದರೆ ಕಾನೂನಿಂದ ವಿನಾಯಿತಿ ಇಲ್ಲ-ಸುಪ್ರೀಂ ಕೋರ್ಟ್

Date:

Supreme Court  ಸಂಸತ್ತಿನಲ್ಲಿ ಭಾಷಣ ಮಾಡಲು ಮತ್ತು ಮತಗಳಿಗಾಗಿ ಲಂಚ ಪಡೆಯುವ ಪ್ರಕರಣಗಳಲ್ಲಿ ಸಂಸದರು, ಶಾಸಕರಿಗೆ ಕಾನೂನು ಕ್ರಮದಿಂದ ವಿನಾಯಿತಿ ನೀಡುವ ಈ ಹಿಂದಿನ ಆದೇಶವನ್ನು ಸುಪ್ರೀಂ ಕೋರ್ಟ್‌ನ ಏಳು ನ್ಯಾಯಾಧೀಶರ ಸಂವಿಧಾನ ಪೀಠ ರದ್ದುಗೊಳಿಸಿದೆ. ಈ ಮೂಲಕ ಮತ್ತೊಂದು ಐತಿಹಾಸಿಕ ತೀರ್ಪು ಪ್ರಕಟಿಸಿದೆ.

ಸಂಸತ್‌ನಲ್ಲಿ ಭಾಷಣ ಮಾಡಲು ಅಥವಾ ಮತದಾನ ಮಾಡಲು ಸಂಸದರು, ಶಾಸಕರು ಲಂಚ ಪಡೆಯುವ ಪ್ರಕರಣಗಳಲ್ಲಿ ಕಾನೂನು ಕ್ರಮದ ವಿನಾಯಿತಿ ಒದಗಿಸಿದ್ದ ಐವರು ಸದಸ್ಯರ ಸಂವಿಧಾನ ಪೀಠದ 1998ರ ತೀರ್ಪನ್ನು ಇಂದಿನ ತೀರ್ಪು ರದ್ದುಗೊಳಿಸಿದೆ.

“ಲಂಚ ಪಡೆಯುದನ್ನು ಸಂಸದೀಯ ಸವಲತ್ತುಗಳಿಂದ ರಕ್ಷಿಸಲಾಗಿಲ್ಲ ಮತ್ತು 1998ರ ತೀರ್ಪಿನ ವ್ಯಾಖ್ಯಾನವು ಸಂವಿಧಾನದ 105 ಮತ್ತು 194 ನೇ ವಿಧಿಗಳಿಗೆ ವಿರುದ್ಧವಾಗಿದೆ ಎಂದು ನ್ಯಾಯಾಲಯ ಹೇಳಿದೆ”. ಈ ಎರಡು ವಿಧಿಗಳು ಚುನಾಯಿತ ಪ್ರತಿನಿಧಿಗಳಿಗೆ ಭಯವಿಲ್ಲದೆ ಕೆಲಸ ಮಾಡಲು ಅನುವು ಮಾಡಿಕೊಡಲು ಕಾನೂನು ಕ್ರಮದಿಂದ ವಿನಾಯಿತಿಯನ್ನು ಒದಗಿಸುತ್ತವೆ.

Supreme Court  ಪಿವಿ ನರಸಿಂಹ ರಾವ್ ಪ್ರಕರಣದ 1998ರ ತೀರ್ಪನ್ನು ನಾವು ಒಪ್ಪುವುದಿಲ್ಲ. ಮತ ಚಲಾಯಿಸಲು ಅಥವಾ ಭಾಷಣ ಮಾಡಲು ಲಂಚ ಪಡೆಯುವ ಪ್ರಕರಣಗಳಲ್ಲಿ ಸಂಸದ, ಶಾಸಕರಿಗೆ ವಿನಾಯಿತಿ ನೀಡುವ ಈ ತೀರ್ಪು ವ್ಯಾಪಕ ಪರಿಣಾಮಗಳನ್ನು ಬೀರುತ್ತವೆ” ಎಂದು ಮುಖ್ಯನ್ಯಾಯಮೂರ್ತಿ ಡಿ.ವೈ. ಚಂದ್ರಚೂಡ್ ಹೇಳಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

MESCOM ಶಿವಮೊಗ್ಗ :ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಶಿವಮೊಗ್ಗ ಮೆಸ್ಕಾಂ ನಗರ ಉಪವಿಭಾಗ -3 ಕಛೇರಿಯಲ್ಲಿ...

S.N.Chennabasappa ವ್ಯಕ್ತಿತ್ವ ರೂಪಿಸಿಕೊಳ್ಳಲು ನಿಜಶರಣರ ವಚನ ಅಳವಡಿಸಿಕೊಳ್ಳಬೇಕು –ಎಸ್.ಎನ್. ಚನ್ನಬಸಪ್ಪ

S.N.Chennabasappa ಪ್ರತಿಯೊಬ್ಬ ವ್ಯಕ್ತಿ ತನ್ನ ಜೀವನದಲ್ಲಿ ಒಳ್ಳೆಯ ವ್ಯಕ್ತಿತ್ವ ರೂಪಿಸಿಕೊಳ್ಳಲು ನಿಜಶರಣರ...

Klive Special Article ದಾಖಲೆ ನಿರ್ಮಿಸಿದ ವೀಣೆಯ ಝೇಂಕಾರ

Klive Special Article ಶಿವಮೊಗ್ಗ ನಿಜವಾಗಿಯೂ ಸಾಂಸ್ಕೃತಿಕವಾಗಿ ಶ್ರೀಮಂತವಾದ ಊರು....

ಜ.24 ರಿಂದ ಮಲೆನಾಡು ಕರಕುಶಲ ಉತ್ಸವ – ಸಿರಿಧಾನ್ಯ ಮೇಳ-ಫಲ ಪುಷ್ಪ ಪ್ರದರ್ಶನ : ಹೇಮಂತ್ ಎನ್.

ಈ ಬಾರಿ ಹಲವಾರು ವಿಶೇಷತೆಗಳೊಂದಿಗೆ ಮಲೆನಾಡು ಕರಕುಶಲ ಉತ್ಸವ ಸಿರಿಧಾನ್ಯ...