Friday, September 27, 2024
Friday, September 27, 2024

Kateel Ashok Pai Memorial Institute ಬಹಳಷ್ಟು ಮಾನಸಿಕ ಕಾಯಿಲೆಗಳು ಬೆಳಕಿಗೆ ಬರುತ್ತಿಲ್ಲ ಖಾಸಗಿ & ಸರ್ಕಾರಿ ಸೇವೆಯಲ್ಲಿರುವ ತಜ್ಞರು ಒಟ್ಟಾಗಿ ಪ್ರಯತ್ನಿಸಬೇಕು- ಡಾ.ಕಿರಣ್

Date:

Kateel Ashok Pai Memorial Institute ಕರ್ನಾಟಕ ರಾಜ್ಯ ಪೂರಕ ಆರೋಗ್ಯ ವಿಜ್ಞಾನಗಳ ವೃತ್ತಿಪರರ ಸಂಸ್ಥೆ ಹಾಗೂ ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ ಸಂಯೋಗದೊಂದಿಗೆ ಕಟೀಲ್ ಅಶೋಕ್ ಪೈ ಸ್ಮಾರಕ ಸಂಸ್ಥೆಯ ಪೂರಕ ಆರೋಗ್ಯ ವಿಜ್ಞಾನ
ವಿಭಾಗವು ಕಲಿಕಾ ನ್ಯೂನ್ಯತೆ ತಪಾಸಣೆ ಮತ್ತು ನಿರ್ವಹಣೆ ವಿಷಯದ ಕುರಿತು ಒಂದು ದಿನದ ರಾಜ್ಯಮಟ್ಟದ ಕಾರ್ಯಗಾರವನ್ನು ಆಯೋಜಿಸಿತ್ತು.

ಕಾರ್ಯಕ್ರಮವನ್ನು ಉದ್ಘಾಟಿಸಿದ ಮಾನಸ ಟ್ರಸ್ಟ್ ನ ನಿರ್ದೇಶಕರಾದ ಡಾ.ರಜನಿ.ಎ.ಪೈ ಕಾರ್ಯಕ್ರಮಕ್ಕೆ ಶುಭ ಹಾರೈಸಿ ಕಲಿಕಾ ನ್ಯೂನತೆಯಿರುವ ಮಕ್ಕಳಿಗೆ ಸಂಪನ್ಮೂಲಗಳನ್ನು ಕಲ್ಪಿಸುವ ಅವಶ್ಯಕತೆಯಿದೆ ಹಾಗೂ ಇಂತಹ ಸಂಸ್ಥೆಗಳು ಎದುರಿಸುವ ಸವಾಲುಗಳ ಕುರಿತು ಮಾತನಾಡಿದರು.

ಕಾರ್ಯಕ್ರಮದ ಅಧ್ಯಕ್ಷರಾದ ಕಟೀಲ್ ಅಶೋಕ್ ಪೈ ಪೂರಕ ಆರೋಗ್ಯ ವಿಜ್ಞಾನಗಳ ಸಂಸ್ಥೆಯ ಪ್ರಾಂಶುಪಾಲರಾದ ಡಾ.ಪುಷ್ಪಲತಾ.ಜಿ ಕಾರ್ಯಕ್ರಮವನ್ನು ಉದ್ದೇಶಿಸಿ ಮಾನಸಿಕ ಆರೋಗ್ಯ ರಕ್ಷಣೆಯಲ್ಲಿ ಸುಧಾರಿತ ಸೇವೆಗಳಿಗೆ ತರಬೇತಿ ಮತ್ತು ಉನ್ನತೀಕರಣವು ಪ್ರಮುಖವಾಗಿದೆ. ಹಾಗೂ ಪ್ರಾಯೋಗಿಕ ತರಬೇತಿ ಮತ್ತು ಕೌಶಲ್ಯವು ಮಾನಸಿಕ ಆರೋಗ್ಯ ರಕ್ಷಣೆ ಮತ್ತು ಸೇವೆಗಳಿಗೆ ಅತ್ಯಗತ್ಯ ಎಂದು ಅಭಿಪ್ರಾಯಪಟ್ಟರು.

ಕಟೀಲ್ ಅಶೋಕ್ ಪೈ ಸ್ಮಾರಕ ಸಂಸ್ಥೆಯು ತನ್ನ ಪ್ರಾರಂಭ ಕಾಲದಿಂದಲೂ ಮಾನಸಿಕ ಆರೋಗ್ಯ ಶಿಕ್ಷಣಕ್ಕಾಗಿ ಪ್ರಧಾನ ಸಂಸ್ಥೆಯಾಗಿ ಗುರುತಿಸಲ್ಪಟ್ಟಿದೆ. ಮಾನಸಿಕ ಆರೋಗ್ಯ ವೃತ್ತಿಪರರಿಗೆ ನಿರಂತರ ಶಿಕ್ಷಣ ಮತ್ತು ನುರಿತ ತರಬೇತಿ ಅಗತ್ಯವೆಂದು ಹೇಳಿದರು.

ಸಮಾರೋಪ ಸಮಾರಂಭದ ಮುಖ್ಯ ಅತಿಥಿಯಾದ ಡಿ ಹೆಚ್ ಓ ಮಾನಸಿಕ ಆರೋಗ್ಯದ ಜಿಲ್ಲಾ ಕಾರ್ಯಕ್ರಮಾಧಿಕಾರಿಯಾದ ಡಾ.ಕಿರಣ್ ರವರು ಮಾತನಾಡಿ ಮಾನಸಿಕ ಕಾಯಿಲೆಗೆ ಒಳಗಾಗಿರುವವರ ಸಂಖ್ಯೆ ಹಾಗೂ ಮಾನಸಿಕ ಆರೋಗ್ಯವನ್ನು ನಿರ್ವಹಣೆ ಮಾಡುವವರ ನಡುವಿನ ಅಂತರವು ಬಹಳಷ್ಟಿದೆ ಹಾಗೂ ಕೇವಲ ಬೆರಳೆಣಿಕೆಯಷ್ಟು ಮಾನಸಿಕ ಕಾಯಿಲೆಗಳಷ್ಟೇ ಆಸ್ಪತ್ರೆಗಳಲ್ಲಿ ಗುರುತಿಸಲಾಗುತ್ತಿದೆ. ಇನ್ನಿತರ ಬಹಳಷ್ಟು ಮಾನಸಿಕ ಕಾಯಿಲೆಗಳು ಬೆಳಕಿಗೆ ಬರುತ್ತಿಲ್ಲ. ಈ ಸಮಸ್ಯೆಗಳನ್ನು ನಿವಾರಿಸಲು ಖಾಸಗಿ ಹಾಗೂ ಸರ್ಕಾರಿ ಶಾಖೆಗಳು ಒಟ್ಟಾಗಿ ಸೇರಿ ವೃತ್ತಿ ಪರರಿಗೆ ಈ ರೀತಿಯ ಇನ್ನಷ್ಟು ಕೌಶಲ್ಯಾಭಿವೃದ್ಧಿ ಕಾರ್ಯಗಾರವನ್ನು ಹಮ್ಮಿಕೊಳ್ಳಬೇಕು ಎಂದು ಸೂಚಿಸಿದರು.

Kateel Ashok Pai Memorial Institute ಕಾರ್ಯಕ್ರಮದಲ್ಲಿ ಸ್ನಾತಕೋತ್ತರ ವಿಭಾಗದ ಸಂಯೋಜಕರಾದ ಸಿಸ್ಟರ್ ಮಾರಿ ಇವ್ಲಿನ್, ಕಟೀಲ್ ಅಶೋಕ್ ಪೈ ಪೂರಕ ಅರೋಗ್ಯ ವಿಜ್ಞಾನಗಳ ಸಂಸ್ಥೆಯ ಸಹಾಯಕ ಪ್ರಾಧ್ಯಾಪಕರುಗಳಾದ ಹೆಚ್.ಎಂ.ರಕ್ಷಿತ್, ಕಾರ್ಯಕ್ರಮದ ಸಂಯೋಜಕ ಕಾರ್ಯದರ್ಶಿಯಾದ ಶ್ರೀ ದೇವಿ ಹಾಗೂ ಜಂಟಿ ಕಾರ್ಯದರ್ಶಿಯಾದ ಅನನ್ಯ, ಸಂಯೋಜಕ ಸಮಿತಿಯ ಸದಸ್ಯರಾದ ಹಾಗೂ ಎಂಫಿಲ್ ನಾ ಪ್ರಶಿಕ್ಷಣಾರ್ಥಿಗಳಾದ ಅನುಪಮಾ ಹಾಗೂ ಕೆ.ಟಿ.ಶ್ವೇತಾ ಮತ್ತು ಶಿಬಿರಾರ್ಥಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Hassan Manikya Prakashana ಶಿವಮೊಗ್ಗದ ಕವಿ ಶಿ.ಜು.ಪಾಶಾ ಅವರಿಗೆ “ಜನ್ನ ಕಾವ್ಯ ಪ್ರಶಸ್ತಿ”

Hassan Manikya Prakashana ಹಾಸನದ ಮಾಣಿಕ್ಯ ಪ್ರಕಾಶನ(ರಿ) ರಾಜ್ಯಮಟ್ಟದ ಜನ್ನ ಕಾವ್ಯ...

Vajreshwari Co Operative Society ಶ್ರೀವಜ್ರೇಶ್ವರಿ ಸಹಕಾರ ಸಂಘದಿಂದ ಪ್ರತಿಭಾ ಪುರಸ್ಕಾರ

Vajreshwari Co Operative Society ಶಿವಮೊಗ್ಗ ನಗರದ ಹೊಸಮನೆ ಬಡಾವಣೆಯ ಶ್ರೀ...

Inner Wheel Shivamogga ದುರ್ಬಲರಿಗೆ ನೆರವು ನೀಡಿದಾಗ ಸೇವೆ ಸಾರ್ಥಕ- ಶಿಲ್ಪ ಗೋಪಿನಾಥ್

Inner Wheel Shivamogga ನಾವು ಮಾಡುವ ಸೇವೆ ಸಾರ್ಥಕಗೊಳ್ಳಬೇಕಾದರೆ...

National Education Committee ಬೆಳಗುತ್ತಿ & ಮಲ್ಲಿಗೇನಹಳ್ಳಿಯಲ್ಲಿ ಗಮನ ಸೆಳೆದ ಎನ್.ಎಸ್.ಎಸ್. ವಾರ್ಷಿಕ ಶಿಬಿರ

National Education Committee ಎನ್ ಎಸ್ ಎಸ್ ವಾರ್ಷಿಕ ವಿಶೇಷ ಶಿಬಿರದಲ್ಲಿರಂಗಪ್ರಯೋಗದ...