Monday, February 2, 2026
Monday, February 2, 2026

Maha Shivaratri ಹರ ಹರ ಮಹಾದೇವ

Date:

Maha Shivaratri ಹಿಂದೂಗಳ ಪ್ರಮುಖ ಹಬ್ಬಗಳ ಪೈಕಿ ಮಹಾ ಶಿವರಾತ್ರಿ ಕೂಡಾ ಒಂದು.

ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ಮಾಘ ಮಾಸದ ಕೃಷ್ಣ ಪಕ್ಷದ ಚತುರ್ದಶಿ ತಿಥಿಯ ದಿನ ಶಿವನನ್ನು ಪೂಜಿಸುವ ಸಂಪ್ರದಾಯವಿದೆ.

ಶಿವರಾತ್ರಿ ದಿನ ಜಗತ್ತಿನಾದ್ಯಂತ ಹಿಂದೂಗಳು ಈಶ್ವರನನ್ನು ಆರಾಧಿಸುತ್ತಾರೆ. ಮಹಾಶಿವರಾತ್ರಿಯ ದಿನ ಶಿವನ ಭಕ್ತರು ಉಪವಾಸ ಕೈಗೊಳ್ಳುವ ಮೂಲಕ, ಧ್ಯಾನ , ಜಾಗರಣೆಗಳನ್ನು ಮಾಡುವ ಮೂಲಕ ಶಿವನನ್ನು ಆರಾಧಿಸುತ್ತಾರೆ.

ಈ ದಿನ ಶಿವನ ದೇಗುಲದಲ್ಲಿ ಭಕ್ತರು ರಾತ್ರಿಯಿಡೀ ಜಾಗರಣೆ ಕೈಗೊಂಡು ಈಶ್ವರನನ್ನು ಆರಾಧಿಸುತ್ತಾರೆ.

ಮಹಾ ಶಿವರಾತ್ರಿಯ ದಿನದಂದು ಶಿವನನ್ನು ಆರಾಧಿಸುವವರು ದಿನವಿಡೀ ಉಪವಾಸ ಇರುತ್ತಾರೆ. ಇದು ಮಹಿಳೆಯರಿಗೆ ಅತ್ಯಂತ ವಿಶೇಷವಾದ ಹಬ್ಬವಾಗಿದೆ. ವಿವಾಹಿತ ಮಹಿಳೆಯರು ಈ ದಿನದಂದು ಶಿವನ ಬಳಿಯಲ್ಲಿ ತಮ್ಮ ಪತಿಯ ದೀರ್ಘಾಯುಷ್ಯಕ್ಕಾಗಿ ಪ್ರಾರ್ಥಿಸುತ್ತಾರೆ. ಅವಿವಾಹಿತೆಯರು ಭವಿಷ್ಯದಲ್ಲಿ ತಮಗೆ ಶಿವನಂತಾ ಪತಿ ಸಿಗಲಿ ಎಂದು ಬೇಡಿಕೊಳ್ಳುತ್ತಾರೆ.

Maha Shivaratri ಮಹಾ ಶಿವರಾತ್ರಿಯಂದು ದೇಗುಲಗಳಲ್ಲಿ ವಿವಿಧ ಆಚರಣೆಗಳನ್ನು ಮಾಡಲಾಗುತ್ತದೆ. ಶಿವನು ಅಭಿಷೇಕಪ್ರಿಯನಾದ್ದರಿಂದ ನಾನಾ ಅಭಿಷೇಕ ಮಾಡಲಾಗುತ್ತದೆ. ಹಾಲು, ಜೇನುತುಪ್ಪ, ಹೂವುಗಳು ಹಾಗೂ ಬಿಲ್ವ ಪತ್ರೆಯನ್ನು ಶಿವನಿಗೆ ಅರ್ಪಿಸಲಾಗುತ್ತದೆ. ಈ ದಿನ ಶಿವನ ಭಕ್ತರು ಏನನ್ನೂ ತಿನ್ನುವುದು ಅಥವಾ ಕುಡಿಯುವುದು ಮಾಡುವುದಿಲ್ಲ. ಕೆಲವರು ರಾತ್ರಿಯಿಡೀ ಜಾಗರಣೆಯಿದ್ದು ಶಿವನ ಧ್ಯಾನ ಮಾಡುತ್ತಿರುತ್ತಾರೆ, ಈ ದಿನ ಶಿವನ ದೇಗುಲ ಕಿಕ್ಕಿರಿದು ತುಂಬಿರುತ್ತದೆ. ಮಹಾ ಮೃತ್ಯುಂಜಯ ಮಂತ್ರ ಹಾಗೂ ಶಿವ ತಾಂಡವ ಸ್ತೋತ್ರದಂತಹ ಮಂತ್ರಗಳನ್ನು ಪಠಿಸುವ ಮೂಲಕ ಮಹಾದೇವನ ಕೃಪೆಗೆ ಭಕ್ತರು ಪಾತ್ರರಾಗುತ್ತಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...

MESCOM ಹೊಳೆಹೊನ್ನೂರು ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಹೊಳೆಹೊನ್ನೂರು ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಫೆ. 03 ರಂದು ಬೆಳಿಗ್ಗೆ...

Shivamogga Police ವ್ಯಕ್ತಿ ಮೇಲೆ ಮಾರಣಾಂತಿಕ ಹಲ್ಲೆ, ಮೂವರಿಗೆ 5 ವರ್ಷ ಜೈಲು ಶಿಕ್ಷೆ

Shivamogga Police ಮಾರಣಾಂತಿಕವಾಗಿ ಹಲ್ಲೆ ಮಾಡಿ ಹಾಗೂ ಅವಾಚ್ಯ ಶಬ್ದಗಳಿಂದ ಬೈದು...