Wednesday, March 25, 2026
Wednesday, March 25, 2026

State Education Department ಕಡಸೂರು ನಾಗರಹಳ್ಳಿ ಶಾಲೆಯ ಕು.ಕವನಾಗೆ ರಾಷ್ಟ್ರೀಯ ಆವಿಷ್ಕಾರ ಅಭಿಯಾನ ಪುರಸ್ಕಾರ

Date:

State Education Department ರಾಜ್ಯ ಶಿಕ್ಷಣ ಇಲಾಖೆಯು ’ರಾಷ್ಟೀಯ ಆವಿಷ್ಕಾರ ಅಭಿಯಾನ’ ಕಾರ್ಯಕ್ರಮದಡಿಯಲ್ಲಿ ಶಾಲಾ ಹಂತದಿಂದ ರಾಜ್ಯಮಟ್ಟದವರೆಗೂ ನಡೆಸುವ ರಸಪ್ರಶ್ನೆ ಕಾರ್ಯಕ್ರಮದ ಜ್ಯೂನಿಯರ್‌ ವಿಭಾಗದಲ್ಲಿ ಕಡಸೂರು ನಾಗರಹಳ್ಳಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 6ನೇ ತರಗತಿ ಓದುತ್ತಿರುವ ಕುಮಾರಿ ಕವನ ಎಸ್‌.ಕೆ, ಬೆಂಗಳೂರಿನಲ್ಲಿ ನಡೆದ ವಿಭಾಗ ಮಟ್ಟದಲ್ಲಿ ನಡೆದ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ ಗಳಿಸಿ ತಾಲ್ಲೂಕಿಗೆ, ಜಿಲ್ಲೆಗೆ ಕೀರ್ತಿ ತಂದಿದ್ದಾಳೆ.

’ರಾಷ್ಟೀಯ ಆವಿಷ್ಕಾರ ಅಭಿಯಾನ’ ಕಾರ್ಯಕ್ರಮದ ರಸಪ್ರಶ್ನೆ ಸ್ಪರ್ಧೆಯಲ್ಲಿ ಭಾಗವಹಿಸಿದ್ದ ಕವನ ತಾಲ್ಲೂಕು ಮಟ್ಟದ ಆನ್ಲೈನ್ ರಸಪ್ರಶ್ನೆಯಲ್ಲಿ ಪ್ರಥಮ ಸ್ಥಾನ ಪಡೆದು, ಜಿಲ್ಲಾ ಮಟ್ಟದ ಮುಖಾಮುಖಿಯಲ್ಲಿ ಪ್ರಥಮ ಸ್ಥಾನ ಗಳಿಸಿ ಬೆಂಗಳೂರಿನಲ್ಲಿ ನಡೆಯುವ ವಿಭಾಗ ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಳು. ವಿಭಾಗ ಮಟ್ಟದಲ್ಲಿ ಸ್ಪರ್ಧಿಸಿ ದ್ವಿತೀಯ ಸ್ಥಾನ ಪಡೆದ ಕವನ ಗ್ರಾಮೀಣ ಭಾಗದ ಸರ್ಕಾರಿ ಶಾಲಾ ಮಕ್ಕಳಿಗೆ ನಿಜವಾದ ಅರ್ಥದಲ್ಲಿ ಸ್ಫೂರ್ತಿಯಾಗಿದ್ದಾಳೆ.

State Education Department ಇವಳ ಸಾಧನೆಗೆ ಹೊಸನಗರ ತಾಲ್ಲೂಕು ಶಿಕ್ಷಣ ಇಲಾಖೆ ಅಧಿಕಾರಿಗಳು, ಶಾಲಾ ಸಿಬ್ಬಂದಿ ವರ್ಗ, ಎಸ್‌ಡಿಎಂಸಿ, ಗ್ರಾಮ ಪಂಚಾಯ್ತಿ ಹುಂಚ, ಪೋಷಕರು, ಅಡುಗೆ ಸಿಬ್ಬಂದಿ ವರ್ಗದವರು ಅಭಿನಂದನೆ ಸಲ್ಲಿಸಿದ್ದಾರೆ.

ಕವನ ತಾಲ್ಲೂಕು ಮಟ್ಟದಲ್ಲಿ ನಡೆದ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಗಳಿಸಿ 3,000 ರೂಪಾಯಿ, ಜಿಲ್ಲಾ ಹಂತದಲ್ಲಿ ಪ್ರಥಮ ಸ್ಥಾನ ಗಳಿಸಿ 5,000 ರೂಪಾಯಿ ಹಾಗೂ ವಿಭಾಗ ಮಟ್ಟದಲ್ಲಿ ದ್ವಿತೀಯ ಸ್ಥಾನ ಗಳಿಸಿ 5000 ರೂಪಾಯಿ ನಗದನ್ನು ಬಹುಮಾನವಾಗಿ ಗಳಿಸುವುದರೊಂದಿಗೆ, ಒಟ್ಟು ಬಹುಮಾನ ಮೊತ್ತವಾಗಿ 13,000 ರೂಪಾಯಿಗಳನ್ನು ಗೆದ್ದಿರುತ್ತಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

CM Siddharamaih ಬಿಜೆಪಿ ಒಡ್ಡುವ ಆಸೆ ಆಮಿಷಗಳಿಗೆ ಒಳಗಾಗಬೇಡಿ- ಸಿದ್ಧರಾಮಯ್ಯ

CM Siddharamaih ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ...

National Horticulture Mission Scheme ರಾಷ್ಟ್ರೀಯ ತೋಟಗಾರಿಕೆ ಮಿಷನ್ ಯೋಜನೆಯಡಿ ಪ. ಜಾ./ ಪ. ಪಂ. ರೈತರಿಂದ ಅರ್ಜಿ ಅಹ್ವಾನ

National Horticulture Mission Scheme 2025-26ನೇ ಸಾಲಿನ ರಾಷ್ಟ್ರೀಯ ತೋಟಗಾರಿಕೆ ಮಿಷನ್...

S.N. Channabasappa ಮತಪತ್ರ ಪದ್ಧತಿ ಜಾರಿಗೆ ತರುತ್ತಿರುವ ಸರ್ಕಾರದ ನಿರ್ಧಾರಕ್ಕೆ ಸದನದಲ್ಲಿ ಶಾಸಕ ಎಸ್.ಎನ್. ಚನ್ನಬಸಪ್ಪ ತೀವ್ರ ವಿರೋಧ

S.N. Channabasappa ಆಧುನಿಕ ತಂತ್ರಜ್ಞಾನದ ಯುಗದಲ್ಲಿ ಚುನಾವಣಾ ಪ್ರಕ್ರಿಯೆಯನ್ನು ಮತ್ತಷ್ಟು ಡಿಜಿಟಲೀಕರಣಗೊಳಿಸುವ...

MESCOM ಸಾಗರ : ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಸಾಗರ ಮೆಸ್ಕಾಂ ಗ್ರಾಮೀಣ ಉಪವಿಭಾಗ ಕಛೇರಿಯಲ್ಲಿ ಮಾ 26 ರಂದು...