Sunday, August 2, 2026
Sunday, August 2, 2026

State Education Department ಕಡಸೂರು ನಾಗರಹಳ್ಳಿ ಶಾಲೆಯ ಕು.ಕವನಾಗೆ ರಾಷ್ಟ್ರೀಯ ಆವಿಷ್ಕಾರ ಅಭಿಯಾನ ಪುರಸ್ಕಾರ

Date:

State Education Department ರಾಜ್ಯ ಶಿಕ್ಷಣ ಇಲಾಖೆಯು ’ರಾಷ್ಟೀಯ ಆವಿಷ್ಕಾರ ಅಭಿಯಾನ’ ಕಾರ್ಯಕ್ರಮದಡಿಯಲ್ಲಿ ಶಾಲಾ ಹಂತದಿಂದ ರಾಜ್ಯಮಟ್ಟದವರೆಗೂ ನಡೆಸುವ ರಸಪ್ರಶ್ನೆ ಕಾರ್ಯಕ್ರಮದ ಜ್ಯೂನಿಯರ್‌ ವಿಭಾಗದಲ್ಲಿ ಕಡಸೂರು ನಾಗರಹಳ್ಳಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 6ನೇ ತರಗತಿ ಓದುತ್ತಿರುವ ಕುಮಾರಿ ಕವನ ಎಸ್‌.ಕೆ, ಬೆಂಗಳೂರಿನಲ್ಲಿ ನಡೆದ ವಿಭಾಗ ಮಟ್ಟದಲ್ಲಿ ನಡೆದ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ ಗಳಿಸಿ ತಾಲ್ಲೂಕಿಗೆ, ಜಿಲ್ಲೆಗೆ ಕೀರ್ತಿ ತಂದಿದ್ದಾಳೆ.

’ರಾಷ್ಟೀಯ ಆವಿಷ್ಕಾರ ಅಭಿಯಾನ’ ಕಾರ್ಯಕ್ರಮದ ರಸಪ್ರಶ್ನೆ ಸ್ಪರ್ಧೆಯಲ್ಲಿ ಭಾಗವಹಿಸಿದ್ದ ಕವನ ತಾಲ್ಲೂಕು ಮಟ್ಟದ ಆನ್ಲೈನ್ ರಸಪ್ರಶ್ನೆಯಲ್ಲಿ ಪ್ರಥಮ ಸ್ಥಾನ ಪಡೆದು, ಜಿಲ್ಲಾ ಮಟ್ಟದ ಮುಖಾಮುಖಿಯಲ್ಲಿ ಪ್ರಥಮ ಸ್ಥಾನ ಗಳಿಸಿ ಬೆಂಗಳೂರಿನಲ್ಲಿ ನಡೆಯುವ ವಿಭಾಗ ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಳು. ವಿಭಾಗ ಮಟ್ಟದಲ್ಲಿ ಸ್ಪರ್ಧಿಸಿ ದ್ವಿತೀಯ ಸ್ಥಾನ ಪಡೆದ ಕವನ ಗ್ರಾಮೀಣ ಭಾಗದ ಸರ್ಕಾರಿ ಶಾಲಾ ಮಕ್ಕಳಿಗೆ ನಿಜವಾದ ಅರ್ಥದಲ್ಲಿ ಸ್ಫೂರ್ತಿಯಾಗಿದ್ದಾಳೆ.

State Education Department ಇವಳ ಸಾಧನೆಗೆ ಹೊಸನಗರ ತಾಲ್ಲೂಕು ಶಿಕ್ಷಣ ಇಲಾಖೆ ಅಧಿಕಾರಿಗಳು, ಶಾಲಾ ಸಿಬ್ಬಂದಿ ವರ್ಗ, ಎಸ್‌ಡಿಎಂಸಿ, ಗ್ರಾಮ ಪಂಚಾಯ್ತಿ ಹುಂಚ, ಪೋಷಕರು, ಅಡುಗೆ ಸಿಬ್ಬಂದಿ ವರ್ಗದವರು ಅಭಿನಂದನೆ ಸಲ್ಲಿಸಿದ್ದಾರೆ.

ಕವನ ತಾಲ್ಲೂಕು ಮಟ್ಟದಲ್ಲಿ ನಡೆದ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಗಳಿಸಿ 3,000 ರೂಪಾಯಿ, ಜಿಲ್ಲಾ ಹಂತದಲ್ಲಿ ಪ್ರಥಮ ಸ್ಥಾನ ಗಳಿಸಿ 5,000 ರೂಪಾಯಿ ಹಾಗೂ ವಿಭಾಗ ಮಟ್ಟದಲ್ಲಿ ದ್ವಿತೀಯ ಸ್ಥಾನ ಗಳಿಸಿ 5000 ರೂಪಾಯಿ ನಗದನ್ನು ಬಹುಮಾನವಾಗಿ ಗಳಿಸುವುದರೊಂದಿಗೆ, ಒಟ್ಟು ಬಹುಮಾನ ಮೊತ್ತವಾಗಿ 13,000 ರೂಪಾಯಿಗಳನ್ನು ಗೆದ್ದಿರುತ್ತಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Raghavendra ₹ 6.400 ಕೋಟಿ ವೆಚ್ಚದ ಶಿವಮೊಗ್ಗ- ತುಮಕೂರು ಚತುಷ್ಪಥ ರಸ್ತೆ ಮುಂದಿನ ಮಾರ್ಚ್ ಗೆ ಸಿದ್ಧ- ಬಿ.ವೈ.ರಾಘವೇಂದ್ರ

B.Y. Raghavendra ಮಲೆನಾಡು ಹಾಗೂ ರಾಜಧಾನಿ ಬೆಂಗಳೂರು ನಡುವಿನ ಸಂಪರ್ಕವನ್ನು ಕ್ರಾಂತಿಕಾರಕವಾಗಿ...

S. N. Channabasappa ಬಡಾವಣೆಗಳಿಗೆ ಮೂಲಭೂತ ಸೌಕರ್ಯ ಒದಗಿಸುವುದು ನಮ್ಮ ಮುಖ್ಯ ಕರ್ತವ್ಯ- ಎಸ್.ಎನ್.ಚನ್ನಬಸಪ್ಪ

S. N. Channabasappa ಶಿವಮೊಗ್ಗ ನಗರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಗೆ ಒಳಪಡುವ...

Rotary Club of Shivamogga ಮಕ್ಕಳಲ್ಲಿ ರೋಟರಿ ಸಂಸ್ಥೆ ನಾಯಕತ್ವ ಗುಣಗಳನ್ನ ಬೆಳೆಸುತ್ತದೆ- ಡಿ.ಕೆ.ನರಹರಿ

Rotary Club of Shivamogga ರೋಟರಿ ಸಂಸ್ಥೆಯು ಮಕ್ಕಳಿಗೆ ಶಾಲಾ ಹಂತದಲ್ಲಿಯೇ...

B.Y. Raghavendra ಹವಾಮಾನ ಆಧಾರಿತ ಬೆಳೆವಿಮೆ: ಅರ್ಜಿ ಸಲ್ಲಿಕೆ ಅಂತಿಮ ದಿನಾಂಕ ವಿಸ್ತರಿಸಿ- ಸಂಸದ ಬಿ.ವೈ‌.ರಾಘವೇಂದ್ರ

B.Y. Raghavendra ಮುಂಗಾರು ಹಂಗಾಮಿನಲ್ಲಿ ರಾಜ್ಯಾದ್ಯಂತ ವಾಡಿಕೆಗಿಂತ ಶೇ.34 ರಷ್ಟು ಮಳೆ...