Saturday, October 5, 2024
Saturday, October 5, 2024

Uttara Kannada ಶಿರಸಿ ತಾಲ್ಲೂಕಿನ ಗಣೇಶನಗರದಲ್ಲಿ ಗಂಗೆಯನ್ನ ತಂದ ಗೌರಕ್ಕ

Date:

Uttara Kannada ಹಲವು ಕ್ಷೇತ್ರಗಳಲ್ಲಿ ಮಹಿಳೆಯರ ಸಾಧನೆಗೈದಿರುವ ಸಾಧನೆ ಮಾಡುತ್ತಿರುವವರೂ ಇದ್ದಾರೆ. ಈ ಮಧ್ಯೆ ಮಹಿಳೆಯೊಬ್ಬರು ಅಂಗನವಾಡಿ ಮಕ್ಕಳಿಗೋಸ್ಕರ ಬಾವಿ ತೋಡಿ ನೀರು ತರಿಸುವ ಮೂಲಕ ಎಲ್ಲರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ.

ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ಗಣೇಶನಗರದಲ್ಲಿ ಅಂಗನವಾಡಿ ಮಕ್ಕಳಿಗೋಸ್ಕರ ಕಳೆದ ಜನವರಿ 30ನೇ ತಾರೀಕಿನಿಂದ ಗೌರಿ ನಾಯ್ಕ ಅವರು ಅಂಗನವಾಡಿಯ ಹಿಂಭಾಗದ ಜಾಗದಲ್ಲಿ ಯಾರ ಸಹಾಯವನ್ನೂ ಪಡೆಯದೇ ಬಾವಿ ತೋಡಿದ್ದಾರೆ. ಇವರ ಏಕಾಂಗಿ ಪ್ರಯತ್ನದಿಂದ ಇದೀಗ 45 ಅಡಿಯಲ್ಲಿ ನೀರು ಕಂಡು ಗೌರಿ ನಾಯಕ್ ಭಾವುಕರಾಗಿದ್ದಾರೆ.

ಹೌದು, ಬೇಸಿಗೆಯ ಹಿನ್ನೆಲೆಯಲ್ಲಿ ಗೌರಿ ನಾಯಕ್ ಕಳೆದ ಜನವರಿ 30ರಂದು ಅಂಗನವಾಡಿ ಮಕ್ಕಳಿಗೋಸ್ಕರ ಬಾವಿ ತೋಡಲು ಆರಂಭಿಸಿದ್ದರು. ಇದೀಗ ಏಕಾಂಗಿಯಾಗಿ ಭಾವಿತೋಡಿ ಕೊನೆಗೂ ನೀರು ತರಿಸಿದ ಗೌರಿ ನಾಯಕ್ 45 ಅಡಿ ಆಳದಲ್ಲಿ ನೀರು ಕಂಡು ಬಾವುಕರಾಗಿದ್ದಾರೆ. ಗಣೇಶನಗರದಲ್ಲಿ ಅಂಗನವಾಡಿ ಮಕ್ಕಳಿಗಾಗಿ ಗೌರಿ ಬಾವಿ ತೋಡಿದ್ದಾರೆ.

ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ಗಣೇಶನಗರದಲ್ಲಿ ಅಂಗನವಾಡಿ ಮಕ್ಕಳಿಗೆ ಎಂದು ಗೌರಿ ಬಾವಿ ತೋಡಿದ್ದಾರೆ.

Uttara Kannada ಗೌರಿ ನಾಯಕ್ ಮಕ್ಕಳಿಗಾಗಿ ಬಾವಿ ತೋಡುತ್ತಿದ್ದರು. ಆದರೆ ಪರವಾನಿಗೆ ಪತ್ರ ಇಲ್ಲವೆಂದು ಅಧಿಕಾರಿಗಳು ಗೌರಿ ಅವರಿಗೆ ಬಾವಿ ತೋಡಲು ಅಡ್ಡಿಪಡಿಸಿದ್ದರು. ಅನುಮತಿ ಪತ್ರ ಇಲ್ಲವೆಂದು ಅಧಿಕಾರಿಗಳು ಹಲಗೆ ಹಾಕಿ ಬಾವಿಯನ್ನು ಮುಚ್ಚಿದ್ದರು. ಬಳಿಕ ಉತ್ತರ ಕನ್ನಡ ಜಿಲ್ಲಾಧಿಕಾರಿ ಬಾವಿ ತೊಡಲು ಗೌರಿಗೆ ಅನುಮತಿ ನೀಡಿದ್ದರು. ಅದರ ಪ್ರತಿಫಲವಾಗಿ ಇಂದು 45 ಅಡಿ ಆಳದಲ್ಲಿ ನೀರು ಬಂದಿದ್ದು ಇದನ್ನು ಕಂಡು ಗೌರಿ ಭಾವುಕರಾಗಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

MESCOM ಅಕ್ಟೋಬರ್ 7 ರಂದು ಆಲ್ಕೊಳ‌ ಸುತ್ತಮುತ್ತ ವಿದ್ಯುತ್ ಸರಬರಾಜು ಇರುವುದಿಲ್ಲ

MESCOM ಶಿವಮೊಗ್ಗ ಅಕ್ಟೋಬರ್ 05 (ಕರ್ನಾಟಕ ವಾರ್ತೆ): ಶಿವಮೊಗ್ಗ...

Nehru Stadium Shimoga ಪ್ರಾಥಮಿಕ ಶಾಲಾಮಕ್ಕಳ ಕ್ರೀಡಾಕೂಟ ಉದ್ಘಾಟನೆ

Nehru Stadium Shimoga ನೆಹರು ಕ್ರೀಡಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಉಪನಿರ್ದೇಶಕರ...

Shimoga Dasara 2024 ಶಿವಮೊಗ್ಗ ರಂಗದಸರಾದಲ್ಲಿ ಅ.5 ರಿಂದ ನಾಟಕ ಪ್ರದರ್ಶನಗಳ ಸುಗ್ಗಿ

Shimoga Dasara 2024 ಈ ಬಾರಿ ಶಿವಮೊಗ್ಗ ಮಹಾನಗರ ಪಾಲಿಕೆಯು ಆಯೋಜನೆ...

Shivamogga News ಕೆರೆ,ಕಟ್ಟೆ,ಹಳ್ಳ ಜಮೀನು ಇತರೆ ಸರ್ಕಾರದ ಸ್ವತ್ತು ಒತ್ತುವರಿ ಗಮನಕ್ಕೆ ಬಂದಾಕ್ಷಣ ಕ್ರಮ ಕೈಗೊಳ್ಳಿ-ನ್ಯಾ.ಬಿ.ಎ.ಪಾಟೀಲ್

Shivamogga News ಸರ್ಕಾರದ ಸ್ವತ್ತಿನ ಸಂರಕ್ಷಣೆ ನಮ್ಮೆಲ್ಲರ ಆದ್ಯ ಕರ್ತವ್ಯವಾಗಿದ್ದು...