Monday, February 2, 2026
Monday, February 2, 2026

Siddaramaiah ಸೋಲಾರ್ ಪಂಪ್ ಸೆಟ್ & ಪ್ಯಾನಲ್ ಗಳಿಗೆ ರಾಜ್ಯ ಸರ್ಕಾರದ ಸಬ್ಸಿಡಿ ಹೆಚ್ಚಳ- ಸಿದ್ಧರಾಮಯ್ಯ

Date:

Siddaramaiah ಮುಖ್ಯಮಂತ್ರಿ ಸಿದ್ದರಾಮಯ್ಯ
ಅವರು ಜಿ.ಕೆ.ವಿ.ಕೆ ಯಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ರೈತ ಸೌರಶಕ್ತಿ ಮೇಳ ಉದ್ಘಾಟಿಸಿ ಮಾತನಾಡಿದರು.

ದೇಶದಲ್ಲೇ ಅತಿ ಹೆಚ್ಚು ಒಣಭೂಮಿ ಹೊಂದಿರುವ ಎರಡನೇ ರಾಜ್ಯ ಕರ್ನಾಟಕ. ಹೀಗಾಗಿ ಒಣಭೂಮಿಯ ಕೃಷಿಗೆ ಆದ್ಯತೆ ನೀಡಿ ಸಂಶೋಧನೆಗಳು ನಡೆಯಬೇಕು. ಜನಸಂಖ್ಯೆ ಹೆಚ್ಚಾಗಿ ರೈತರ ಬೆಳೆಗಳ ಇಳುವರಿ ಪ್ರಮಾಣ ಕಡಿಮೆ ಆಗುತ್ತಿದೆ. ಆದ್ದರಿಂದ ಸಮಗ್ರ ಕೃಷಿಗೆ ಹೆಚ್ಚಿನ ಬೆಂಬಲ ನೀಡುವ ಸಲುವಾಗಿ ಕೃಷಿಯ ಉಪಕಸುಬುಗಳ ಬೆಳವಣಿಗೆಗೆ ಸರ್ಕಾರ ಸಂಪೂರ್ಣ ಸಹಕಾರ, ಬೆಂಬಲ ನೀಡುತ್ತಿದೆ ಎಂದು ಹೇಳಿದರು.

ಪ್ರಸ್ತುತ ರಾಜ್ಯದಲ್ಲಿ 32 ಸಾವಿರ ಮೆಗಾವ್ಯಾಟ್ ವಿದ್ಯುತ್ ಉತ್ಪಾದನೆಯಾಗುತ್ತಿದೆ. ಮುಂದಿನ 7 ವರ್ಷಗಳಲ್ಲಿ 60 ಸಾವಿರ ಮೆಗಾವ್ಯಾಟ್ ವಿದ್ಯುತ್ ಉತ್ಪಾದನೆಯ ಗುರಿ ಹಮ್ಮಿಕೊಂಡಿದ್ದೇವೆ.‌
ಸೋಲಾರ್ ವಿದ್ಯುತ್ ಪಂಪ್ ಸೆಟ್ ಮತ್ತು ಪ್ಯಾನಲ್ ಗಳಿಗೆ ರಾಜ್ಯ ಸರ್ಕಾರದ ಸಬ್ಸಿಡಿ ಮೊತ್ತವನ್ನು ಶೇ.30 ರಿಂದ ಶೇ.50 ಕ್ಕೆ ಹೆಚ್ಚಿಸಿದೆ. ನಮ್ಮ ಸರ್ಕಾರದ ಈ ಸೌಲಭ್ಯವನ್ನು ರೈತರು ಹೆಚ್ಚೆಚ್ಚು ಬಳಸಿಕೊಳ್ಳಬೇಕು.
ಸೌರವಿದ್ಯುತ್ ಬಳಕೆಯನ್ನು ಹೆಚ್ಚೆಚ್ಚು ಮಾಡುವ ಮೂಲಕ ವಿದ್ಯುತ್ ಕೊರತೆಯನ್ನು ನೀಗಿಸಿಕೊಳ್ಳಲು ಸಾಧ್ಯವಾಗುತ್ತದೆ. ಆದ್ದರಿಂದ ಈ ಬಗ್ಗೆ ರೈತರಿಗೆ ಹೆಚ್ಚೆಚ್ಚು ಮನವರಿಕೆ ಮಾಡಿಕೊಡಬೇಕು ಎಂದು ತಿಳಿಸಿದರು.

ಇವತ್ತಿನವರೆಗೂ ನಾಡಿನ ಒಂದು ಕೋಟಿ ಇಪ್ಪತ್ತು ಲಕ್ಷ ಕುಟುಂಬಗಳು ಬಳಸುತ್ತಿರುವ 200 ಯೂನಿಟ್ ವರೆಗಿನ ಉಚಿತ ವಿದ್ಯುತ್ ಗಾಗಿ ರಾಜ್ಯ ಸರ್ಕಾರ ಉಚಿತ ವಿದ್ಯುತ್ತಿನ ಬಾಬ್ತು 5,320 ಕೋಟಿ ರೂಪಾಯಿಯನ್ನು ಇಂಧನ ಇಲಾಖೆಗೆ ನೀಡಿದೆ. ನಮ್ಮ ಜನರಿಗೆ ಜೀರೋ ಬಿಲ್ ಬರುತ್ತಿದೆ. ನಮ್ಮ ಸರ್ಕಾರ ಈ ಜನೋಪಯೋಗಿ ಗ್ಯಾರಂಟಿ ಯೋಜನೆಯನ್ನು ಯಶಸ್ವಿಯಾಗಿ ಮುಂದುವರೆಸಲಿದೆ.
ಸೌರಶಕ್ತಿ ಕ್ಷೇತ್ರದ ಹೊಸ ಆವಿಷ್ಕಾರಗಳು, ತಂತ್ರಜ್ಞಾನಗಳು ರೈತರ ಮನೆ ಬಾಗಿಲಿಗೆ ತಲುಪಿ, ಕೃಷಿಯಲ್ಲಿ ಬಳಕೆ ಆದರೆ ಮಾತ್ರ ಸಾರ್ಥಕತೆ ಬರುತ್ತದೆ. ಕೃಷಿ ಕ್ಷೇತ್ರದಲ್ಲಿ ಹೆಚ್ಚೆಚ್ಚು ಸಂಶೋಧನೆಗಳು ನಡೆದು ಅವು ರೈತರನ್ನು ಮುಟ್ಟಿದಾಗ ಮಾತ್ರ ದೇಶದ ಅಭಿವೃದ್ಧಿ ಸಾಧ್ಯ. ರೈತರು ಹೆಚ್ಚೆಚ್ಚು ಆಹಾರ ಬೆಳೆದು ವಿದೇಶಕ್ಕೂ ರಫ್ತು ಮಾಡುವಂತಾಗಬೇಕು. ಇದಕ್ಕೆ ನಮ್ಮ ಸರ್ಕಾರ ಸಕಲ ನೆರವು ನೀಡುತ್ತದೆ.
ಸೋಲಾರ್ ವಿದ್ಯುತ್ ಗೆ ಕೇಂದ್ರ ಸರ್ಕಾರ ಕೇವಲ ಶೇ30 ರಷ್ಟು ಸಬ್ಸಿಡಿ ನೀಡುತ್ತಿದೆ. ಆದರೆ ರಾಜ್ಯ ಸರ್ಕಾರ ಶೇ.50 ರಷ್ಟು ಸಬ್ಸಿಡಿ Siddaramaiah ನೀಡುತ್ತಿದೆ. ಆದರೂ ಹೆಸರು ಮಾತ್ರ ಮೋದಿಯವರ ಸಬ್ಸಿಡಿ ಎನ್ನುತ್ತಾರೆ ಎಂದು ಹೇಳಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...

MESCOM ಹೊಳೆಹೊನ್ನೂರು ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಹೊಳೆಹೊನ್ನೂರು ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಫೆ. 03 ರಂದು ಬೆಳಿಗ್ಗೆ...

Shivamogga Police ವ್ಯಕ್ತಿ ಮೇಲೆ ಮಾರಣಾಂತಿಕ ಹಲ್ಲೆ, ಮೂವರಿಗೆ 5 ವರ್ಷ ಜೈಲು ಶಿಕ್ಷೆ

Shivamogga Police ಮಾರಣಾಂತಿಕವಾಗಿ ಹಲ್ಲೆ ಮಾಡಿ ಹಾಗೂ ಅವಾಚ್ಯ ಶಬ್ದಗಳಿಂದ ಬೈದು...