Wednesday, December 17, 2025
Wednesday, December 17, 2025

Sri Shivaganga Yoga Kendra  ಶಿವಗಂಗಾ ಯೋಗ ಕೇಂದ್ರದಲ್ಲಿ ವಿಶೇಷ ಮಹಾಶಿವರಾತ್ರಿ

Date:

Sri Shivaganga Yoga Kendra  ಮಹಾಶಿವರಾತ್ರಿ ಪ್ರಯುಕ್ತ ವಿನೋಬನಗರದ ಕಲ್ಲಳ್ಳಿಯ ಶ್ರೀ ಶಿವಗಂಗಾ ಯೋಗಕೇಂದ್ರದಲ್ಲಿ ಶಿವನಿಗೆ ವಿಶೇಷ ಪ್ರಜೆ ಸಲ್ಲಿಸಿ ಪ್ರಾರ್ಥಿಸಲಾಯಿತು.

ಶಿವಗಂಗಾ ಯೋಗಕೇಂದ್ರದ ಎಲ್ಲ ಶಾಖೆಗಳ ಯೋಗಪಟುಗಳು ಭಾಗವಹಿಸಿ ಭಜನೆ ಹಾಗೂ ಭಕ್ತಿ ಗೀತೆಗಳನ್ನು ಹಾಡಿದರು.

ಶಿವಗಂಗಾ ಯೋಗಕೇಂದ್ರದ ಕಾರ್ಯದರ್ಶಿ ಎಸ್.ಎಸ್.ಜ್ಯೋತಿಪ್ರಕಾಶ್ ಮಾತನಾಡಿ, ನಾಡಿನಾದ್ಯಂತ ಮಹಾ ಶಿವರಾತ್ರಿಯನ್ನು ಅತ್ಯಂತ ಸಂಭ್ರಮದಿಂದ ಆಚರಿಸಲಾಗುತ್ತಿದೆ. ನಮ್ಮ ಯೋಗ ಕೇಂದ್ರದಲ್ಲಿ ಶಿವನ ಪ್ರತಿಮೆ ಸ್ಥಾಪಿಸಿದ್ದು, ಎರಡನೆಯ ವರ್ಷದ ಮಹಾಶಿವರಾತ್ರಿಯನ್ನು ಅತ್ಯಂತ ಸಂಭ್ರಮದಿಂದ ಆಚರಿಸುತ್ತಿದ್ದೇವೆ. ಪ್ರತಿ ದಿನ ಶಿವನಾಮಸ್ಮರಣೆಯನ್ನು ಮಾಡುತ್ತ ಸನ್ಮಾರ್ಗದಲ್ಲಿ ನಡೆಯೋಣ ಎಂದು ತಿಳಿಸಿದರು.

ಡಾ ನಾಗರಾಜ ಪರಿಸರ ಮಾತನಾಡಿ, ಶಿವನು ಪ್ರಕೃತಿ ಪ್ರಿಯನು, ಎಲ್ಲ ಪ್ರಾಣಿ ಪಕ್ಷಿಗಳಿಗೂ ಬದುಕುವ ಹಕ್ಕಿದೆ. ಈ ನಿಟ್ಟಿನಲ್ಲಿ ನಾವು ಜಲ ಮಾಲಿನ್ಯ, ಪರಿಸರ ಮಾಲಿನ್ಯ ಮಾಡದೆ ಹೆಚ್ಚು ಹೆಚ್ಚು ಗಿಡ ಮರಗಳನ್ನು ಬೆಳೆಸಿ ಅಂತರ್ಜಲವನ್ನು ಹೆಚ್ಚಿಸುವ ಕಡೆ ಗಮನ ಹರಿಸಬೇಕು ಎಂದು ತಿಳಿಸಿದರು.

ರೋಟರಿ ಮಾಜಿ ಸಹಾಯಕ ಗವರ್ನರ್ ಜಿ. ವಿಜಯಕುಮಾರ್ ಮಾತನಾಡಿ, ನಾವೆಲ್ಲ ಪ್ರತಿದಿನ ಯೋಗ ಮಾಡುವುದರಿಂದ ಆರೋಗ್ಯವಾಗಿದ್ದೇವೆ. ನಾವು ಮಾತ್ರ ಆರೋಗ್ಯವಾಗಿದ್ದರೆ ಸಾಲದು, ಎಲ್ಲರಿಗೂ ಯೋಗ ಮಾಡಲು ತಿಳಿಸಿ ಎಲ್ಲರೂ ಆರೋಗ್ಯವಾಗಿರುವಂತೆ ನೋಡಿಕೊಳ್ಳಬೇಕು ಎಂದು ತಿಳಿಸಿ ಮಹಾಶಿವರಾತ್ರಿಯ ಶುಭಾಶಯಗಳನ್ನು ಕೋರಿದರು.

ಯೋಗ ಕೇಂದ್ರದ ಗುರು ಯೋಗಾಚಾರ್ಯ ರುದ್ರಾರಾಧ್ಯ ನೇತೃತ್ವದಲ್ಲಿ ಪೂಜಾ ಕಾರ್ಯಗಳು ನೆರವೇರಿದವು. ಮುಂದಿನ ದಿನಗಳಲ್ಲಿ ಶಿವರಾತ್ರಿ ಸಂಭ್ರಮವನ್ನು ಮತ್ತಷ್ಟು ವಿಜೃಂಭಣೆಯಿಂದ ಮಾಡೋಣ ಎಂದು ತಿಳಿಸಿದರು.

ವಿವಿಧ ಭಜನಾ ಮಂಡಳಿಯ ಸದಸ್ಯರು ಭಜನೆ ಕಾರ್ಯಕ್ರಮಗಳನ್ನು ನಡೆಸಿಕೊಟ್ಟರು. ಡಾ. ನಾಗರಾಜ ಪರಿಸರ ಅವರ ನೇತೃತ್ವದಲ್ಲಿ ಬೆಳಗಿನವರೆಗೆ ಜಾಗರಣೆಯನ್ನು ಮಾಡಲಾಯಿತು.

Sri Shivaganga Yoga Kendra  ವಿಶೇಷ ಪೂಜೆ ರುದ್ರಾಭಿಷೇಕ ಭಜನೆ ಧ್ಯಾನ ನೆರವೇರಿತು. ಸಾವಿರಕ್ಕೂ ಹೆಚ್ಚು ಯೋಗಪಟುಗಳು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Scheduled Castes Welfare Department ಮಾನಿಸಿಕ ಒತ್ತಡ ನಿರ್ವಹಣೆ ಬಗ್ಗೆ ಆನ್ ಲೈನ್ ಪಾಡ್ ಕ್ಯಾಸ್ಟ್ ವಿಡಿಯೊ ಸಂವಾದ

Scheduled Castes Welfare Department ಶಿವಮೊಗ್ಗ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್,...

Kuvempu University ಶ್ರೀಕಾಂತ್ ಬಿರಾದಾರ್ ಅವರಿಗೆ ಕುವೆಂಪು ವಿವಿ ಡಾಕ್ಟರೇಟ್ ಪದವಿ

Kuvempu University ಮೂಡಲಗಿ ಶ್ರೀ ಶ್ರೀಪಾದಬೋಧ ಸ್ವಾಮೀಜಿ ಸರ್ಕಾರಿ ಪ್ರಥಮ ದರ್ಜೆ...

Karnataka Information Commission ಡಿಸೆಂಬರ್ 20. ರಾಜ್ಯ ಮಾಹಿತಿ ಆಯುಕ್ತರ ಶಿವಮೊಗ್ಗ ಜಿಲ್ಲಾ ಪ್ರವಾಸ ಮಾಹಿತಿ

Karnataka Information Commission ರಾಜ್ಯ ಮಾಹಿತಿ ಆಯೋಗದ ಆಯುಕ್ತರಾದ ರುದ್ರಣ್ಣ ಹರ್ತಿಕೋಟೆ...

B.Y. Raghavendra ವೈಯಕ್ತಿಕವಾಗಿ ಕುಟುಂಬದ ಹಿರಿಯರನ್ನ ಕಳೆದುಕೊಂಡಂತಾಗಿದೆ, ಶಾಮನೂರು ನಿಧನಕ್ಕೆ ಬಿ.ವೈ.ರಾಘವೇಂದ್ರ ಕಂಬನಿ

B.Y. Raghavendra ಅಖಿಲಭಾರತ ವೀರಶೈವ ಲಿಂಗಾಯತ ಮಹಾಸಭಾದ ರಾಷ್ಟ್ರೀಯ ಅಧ್ಯಕ್ಷರು, ಹಿರಿಯ...