Monday, May 4, 2026
Monday, May 4, 2026

RM Manjunath Gowda ಜಿಲ್ಲೆಯ ಗಣ್ಯರಾಗಿ ಕ್ರೀಡೆಗಳ ಅಭಿವೃದ್ಧಿಗೆ ಸದಾ ನಮ್ಮ ಬೆಂಬಲವಿದೆ

Date:

RM Manjunath Gowda ಶಿವಮೊಗ್ಗ ಜಿಲ್ಲಾ ಒಲಪಿಂಕ್ ಅಸೋಸಿಯೇಷನ್ ಶಿವಮೊಗ್ಗ ಜಿಲ್ಲೆಯಲ್ಲಿ ಕ್ರೀಡೆಗಳ ಅಭಿವೃದ್ಧಿಗೆ ಸಹಕಾರವನ್ನು ಕೋರಿದ್ದು, ಜಿಲ್ಲೆಯ ಗಣ್ಯರಾಗಿ ಕ್ರೀಡಾ ಅಭಿವೃದ್ಧಿಗೆ ಸದಾ ನಮ್ಮ ಬೆಂಬಲವಿರುತ್ತದೆ ಎಂದು ನೆಹರೂ ಕ್ರೀಡಾಂಗಣದಲ್ಲಿ ಶಿವಮೊಗ್ಗ ಜಿಲ್ಲಾ ಒಲಪಿಂಕ್ ಅಸೋಸಿಯೇಷನ್ ಅಭಿನಂದನಾ ಸಮಾರಂಭದಲ್ಲಿ ಸನ್ಮಾನ ಸ್ವೀಕರಿಸಿದ ನಂತರ ಶಾಸಕ ಚನ್ನಬಸಪ್ಪ, ಮಲೆನಾಡು ಪ್ರದೇಶ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಅರ್.ಎಂ. ಮಂಜುನಾಥ ಗೌಡ, ಶಿವಮೊಗ್ಗ -ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಸುಂದರೇಶ್ ಒಮ್ಮತದ ಅಭಿಪ್ರಾಯ ವ್ಯಕ್ತಪಡಿಸಿದರು.
ಜಿಲ್ಲಾ ಒಲಪಿಂಕ್ ಅಸೋಸಿಯೇಷನ್ ನೂತನ ಪದಾಧಿಕಾರಿಗಳ ನೇಮಕವಾದ ನಂತರ ಹೊಸ ಸ್ವರೂಪವನ್ನು ಪಡೆದುಕೊಂಡು ಮೊದಲ ಕಾರ್ಯಕ್ರಮವಾಗಿ ಗಣ್ಯರಿಗೆ ಅಭಿನಂದನಾ ಸಮಾರಂಭವನ್ನು ಏರ್ಪಡಿಸಿದ್ದು, ಜಿಲ್ಲೆಯ ಸುಮಾರು ೩೪ ವಿವಿಧ ಕ್ರೀಡಾ ಸಂಸ್ಥೆಗಳು ಜಿಲ್ಲಾ ಒಲಂಪಿಕ್ ಅಸೋಷಿಯೇಷನ್‌ನಲ್ಲಿ ಸ್ಥಾನ ಪಡೆದಿದ್ದು, ಜಿಲ್ಲಾ ಒಲಂಪಿಕ್ ಅಸೋಷಿಯೇಷನ್ ಬಲಿಷ್ಠ ಕ್ರೀಡಾ ಸಂಸ್ಥೆಯಾಗಿದೆ. ಅಧ್ಯಕ್ಷ ಶಶಿ ಮಾತನಾಡಿದರು.
ಈ ಸಂದರ್ಭದಲ್ಲಿ ಕಾರ್ಯಕ್ರಮ ಸಂಚಾಲಕ ಶ್ರೀನಾಥ್, ಒಲಂಪಿಕ್ ಸಂಸ್ಥೆ ಪ್ರಧಾನ ಕಾರ್ಯದರ್ಶಿ ಗಿರೀಶ್, ಖಜಾಂಚಿ ರಾಘವೇಂದ್ರ, ಉಪಾಧ್ಯಕ್ಷ ಮೋಹನ್, ಸಹ್ಯಾದ್ರಿ ಸ್ನೇಹ ಸಂಘದ ಸತೀಶ್ ಕುಮಾರ್ ಶೆಟ್ಟಿ, ಜಿಲ್ಲಾ ದೈಹಿಕ ಶಿಕ್ಷಣ ಅಧಿಕಾರಿ ನಿರಂಜನ್‌ಮೂರ್ತಿ, RM Manjunath Gowda ಸಂಸ್ಥೆಯ ಪದಾಧಿಕಾರಿಗಳಾದ ಕಿರಣ್, ಉದಯ್, ಶಿವಮೊಗ್ಗ ವಿನೋದ್, ಮುಜೀಬ್ ಅಹಮದ್, ರಮೇಶ್, ಮುಂತಾದವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shivamogga Police ಗಾಡಿಕೊಪ್ಪ ಸಂಚಾರ ನಿಯತ್ರಣ ಓಕೆ. ಆದರೆ ಮಿಕ್ಕ ಸಮಸ್ಯೆಗಳಿಗೆ ಪರಿಹಾರವಿಲ್ಲ ಯಾಕೆ?

Shivamogga Police ಗಾಡಿಕೊಪ್ಪ‌,ಶಿವಮೊಗ್ಗದ ಸೆಟಲೈಟ್ ಟೌನ್ ಎಂಬ ವ್ಯಾಪ್ತಿಗೆ ಬೆಳೆದುಬಿಟ್ಟಿದೆ. ಅಲ್ಕಿನ ವೃತ್ತಕ್ಕೆ...

Shivamogga Airport ಶಿವಮೊಗ್ಗಏರ್ ಪೋರ್ಟ್ ನಲ್ಲಿನೈಟ್ ಲ್ಯಾಂಡಿಂಗ್ಕಾಮಗಾರಿಯು ಜೂನ್ ತಿಂಗಳಲ್ಲಿ ಮುಗಿಯಲಿದೆ- ನಂಜಯ್ಯ‌ಮಠ

Shivamogga Airport ಕರ್ನಾಟಕ ರಾಜ್ಯ ಕೈಗಾರಿಕಾ ಮತ್ತು ಮೂಲಸೌಕರ್ಯ ನಿಗಮ ಮಂಡಳಿಯ (ಕೆಎಸ್‌ಐಡಿಸಿ)...

B.Y. Raghavendra ಬಿಎಸ್ ವೈ ಅಭಿಮಾನೋತ್ಸವ ಕೇವಲ ಸಮಾರಂಭವಲ್ಲ.ನಮ್ಮನಾಯಕರಿಗೆ ಸಲ್ಲಿಸುವ ಗೌರವ- ಬಿ.ವೈ.ರಾಘವೇಂದ್ರ.

B.Y. Raghavendra ಇದೇ ಮೇ 9ರಂದು ಚಿತ್ರದುರ್ಗದಲ್ಲಿ ಆಯೋಜಿಸಲಾಗಿರುವ ರೈತ ನಾಯಕ, ಮಾಜಿ...