Thursday, February 5, 2026
Thursday, February 5, 2026

Karnataka Home Guard Recruitment  ಶಿವಮೊಗ್ಗ ಜಿಲ್ಲೆಯಲ್ಲಿ ಗೃಹರಕ್ಷಕದಳಕ್ಕೆ ಭರ್ತಿ

Date:

Karnataka Home Guard Recruitment  ಸರ್ಕಾರದ ಸ್ವತಂತ್ರವಾದ ಶಿಸ್ತುಬದ್ದ ಹಾಗೂ ಸಮವಸ್ತ್ರದಾರಿ ಸ್ವಯಂಸೇವಕರನ್ನು ಒಳಗೊಂಡ ಸ್ವಯಂ ಸೇವಾ ಸಂಸ್ಥೆಯಾದ ಗೃಹರಕ್ಷಕ ದಳದ ಘಟಕಗಳಲ್ಲಿ ಖಾಲಿ ಇರುವ ಪುರುಷ ಮತ್ತು ಮಹಿಳಾ ಗೃಹರಕ್ಷಕರ ಖಾಲಿ ಸ್ಥಾನಗಳನ್ನು ತುಂಬಲು ಆಸಕ್ತರಿಂದ ಅರ್ಜಿ ಆಹ್ವಾನಿಸಲಾಗಿತ್ತು ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳು ಮಾರ್ಚ್ 13 ರ ಬುಧವಾರದಂದು ದಾಖಲೆಗಳ ಸಮೇತ ಹಾಜರಾಗಬೇಕೆಂದು ತಿಳಿಸಲಾಗಿದೆ.

ಹೊಸದಾಗಿ ಅರ್ಜಿ ಸಲ್ಲಿಸುವವರು ನೇರವಾಗಿ ಅರ್ಜಿ ಮತ್ತು ದಾಖಲೆಗಳ ಸಮೇತ ಅಂದೇ ಬರಲು ಕೋರಿದೆ.

ಅರ್ಜಿಗಳು ಸಮಾದೇಷ್ಟರ ಕಾರ್ಯಾಲಯ, ಗೃಹರಕ್ಷಕ ದಳ, ಶಾಂತ ಮ್ಯಾನ್ಶನ್, ಎರಡನೇ ಮಹಡಿ, ಗಾಂಧಿನಗರ ಮುಖ್ಯ ರಸ್ತೆ, ಶಿವಮೊಗ್ಗ ಹಾಗೂ ಕೆಳಗೆ ತಿಳಿಸಲಾದ ಗೃಹರಕ್ಷಕ ದಳ ಘಟಕ/ಉಪ ಘಟಕಗಳ ಕಚೇರಿಗಳಲ್ಲಿ ದೊರೆಯಲಿದೆ.

ಶಿವಮೊಗ್ಗದಲ್ಲಿ ಸಂಪರ್ಕಿಸಬೇಕಾದ ಘಟಕಾಧಿಕಾರಿ ಶೋಭಾ ಮೊ.ಸಂ: -9880705966. ಕುಂಸಿ ಘಟಕಾಧಿಕಾರಿ ಪಿ.ಆರ್. ರಾಘವೇಂದ್ರ -9916573291, ಹಾರನಹಳ್ಳಿ ಘಟಕಾಧಿಕಾರಿ ಸಿ.ಮಧು -9686631428. ಭದ್ರಾವತಿ ಘಟಕಾಧಿಕಾರಿ ಜಗದೀಶ್ -9900283490. ಬಿ.ಆರ್.ಪಿ. ಘಟಕಾಧಿಕಾರಿ ಪಿ.ಮಹೇಶ -9986760750, ಹೊಳೆಹೊನ್ನೂರು ಘಟಕಾಧಿಕಾರಿ ಹೆಚ್.ಎಸ್.ಸುನೀಲ್ ಕುಮಾರ್ -8105840345. ತೀರ್ಥಹಳ್ಳಿ ಘಟಕಾಧಿಕಾರಿ ಹೆಚ್.ಪಿ.ರಾಘವೇಂದ್ರ -9535388472. ಸಾಗರ ಘಟಕಾಧಿಕಾರಿ ಎಂ.ರಾಘವೇಂದ್ರ -9632614031. ಜೋಗ ಘಟಕಾಧಿಕಾರಿ ಡಿ.ಸಿದ್ದರಾಜು -9449699459. ಆನಂದಪುರ ಘಟಕಾಧಿಕಾರಿ ಎಂ.ರಾಘವೇಂದ್ರ -9632614031. ಶಿಕಾರಿಪುರ ಘಟಕಾಧಿಕಾರಿ ಡಾ.ಸಂತೋಷ್ ಎಸ್ ಶೆಟ್ಟಿ -9845402789. ಶಿರಾಳಕೊಪ್ಪ ಘಟಕಾಧಿಕಾರಿ ಸೈಯದ್ ಇಸಾಕ್ -8861492078. ಹೊಸನಗರ ಘಟಕಾಧಿಕಾರಿ ಕೆ.ಅಶೋಕ್ -9241434669. ರಿಪ್ಪನ್‍ಪೇಟೆ ಘಟಕಾಧಿಕಾರಿ ಟಿ.ಶಶಿಧರಾಚಾರ್ಯ -9741477689. ಸೊರಬ ಘಟಕಾಧಿಕಾರಿ ಬಿ.ರೇವಣಪ್ಪ -9945066084.

Karnataka Home Guard Recruitment  ಗೃಹರಕ್ಷಕರಾಗಲು ಭಾರತೀಯ ಪ್ರಜೆಯಾಗಿರಬೇಕು. 19 ವರ್ಷ ಮೇಲ್ಪಟ್ಟು 45 ಕ್ಕಿಂತ ಕಡಿಮೆ ವಯಸ್ಸಿನವರಾಗಿರಬೇಕು. 10ನೇ ತರಗತಿ ಉತ್ತೀರ್ಣರಾಗಿರಬೇಕು. ವೈದ್ಯಕೀಯವಾಗಿ ಸಶಕ್ತರಾಗಿರಬೇಕು. ಪೊಲೀಸ್ ಠಾಣೆಯಲ್ಲಿ ಯಾವುದೇ ಕ್ರಿಮಿನಲ್ ಮೊಕದ್ದಮೆ/ಆರೋಪ ಅಥವಾ ಅಪರಾಧಿ ಎಂದು ನಿರ್ಣಯಿಸಲಾಗಿರದಿದ್ದಲ್ಲಿ/ದಾಖಲಾಗಿರದಿದ್ದಲ್ಲಿ ಅಂತಹವರು ಹಾಗೂ ಘಟಕ ಇರುವ ಸ್ಥಳದಿಂದ ಸುಮಾರು 8 ರಿಂದ 12 ಕಿ.ಮೀ ಅಂತರದಲ್ಲಿರುವವರು ಅರ್ಜಿಗಳನ್ನು ಸಲ್ಲಿಸಬಹುದು ಎಂದು ಗೃಹರಕ್ಷಕದಳದ ಜಿಲ್ಲಾ ಗೌರವ ಸಮಾದೇಷ್ಟರು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shimoga News ವೈಯಕ್ತಿಕ ವಿಮಾ ಮೊತ್ತ ನೀಡಲು ಗ್ರಾಹಕ ಆಯೋಗ ಆದೇಶ.

Shimoga News ವೈಯಕ್ತಿಕ ಅಪಘಾತ ವಿಮಾ ಮೊತ್ತ ನೀಡದೇ ಸೇವಾನ್ಯೂನ್ಯತೆ ಎಸಗಿದ...

Char Dham ಚಾರ್ ಧಾಮ್ ಯಾತ್ರೆ.ಆಸಕ್ತರಿಗೆ ಮಾಹಿತಿ.

Char Dham ಶಿವಮೊಗ್ಗ ಜಿಲ್ಲಾ ಪ್ರವಾಸೋದ್ಯಮ ಅಭಿವೃದ್ಧಿ ವೇದಿಕೆ, ಯೂತ್ ಹಾಸ್ಟೆಲ್...

M.S.Santosh ಗಾಂಧೀಜಿಯವರ ಸತ್ಯ,ಅಹಿಂಸೆ ಶಾಂತಿ ತತ್ವಗಳು ಸ್ವಸ್ಥ ಸಮಾಜ ನಿರ್ಮಾಣಕ್ಕೆ ಪೂರಕ- ನ್ಯಾ.ಎಂ‌.ಎಸ್.ಸಂತೋಷ್.

M.S.Santosh ಮಹಾತ್ಮಾ ಗಾಂಧೀಜಿಯವರು ಸಾರಿದ ಸತ್ಯ, ಅಹಿಂಸೆ, ಶಾಂತಿಯ ತತ್ವಗಳು ಸ್ವಸ್ಥ...