Friday, March 20, 2026
Friday, March 20, 2026

Department of fisheries Karnataka ಮತ್ಸ್ಯವಾಹಿನಿ ತ್ರಿಚಕ್ರ ವಾಹನ ಪರವಾನಗಿ ಆಧಾರದಲ್ಲಿ ಪಡೆಯಲು ಮೀನುಮಾರಾಟಗಾರರಿಂದ ಅರ್ಜಿ ಆಹ್ವಾನ

Date:

Department of fisheries Karnataka ಮೀನುಗಾರಿಕೆ ಇಲಾಖೆ ಶಿವಮೊಗ್ಗ ವತಿಯಿಂದ ಸ್ಥಳೀಯವಾಗಿ ಮೀನು ಮಾರಾಟ ಸೇವೆಯನ್ನು ಪ್ರೋತ್ಸಾಹಿಸಲು ಹಾಗೂ ತಾಜಾ ಮೀನು ಮತ್ತು ಮೀನು ಉತ್ಪನ್ನಗಳ ಮಾರಾಟಕ್ಕಾಗಿ ಕೇಂದ್ರ ಪುರಸ್ಕoತ ‘ಮತ್ಸ್ಯವಾಹಿನಿ” ಯೋಜನೆಯಡಿ ತ್ರಿಚಕ್ರ ವಾಹನಗಳನ್ನು ಪರವಾನಿಗೆ ಆಧಾರದಲ್ಲಿ ಪಡೆಯಲು ಆಸಕ್ತ ಮೀನು ಮಾರಾಟಗಾರರಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಸಲು 30-03-2024 ಕಡೆಯ ದಿನ ಆಗಿದ್ದು, ಶಿವಮೊಗ್ಗ ಜಿಲ್ಲೆಗೆ ಒಟ್ಟು 03 ಭೌತಿಕ ಗುರಿ ಇರುತ್ತದೆ. ವೈಯಕ್ತಿಕ ಪರವಾನಿಗೆದಾರರನ್ನು ಆಯ್ಕೆ ಮಾಡುವಾಗ ಪ.ಜಾ/ಪ.ಪಂಗಡ -01, ಮಹಿಳೆ-01 ಮತ್ತು ಸಾಮಾನ್ಯ-0 ಮೀಸಲಾತಿ ನಿಗದಿಪಡಿಸಲಾಗಿದೆ.

ಈಗಾಗಲೇ ನಿಗಮದ ಫ್ರಾಂಚೈಸಿಗಳು ಈ ಯೋಜನೆಯಡಿ ಅವರ ಮೀನು ಮಾರಾಟ ಜಾಲವನ್ನು ವಿಸ್ತರಿಸಲು ಬಯಸಿದಲ್ಲಿ ಅವರಿಗೆ ಆದ್ಯತೆ ನೀಡಲಾಗುವುದು. ಸರ್ಕಾರದ ವಿವಿಧ ಕೌಶಲ್ಯ ಅಭಿವೃದ್ಧಿ ಯೋಜನೆಯಡಿ ತರಬೇತಿ ಪಡೆದವರು, ಮೀನುಗಾರಿಕೆ ಇಲಾಖೆಯಿಂದ ಅನುಮೋದಿತ ಮೀನುಗಾರರ ಉತ್ಪಾದಕ ಸಂಸ್ಥೆಗಳು ಮೀನು ಮಾರಾಟ ಚಟುವಟಿಕೆಯಲ್ಲಿ ತೊಡಗಿಸಿಕೊಂಡಿರುವ ಮೀನುಗಾರಿಕೆ ಸಹಕಾರ ಸಂಘಗಳು/ಒಕ್ಕೂಟಗಳು, ಮಹಿಳಾ ಸ್ವಸಹಾಯ ಗುಂಪುಗಳು, ಸ್ವಯಂ ಉದ್ಯೋಗ ಕೈಗೊಳ್ಳಲು ಆಸಕ್ತರಿರುವ ನಿರುದ್ಯೋಗಿ ಯುವಕ/ಯುವತಿಯರು/ಪ್ರಧಾನ ಮಂತ್ರಿ ಮತ್ಸ್ಯ ಸಂಪದ ಯೋಜನೆಯ ಫಲಾನುಭವಿಗಳನ್ನು ಆದ್ಯತೆಗನುಸಾಋ ಪರಿಗಣಿಸಲಾಗುವುದು.

ಆಯ್ಕೆಯಾಗುವ ಅರ್ಜಿದಾರರು ಇಲಾಖೆಗೆ ಭದ್ರತಾ ಠೇವಣಿ ಮೊತ್ತ ರೂ. 1.00 ಲಕ್ಷ, ಸಾಮಾನ್ಯ ವರ್ಗದವರು ಮತ್ತು ಪ.ಜಾತಿ/ಪ.ಪಂಗಡ/ಮಹಿಳೆ ರೂ. 0.50 ಲಕ್ಷವನ್ನು ನೀಡಬೇಕಿರುತ್ತದೆ. ಹಾಗೂ ಮಾಸಿಕ ರೂ. 3,000/- ಬಾಡಿಗೆ ಮೊತ್ತವನ್ನು ಪಾವತಿಸಬೇಕಿರುತ್ತದೆ.

Department of fisheries Karnataka ಹೆಚ್ಚಿನ ಮಾಹಿತಿಗಾಗಿ ಮೀನುಗಾರಿಕೆ ಸಹಾಯಕ ನಿರ್ದೇಶಕರು, ಶಿವಮೊಗ್ಗ, ಭದ್ರಾವತಿ, ಶಿಕಾರಿಪುರ, ಸಾಗರ, ಸೊರಬ ಮತ್ತು ತೀರ್ಥಹಳ್ಳಿ ಇವರನ್ನು ಸಂಪರ್ಕಿಸಬಹುದಾಗಿದೆ ಎಂದು ಮೀನುಗಾರಿಕೆ ಉಪ ನಿರ್ದೇಶಕರು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shimoga News ಗೋಪಾಲ ಗೌಡರು ಶಿವಮೊಗ್ಗ ಜಿಲ್ಲೆಯನ್ನ ಸಮಾಜವಾದದ ತೊಟ್ಟಿಲನ್ನಾಗಿ ರೂಪಿಸಿದವರು- ವೈ.ಎಸ್.ವಿ.ದತ್ತ.

Shimoga News ನಗರದ ಮಥುರಾ ಪ್ಯಾರಡೈಸ್ ಸಭಾಂಗಣದಲ್ಲಿ ಮಾಜಿ ಶಾಸಕ ಹಾಗೂ...

Klive Special Article ಕೆ ಲೈವ್ ವಿಶೇಷ.” ವಿಕ್ರಮ ಮತ್ತು ಶಾಲಿವಾಹನ ಶಕಪುರುಷರು” ಒಂದು ಚಿಂತನೆ.ಲೇ: ದಿಲೀಪ್ ನಾಡಿಗ್,ಶಿವಮೊಗ್ಗ.

ಎನ್.ಜಯಭೀಮ ಜೊಯ್ಸ್. ಶಿವಮೊಗ್ಗ. Klive Special Article ತೈತ್ತಿರೀಯ ಅರಣ್ಯಕದಲ್ಲಿರುವ ಶ್ಲೋಕದಂತೆ "ಕ್ವೇದಮಭ್ರಂ ನಿವಿಶತೇ...

Kote SeethaRamanjaneya Temple ಇಂದಿನಿಂದ ಕೋಟೆ ಶ್ರೀಸೀತಾರಾಮಾಂಜನೇಯ ಸ್ವಾಮಿ ದೇಗುಲದಲ್ಲಿ ಶ್ರೀರಾಮ ನವಮಿ ಉತ್ಸವಕ್ಕೆ ಚಾಲನೆ

Kote SeethaRamanjaneya Temple ಕೋಟೇ ಶ್ರೀ ಸೀತಾರಾಮಾಂಜನೇಯ ಸ್ವಾಮಿ ದೇವಾಲಯದಲ್ಲಿ ಶ್ರೀ...

Women’s Day ವೃದ್ಧಾಪ್ಯದ ಆರೋಗ್ಯ ಸಮಸ್ಯೆಗಳ ಬಗ್ಗೆ ಅರಿವಿರಲಿ- ಡಾ.ಪ್ರಿಯಾಂಕ ಚೌಹಾಣ್.

Women's Day ಜೆಸಿ ಶಿವಮೊಗ್ಗ ಚಿರಂತನದ ವತಿಯಿಂದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು...