Tuesday, October 1, 2024
Tuesday, October 1, 2024

Lok Sabha Elections ಪೌರತ್ವ ತಿದ್ದುಪಡಿ ಕಾಯಿದೆ ಜಾರಿಗೊಳಿಸಿ ಕೇಂದ್ರದ ಅಧಿಸೂಚನೆ

Date:

Lok Sabha Elections ಲೋಕಸಭಾ ಚುನಾವಣೆ ಘೋಷಣೆಗೆ ಕೆಲವೇ ದಿನಗಳು ಬಾಕಿ ಇರುವಾಗ ಬಹುನಿರೀಕ್ಷಿತ ಮತ್ತು ವಿವಾದಿತ ಪೌರತ್ವ ತಿದ್ದುಪಡಿ ಕಾಯ್ದೆ ಜಾರಿಗೊಳಿಸಿ, ಕೇಂದ್ರ ಸರ್ಕಾರ ಅಧಿ ಸೂಚನೆ ಹೊರಡಿಸಿದೆ.

ಪಾಕಿಸ್ತಾನ, ಬಾಂಗ್ಲಾದೇಶ, ಅಫ್ಘಾನಿಸ್ತಾನದಿಂದ 2014ರ ಡಿಸೆಂಬರ್ 31 ಮುಂಚೆ ಭಾರತಕ್ಕೆ ಆಗಮಿಸಿದ ಧಾರ್ಮಿಕ ಅಲ್ಪಸಂಖ್ಯಾತರಿಗೆ ದೇಶದ ಪೌರತ್ವ ನೀಡುವ ಈ ಕಾಯ್ದೆಯು ಸಂಸತ್ತಿನ ಅನುಮೋದನೆ ಪಡೆದ ನಾಲ್ಕು ವರ್ಷಗಳ ಬಳಿಕ ಅನುಷ್ಠಾನದ ಹಾದಿ ಹಿಡಿದಿದೆ.

2019 ರಲ್ಲಿ ಸಿಎಎ ವಿರುದ್ಧ ದೇಶದಾದ್ಯಂತ ದೊಡ್ಡ ಪ್ರಮಾಣದಲ್ಲಿ ಪ್ರತಿಭಟನೆ ನಡೆದಿತ್ತು. ಕಾಯ್ದೆಯ ಮೂಲಕ ಮುಸ್ಲಿಮರು ಪೌರತ್ವ ಕಸಿದುಕೊಳ್ಳಲಾಗುತ್ತದೆ ಎಂಬ ಆರೋಪಗಳು ಕೇಳಿ ಬಂದಿದ್ದವು. ಕಾಯ್ದೆ ವಿರೋಧಿಸಿ ಬೃಹತ್ ಹೋರಾಟದಲ್ಲಿ ಅನೇಕ ಮಂದಿಗಳು ಪ್ರಾಣವನ್ನು ಕಳೆದುಕೊಂಡಿದ್ದರು.

ಸಿ ಎ ಎ ಅಂದ್ರೆ, ಮುಸ್ಲಿಂ ರಾಷ್ಟ್ರಗಳಾದ ಪಾಕಿಸ್ತಾನ, ಅಫ್ಘಾನಿಸ್ತಾನದಲ್ಲಿ ಕಿರುಕುಳಕ್ಕೆ ಒಳಗಾಗಿ 2014 ಮುಂಚೆ ಭಾರತಕ್ಕೆ ಆಗಮಿಸಿದ್ದ ಹಿಂದೂ, ಕ್ರೈಸ್ತ, ಜೈನ, ಬೌದ್ಧ ನಿರಾಶ್ರಿತರರಿಗೇ ಪೌರತ್ವ ನೀಡಲು ಈ ಕಾಯ್ದೆ ಅವಕಾಶ ಕಲ್ಪಿಸುತ್ತದೆ.

Lok Sabha Elections ಈಗಾಗಲೇ ಹಲವು ರಾಜ್ಯಗಳು ಸಿಎಎ ವಿರೋಧಿಸಿವೆ. ಸಿ ಎ ಎ ಅಧಿಸೂಚನೆಯನ್ನು ರಾಜಕೀಯ ದೃವೀಕರಣದ ನಡೆ ಎಂದಿರುವ ಕೇರಳ, ಪಶ್ಚಿಮ ಬಂಗಾಳ ಸೇರಿದಂತೆ ಹಲವು ಬಿಜೆಪಿಯೇತರ ಆಡಳಿತವಿರುವ ರಾಜ್ಯಗಳು, ಕಾಯ್ದೆ ಜಾರಿಗೆ ವಿರೋಧ ವ್ಯಕ್ತಪಡಿಸಿವೆ. ಈ ಕಾಯ್ದೆಯನ್ನು ವಿರೋಧಿಸಿ ಅನೇಕ ಕಡೆಗಳಲ್ಲಿ ಪ್ರತಿಭಟನೆ ಕೂಡ ನಡೆದಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shakahari Film ಶಾಖಾಹಾರಿ ಚಿತ್ರಕ್ಕೆ ಕಾನೂನು ಜಯ

Shakahari Film ಶಿವಮೊಗ್ಗದ ಕೀಳಂಬಿ ಮೀಡಿಯಾ ಲ್ಯಾಬ್ ನಿರ್ಮಿಸಿದ್ದ ಶಾಖಾಹಾರಿ...

Mahatma Gandhi ರಾಜ್ಯಮಟ್ಟದ ಬಾಪೂಜಿ ಪ್ರಬಂಧ ಸ್ಪರ್ಧೆ, ಫಲಿತಾಂಶ ಪ್ರಕಟ

Mahatma Gandhi ರಾಷ್ಟ್ರಪಿತ ,ಮಹಾತ್ಮ ಗಾಂಧೀಜಿಯವರ 155 ನೇ ಜಯಂತಿ ಅಂಗವಾಗಿ...

Yaduveer Wadiyar ಶಿವಮೊಗ್ಗ ಹಬ್ಬ ಯಶಸ್ವಿಗೊಳಿಸಿ- ಸಂಸದ ಯದುವೀರ್

Yaduveer Wadiyar ಪ್ರವಾಸೋದ್ಯಮ ಹಾಗೂ ಜಿಲ್ಲೆಯ ಉದ್ಯಮಿಗಳ ಪ್ರೋತ್ಸಾಹಿಸುವ ದೃಷ್ಟಿಯಿಂದ...

Shivamogga Cycle Club ಸೈಕಲ್ ಅಭ್ಯಾಸವು ಜನಸಾಮಾನ್ಯರ ವ್ಯಾಯಾಮಶಾಲೆ- ಎನ್.ಗೋಪಿನಾಥ್

Shivamogga Cycle Club ಸೈಕಲ್ ಅಭ್ಯಾಸ ಮಾಡುವುದರಿಂದ ಹೃದಯ ಸಂಬಂಧಿ...