Sunday, December 14, 2025
Sunday, December 14, 2025

Zee Kannada ಮಾರ್ಚ್ 17 ರಂದು ಜೀ ಕನ್ನಡ ವಾಹಿನಿಯಿಂದ ಶಿವಮೊಗ್ಗದಲ್ಲಿ ಡಾನ್ಸ್ ಕರ್ನಾಟಕ ಡಾನ್ಸ್ ಗೆ ಆಡಿಷನ್

Date:

Zee Kannada ತನ್ನ ವಿಭಿನ್ನ ರಿಯಾಲಿಟಿ ಶೋಗಳ ಮೂಲಕ ಕರುನಾಡನ್ನ ರಂಜಿಸುತ್ತ ಬಂದಿರುವ ಜೀ ಕನ್ನಡ ವಾಹಿನಿಯು, ಈಗ ತನ್ನ ಹಿಟ್ ರಿಯಾಲಿಟಿ ಶೋಗಳಾದ ಡ್ಯಾನ್ಸ್ ಕರ್ನಾಟಕ ಡ್ಯಾನ್ಸ್ ಮತ್ತು ಕಾಮಿಡಿ ಕಿಲಾಡಿಗಳನ್ನ ಮತ್ತೆ ತೆರೆಗೆ ತರಲು ತಯಾರಿ ನಡೆಸಿದೆ. 7 ಸೀಸನ್‌ಗಳನ್ನ ಯಶಸ್ವಿಯಾಗಿ ಪೂರೈಸಿರುವ ಡ್ಯಾನ್ಸ್‌ ಕರ್ನಾಟಕ ಡ್ಯಾನ್ಸ್ ಈಗ ತನ್ನ 8 ನೇ ಆವೃತ್ತಿಯೊಂದಿಗೆ ಮತ್ತೆ ಕರುನಾಡನ್ನ ಕುಣಿಸಲು ತಯಾರಾಗಿದೆ.ಈಗಾಗಲೇ ಸಾಕಷ್ಟು ಯುವ ನೃತ್ಯ ನಿರ್ದೇಶಕರನ್ನ ಸ್ಯಾಂಡಲ್ ವುಡ್ಡಿಗೆ ನೀಡಿರುವ ಈ ರಿಯಾಲಿಟಿ ಶೋ ಮತ್ತಷ್ಟು ನೃತ್ಯ ನಿರ್ದೇಶಕರನ್ನ ಹುಟ್ಟು ಹಾಕುವ ಕೆಲಸವನ್ನ ಈ ಆವೃತ್ತಿಯಲ್ಲಿ ಮತ್ತೆ ಮಾಡಲಿದೆ.
ಇದರ ಜೊತೆಜೊತೆಗೆ ಸತತ 4 ಹಿಟ್ ಸೀಸನ್ನುಗಳನ್ನ ಕೊಟ್ಟಿರುವ ಕರುನಾಡಿನ ನೆಚ್ಚಿನ ರಿಯಾಲಿಟಿ ಶೋಗಳಲ್ಲಿ ಒಂದಾದ ಕಾಮಿಡಿ ಕಿಲಾಡಿಗಳು ಈಗಾಗಲೇ ಸಾಕಷ್ಟು ಕಾಮಿಡಿ ಕಲಾವಿದರನ್ನ ಕರುನಾಡಿಗೆ ನೀಡಿರುವುದು ಈಗ ಇತಿಹಾಸ.ವೇದಿಕೆಗಾಗಿ ಕಾಯುತ್ತಿರುವ ಅದೆಷ್ಟೋ ಹಾಸ್ಯ ನಟನಟಿಯರ ಕನಸನ್ನ ನನಸು ಮಾಡುತ್ತಿರುವ ಈ ರಿಯಾಲಿಟಿ ಶೋ ಈ ಬಾರಿ ಕಾಮಿಡಿ ಕಿಲಾಡಿಗಳು ಪ್ರೀಮಿಯರ್ ಲೀಗ್ ಎಂಬ ಹೊಸ ರೂಪದಲ್ಲಿ ಕರುನಾಡಿನ ಮುಂದೆ ಬರಲಿದೆ. ಈ ಹಂತದಲ್ಲಿ ಇದಕ್ಕೆ
ಪೂರ್ವಬಾವಿ ತಯಾರಿ ಎಂಬಂತೆ ಆಡಿಷನ್ ಪ್ರಕ್ರಿಯೇ ಕರುನಾಡಿನಾದ್ಯಂತ ಶುರುವಾಗಿದೆ.

Zee Kannada ಇದೇ ಮಾರ್ಚ್ 17 ರಂದು ಭಾನುವಾರ ಬೆಳಿಗ್ಗೆ 9 ಗಂಟೆಯಿಂದ ಸಂಜೆ 6 ರವರೆಗೆ ಬಸವೇಶ್ವರ ವಿದ್ಯಾಸಂಸ್ಥೆ,ಹಳೆ ತಾಲ್ಲೂಕು ಆಫೀಸ್ ರೋಡ್,ವೀರಶೈವ ಕಲ್ಯಾಣ ಮಂಟಪ ಹತ್ತಿರ,ಶಿವಮೊಗ್ಗ.ಇಲ್ಲಿ ಆಡಿಷನ್ ನಡೆಯಲಿದೆ.
ಆಡಿಷನಲ್ಲಿ ಭಾಗವಹಿಸಲು ಇಚ್ಚಿಸುವವರು ಅಡ್ರಸ್ ಪ್ರೂಪ್ ಜೆರಾಕ್ಸ್ ಜೊತೆ ಎರಡು ಪಾಸ್ ಪೋರ್ಟ್ ಸೈಜ್ ಪೋಟೊದೊಂದಿಗೆ ಆಡಿಷನ್ ಪ್ರಕ್ರಿಯೆಯಲ್ಲಿ ಭಾಗವಹಿಸಬಹುದಾಗಿದ್ದು,ಜೀ ಕನ್ನಡ ವಾಹಿನಿಯು ಈ ಆಡಿಷನ್ಗೆ ಯಾವುದೇ ಶುಲ್ಕು ವಿಧಿಸಿರುವುದಿಲ್ಲವೆಂದು ಸ್ಪಷ್ಟ ಪಡಿಸಿದೆ ಹಾಗು ವಾಹಿನಿಯ ಹೆಸರಲ್ಲಿ ಹಣ ಕೇಳುವವರ ವಿರುದ್ಧ ಶಿಸ್ತು ಕ್ರಮ ಜರುಗಿಸುವುದಾಗಿ ತಿಳಿಸಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Alvas Cultural Fest ಡಿಸೆಂಬರ್ 15. ಶಿವಮೊಗ್ಗದಲ್ಲಿ ಆಳ್ವಾಸ್ ಸಾಂಸ್ಕೃತಿಕ ವೈಭವ ಅನಾವರಣ.

Alvas Cultural Fest ಆಳ್ವಾಸ್ ನುಡಿಸಿರಿ ವಿರಾಸತ್ ಜಿಲ್ಲಾ ಘಟಕ, ಕರ್ನಾಟಕ...

Shimoga News ದೇಸಿವಸ್ತುಗಳ ಮಾರಾಟ ಮಳಿಗೆಯಲ್ಲಿ ಸೋಲಾರ್ ಬುಕ್ ಗೆ ಚಾಲನೆ.

Shimoga News ನಗರದ ಗೋಪಾಳ ರಸ್ತೆ ಆಲ್ಕೊಳ ಸಮೀಪದ ಬಂಟರ ಭವನದಲ್ಲಿ...

D S Arun ಗ್ರಾಮ ಪಂಚಾಯತ್ ನಿರ್ವಹಣೆಯಗ್ರಂಥಪಾಲಕರಿಗೆ ಕನಿಷ್ಠ ವೇತನ ಪಾವತಿಗೆಶಾಸಕ ಡಿ.ಎಸ್.ಅರುಣ್ ಒತ್ತಾಯ.

D S Arun ಗ್ರಾಮ ಪಂಚಾಯಿತಿಗಳ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಗ್ರಂಥಪಾಲಕರಿಗೆ ಸರ್ಕಾರ...

Shimoga News ಸೂಗೂರು ಗ್ರಾಮ ಪಂಚಾಯತಿಯ ಸಾಮಾಜಿಕ‌ನ್ಯಾಯ ಸಮಿತಿ ಅಧ್ಯಕ್ಷರಾಗಿ ವೀರೇಶ್ ಕ್ಯಾತಿನಕೊಪ್ಪಅಧಿಕಾರ ಸ್ವೀಕಾರ.

Shimoga News ಶಿವಮೊಗ್ಗ ತಾಲೂಕಿನ ಸೂಗುರು ಗ್ರಾಮ ಪಂಚಾಯತಿಯ ಸಾಮಾಜಿಕ ನ್ಯಾಯ...