Zilla Kannada Sahitya Parishad ಮೂಡಿಗೆರೆಯಲ್ಲಿ ಮಾ.29 ಮತ್ತು 30 ರಂದು ನಡೆಯಲಿರುವ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ 19ನೇ ಜಿಲ್ಲಾ ಸಮ್ಮೇಳನಕ್ಕೆ ಅಧ್ಯಕ್ಷರಾಗಿ ಆಯ್ಕೆಯಾದ ಹಳೇಕೋಟೆ ರಮೇಶ್ ಅವರಿಗೆ ಜಿಲ್ಲಾ ಸಿರಿಗನ್ನಡ ವೇದಿಕೆ ವತಿಯಿಂದ ಗೌರವಿಸಿ ಅಭಿನಂದನೆ ಸಲ್ಲಿಸಲಾಯಿತು.
ಕಸಾಪ ಮಾಜಿ ಅಧ್ಯಕ್ಷ ಕುಂದೂರು ಅಶೋಕ್ ಮಾತನಾಡಿ ಹಳೇಕೋಟೆ ರಮೇಶ್ ಅವರು ಸುಮಾರು 35ಕ್ಕೂ ಹೆಚ್ಚು ಕೃತಿಗಳನ್ನು ರಚಿಸಿರುವುದಲ್ಲದೇ ಪ್ರಪಂಚದ ವಿವಿಧ ದೇಶಗಳಿಗೆ ಪ್ರವಾಸ ಕೈಗೊಂಡು ಕನ್ನಡದ ಕಂಪನ್ನು ಎಲ್ಲೆಡೆ ಹಬ್ಬಿಸಿದವರು ಎಂದು ತಿಳಿಸಿದರು.
Zilla Kannada Sahitya Parishad ಈ ಸಂದರ್ಭದಲ್ಲಿ ಸಿರಿಗನ್ನಡ ವೇದಿಕೆ ಜಿಲ್ಲಾಧ್ಯಕ್ಷ ಎಂ.ಆರ್.ಪ್ರಕಾಶ್, ಗೌರವಾಧ್ಯಕ್ಷ ಎಂ.ಸಿ.ಶಿವಾ ನಂದಸ್ವಾಮಿ, ಮೂಡಿಗೆರೆ ತಾಲ್ಲೂಕು ಅಧ್ಯಕ್ಷ ಪೂರ್ಣೇಶ್ ಮೂರ್ತಿ, ಚಿಕ್ಕಮಗಳೂರು ತಾಲ್ಲೂಕು ಅಧ್ಯಕ್ಷ ಚಂ ದ್ರಯ್ಯ, ಬಾಳೂರು ಹೋಬಳಿ ಕನ್ನಡ ಸಾಹಿತ್ಯ ಪರಿಷತ್ ಪ್ರಧಾನ ಕಾರ್ಯದರ್ಶಿ ಪರೀಕ್ಷಿತ್ ಜಾವಳಿ, ಸಂಚಾ ಲಕರಾದ ಮಹೇಂದ್ರ ಕುಮಾರ್, ಡಾ.ಹೇಮಂತ್ ಕುಮಾರ್, ಹಿರಿಯರಾದ ಹಾಲಪ್ಪ ಗೌಡ, ಜಯಣ್ಣ , ಮೋಯಿದ್ದಿನ್ ಬಿಳಗುಳ ಮುಂತಾದವರಿದ್ದರು.