Monday, February 2, 2026
Monday, February 2, 2026

Ayanur Manjunath ಈಶ್ವರಪ್ಪನವರು ಬಿಎಸ್ ವೈ ವಿರುದ್ಧ ಟೀಕೆ ಮಾಡಿದರೂ ಮಕ್ಕಳಾರೂ ಪ್ರತಿಕ್ರಿಯೆ ನೀಡುತ್ತಿಲ್ಲ- ಆಯನೂರು ಟೀಕೆ

Date:

Ayanur Manjunath ಮಾಜಿ ಉಪಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪಗೆ ಅವಮಾನ ಮಾಡಿದರೂ ಕೂಡ ಬಿಜೆಪಿಯ ಯಾರೂ ಅವರ ವಿರುದ್ಧ ಮಾತನಾಡಲಿಲ್ಲ. ಸ್ವತಃ ಅವರ ಮಕ್ಕಳೇ ತಂದೆಗೆ ಅವಮಾನವಾದರೂ ಕೂಡ ತುಟಿಪಿಟಿಕ್ ಎನ್ನಲಿಲ್ಲ ಎಂದು ಆಯನೂರು ಮಂಜುನಾಥ್ ಹೇಳಿದ್ದಾರೆ.


Ayanur Manjunath
ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಿಜೆಪಿಯಲ್ಲಿ ಬಂಡಾಯ ಎದ್ದಿರುವ ಈಶ್ವರಪ್ಪ ಯಡಿಯೂರಪ್ಪನವರ ಎದೆ ಸೀಳಿದರೆ ಒಂದು ಕಡೆ ಮಕ್ಕಳು, ಮತ್ತೊಂದು ಕಡೆ ಶೋಭಾ ಕರಾಂದ್ಲಾಜೆ ಇರುತ್ತಾಳೆ ಎಂದು ಅಪಾರ್ಥ ಬರುವ ರೀತಿಯಲ್ಲಿ ಮಾತನಾಡಿದ್ದಾರೆ. ಇಂತಹ ಮಾತನಾಡಿದರು ಕೂಡ ಯಾರೂ ಈ ಬಗ್ಗೆ ಪ್ರಶ್ನೆ ಮಾಡಲಿಲ್ಲ. ಒಂದು ರೀತಿಯಲ್ಲಿ ಯಡಿಯೂರಪ್ಪನವರ ಚಾರಿತ್ರö್ಯ್ರಕ್ಕೆ ಕೆಟ್ಟ ಹೆಸರು ಬರುವ ರೀತಿಯಲ್ಲಿ ಮಾತನಾಡಿದರು ಕೂಡ ಸುಮ್ಮನಿದ್ದರು ಎಂದರು.
ನಾನೇ ಆಗಿದ್ದರೆ ಖಂಡಿತ ಬಿ.ಎಸ್. ಯಡಿಯೂರಪ್ಪನವರ ರಕ್ಷಣೆಗೆ ಹೋಗುತ್ತಿದ್ದೆ. ಆದರೆ ಅವರ ಮಕ್ಕಳು ಚಾರಿತ್ರ‍್ಯ ಹೋದರೂ ಸುಮ್ಮನಿದ್ದಾರೆ. ತಂದೆಯ ಉತ್ತರಾಧಿಕಾರ ಬೇಕು, ಆಸ್ತಿ ಬೇಕು, ಅವಮಾನ ಮಾಡಿದರೆ ತಿರುಗಿ ಮಾತನಾಡುವ ಶಕ್ತಿ ಅವರು ಕಳೆದುಕೊಂಡಿದ್ದಾರೆ ಎಂದರು.
ದೇವಿಯ ಉಪಾಸನೆಯೇ ನಮ್ಮ ಗುರಿ, ನಾರಿಯೆ ನಮ್ಮ ಶಕ್ತಿ ಎಂದು ಹೇಳುವ ಬಿಜೆಪಿಗರು ಶೋಭಾ ಕರಂದ್ಲಾಜೆಯ ಅವಹೇಳನ ಮಾಡಿದರೂ ಕೂಡ ಸುಮ್ಮನಿದ್ದಾರೆ. ಇದು ಕೇವಲ ರಾಜಕೀಯ ಪ್ರಭಾವವಾಗಿ ಕಾಣಿಸಿಕೊಂಡಿದೆ.
ಯಡಿಯೂರಪ್ಪ ಈಗ ರಾಜಕೀಯ ಅನಾಥರಾಗಿದ್ದಾರೆ. ಅವರನ್ನು ಬಿಜೆಪಿಯ ವರಿಷ್ಟರು ಬಳಸಿಕೊಳ್ಳುತ್ತಿದ್ದಾರೆ ಅಷ್ಟೇ ಒಂದು ರೀತಿಯಲ್ಲಿ ಮಹಾಭಾರತ ಕಥೆಯ ಭೀಷ್ಮರು ಶರಪಂಜರದಲ್ಲಿ ಅಸಹಾಯಕರಾಗಿ ಮಲಗಿದಂತೆ ಇದ್ದಾರೆ. ಅವರನ್ನು ರಕ್ಷಣೆ ಮಾಡಲು ಈಗ ಯಾರೂ ಇಲ್ಲ. ಅದು ಅವರಿಗೆ ಎಚ್ಚರಿಕೆಯ ಗಂಟೆಯಾಗಬೇಕು. ನಾನು ಅವರ ಪ್ರೀತಿಯ ಶಿಷ್ಯನಾಗಿ ನೊಂದು ಮಾತನಾಡುತ್ತಿದ್ದೇನೆ. ಈಶ್ವರಪ್ಪನವರ ಹರಿದ ಬಾಯನ್ನು ಹೊಲಿಯಲು ಈಗ ಬಿಜೆಪಿಯಲ್ಲಿ ಯಾರೂ ಇಲ್ಲ ಎಂದರು

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...

MESCOM ಹೊಳೆಹೊನ್ನೂರು ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಹೊಳೆಹೊನ್ನೂರು ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಫೆ. 03 ರಂದು ಬೆಳಿಗ್ಗೆ...

Shivamogga Police ವ್ಯಕ್ತಿ ಮೇಲೆ ಮಾರಣಾಂತಿಕ ಹಲ್ಲೆ, ಮೂವರಿಗೆ 5 ವರ್ಷ ಜೈಲು ಶಿಕ್ಷೆ

Shivamogga Police ಮಾರಣಾಂತಿಕವಾಗಿ ಹಲ್ಲೆ ಮಾಡಿ ಹಾಗೂ ಅವಾಚ್ಯ ಶಬ್ದಗಳಿಂದ ಬೈದು...