Wednesday, December 17, 2025
Wednesday, December 17, 2025

Ayanur Manjunath ಈಶ್ವರಪ್ಪನವರು ಬಿಎಸ್ ವೈ ವಿರುದ್ಧ ಟೀಕೆ ಮಾಡಿದರೂ ಮಕ್ಕಳಾರೂ ಪ್ರತಿಕ್ರಿಯೆ ನೀಡುತ್ತಿಲ್ಲ- ಆಯನೂರು ಟೀಕೆ

Date:

Ayanur Manjunath ಮಾಜಿ ಉಪಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪಗೆ ಅವಮಾನ ಮಾಡಿದರೂ ಕೂಡ ಬಿಜೆಪಿಯ ಯಾರೂ ಅವರ ವಿರುದ್ಧ ಮಾತನಾಡಲಿಲ್ಲ. ಸ್ವತಃ ಅವರ ಮಕ್ಕಳೇ ತಂದೆಗೆ ಅವಮಾನವಾದರೂ ಕೂಡ ತುಟಿಪಿಟಿಕ್ ಎನ್ನಲಿಲ್ಲ ಎಂದು ಆಯನೂರು ಮಂಜುನಾಥ್ ಹೇಳಿದ್ದಾರೆ.


Ayanur Manjunath
ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಿಜೆಪಿಯಲ್ಲಿ ಬಂಡಾಯ ಎದ್ದಿರುವ ಈಶ್ವರಪ್ಪ ಯಡಿಯೂರಪ್ಪನವರ ಎದೆ ಸೀಳಿದರೆ ಒಂದು ಕಡೆ ಮಕ್ಕಳು, ಮತ್ತೊಂದು ಕಡೆ ಶೋಭಾ ಕರಾಂದ್ಲಾಜೆ ಇರುತ್ತಾಳೆ ಎಂದು ಅಪಾರ್ಥ ಬರುವ ರೀತಿಯಲ್ಲಿ ಮಾತನಾಡಿದ್ದಾರೆ. ಇಂತಹ ಮಾತನಾಡಿದರು ಕೂಡ ಯಾರೂ ಈ ಬಗ್ಗೆ ಪ್ರಶ್ನೆ ಮಾಡಲಿಲ್ಲ. ಒಂದು ರೀತಿಯಲ್ಲಿ ಯಡಿಯೂರಪ್ಪನವರ ಚಾರಿತ್ರö್ಯ್ರಕ್ಕೆ ಕೆಟ್ಟ ಹೆಸರು ಬರುವ ರೀತಿಯಲ್ಲಿ ಮಾತನಾಡಿದರು ಕೂಡ ಸುಮ್ಮನಿದ್ದರು ಎಂದರು.
ನಾನೇ ಆಗಿದ್ದರೆ ಖಂಡಿತ ಬಿ.ಎಸ್. ಯಡಿಯೂರಪ್ಪನವರ ರಕ್ಷಣೆಗೆ ಹೋಗುತ್ತಿದ್ದೆ. ಆದರೆ ಅವರ ಮಕ್ಕಳು ಚಾರಿತ್ರ‍್ಯ ಹೋದರೂ ಸುಮ್ಮನಿದ್ದಾರೆ. ತಂದೆಯ ಉತ್ತರಾಧಿಕಾರ ಬೇಕು, ಆಸ್ತಿ ಬೇಕು, ಅವಮಾನ ಮಾಡಿದರೆ ತಿರುಗಿ ಮಾತನಾಡುವ ಶಕ್ತಿ ಅವರು ಕಳೆದುಕೊಂಡಿದ್ದಾರೆ ಎಂದರು.
ದೇವಿಯ ಉಪಾಸನೆಯೇ ನಮ್ಮ ಗುರಿ, ನಾರಿಯೆ ನಮ್ಮ ಶಕ್ತಿ ಎಂದು ಹೇಳುವ ಬಿಜೆಪಿಗರು ಶೋಭಾ ಕರಂದ್ಲಾಜೆಯ ಅವಹೇಳನ ಮಾಡಿದರೂ ಕೂಡ ಸುಮ್ಮನಿದ್ದಾರೆ. ಇದು ಕೇವಲ ರಾಜಕೀಯ ಪ್ರಭಾವವಾಗಿ ಕಾಣಿಸಿಕೊಂಡಿದೆ.
ಯಡಿಯೂರಪ್ಪ ಈಗ ರಾಜಕೀಯ ಅನಾಥರಾಗಿದ್ದಾರೆ. ಅವರನ್ನು ಬಿಜೆಪಿಯ ವರಿಷ್ಟರು ಬಳಸಿಕೊಳ್ಳುತ್ತಿದ್ದಾರೆ ಅಷ್ಟೇ ಒಂದು ರೀತಿಯಲ್ಲಿ ಮಹಾಭಾರತ ಕಥೆಯ ಭೀಷ್ಮರು ಶರಪಂಜರದಲ್ಲಿ ಅಸಹಾಯಕರಾಗಿ ಮಲಗಿದಂತೆ ಇದ್ದಾರೆ. ಅವರನ್ನು ರಕ್ಷಣೆ ಮಾಡಲು ಈಗ ಯಾರೂ ಇಲ್ಲ. ಅದು ಅವರಿಗೆ ಎಚ್ಚರಿಕೆಯ ಗಂಟೆಯಾಗಬೇಕು. ನಾನು ಅವರ ಪ್ರೀತಿಯ ಶಿಷ್ಯನಾಗಿ ನೊಂದು ಮಾತನಾಡುತ್ತಿದ್ದೇನೆ. ಈಶ್ವರಪ್ಪನವರ ಹರಿದ ಬಾಯನ್ನು ಹೊಲಿಯಲು ಈಗ ಬಿಜೆಪಿಯಲ್ಲಿ ಯಾರೂ ಇಲ್ಲ ಎಂದರು

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Scheduled Castes Welfare Department ಮಾನಿಸಿಕ ಒತ್ತಡ ನಿರ್ವಹಣೆ ಬಗ್ಗೆ ಆನ್ ಲೈನ್ ಪಾಡ್ ಕ್ಯಾಸ್ಟ್ ವಿಡಿಯೊ ಸಂವಾದ

Scheduled Castes Welfare Department ಶಿವಮೊಗ್ಗ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್,...

Kuvempu University ಶ್ರೀಕಾಂತ್ ಬಿರಾದಾರ್ ಅವರಿಗೆ ಕುವೆಂಪು ವಿವಿ ಡಾಕ್ಟರೇಟ್ ಪದವಿ

Kuvempu University ಮೂಡಲಗಿ ಶ್ರೀ ಶ್ರೀಪಾದಬೋಧ ಸ್ವಾಮೀಜಿ ಸರ್ಕಾರಿ ಪ್ರಥಮ ದರ್ಜೆ...

Karnataka Information Commission ಡಿಸೆಂಬರ್ 20. ರಾಜ್ಯ ಮಾಹಿತಿ ಆಯುಕ್ತರ ಶಿವಮೊಗ್ಗ ಜಿಲ್ಲಾ ಪ್ರವಾಸ ಮಾಹಿತಿ

Karnataka Information Commission ರಾಜ್ಯ ಮಾಹಿತಿ ಆಯೋಗದ ಆಯುಕ್ತರಾದ ರುದ್ರಣ್ಣ ಹರ್ತಿಕೋಟೆ...

B.Y. Raghavendra ವೈಯಕ್ತಿಕವಾಗಿ ಕುಟುಂಬದ ಹಿರಿಯರನ್ನ ಕಳೆದುಕೊಂಡಂತಾಗಿದೆ, ಶಾಮನೂರು ನಿಧನಕ್ಕೆ ಬಿ.ವೈ.ರಾಘವೇಂದ್ರ ಕಂಬನಿ

B.Y. Raghavendra ಅಖಿಲಭಾರತ ವೀರಶೈವ ಲಿಂಗಾಯತ ಮಹಾಸಭಾದ ರಾಷ್ಟ್ರೀಯ ಅಧ್ಯಕ್ಷರು, ಹಿರಿಯ...