Friday, December 5, 2025
Friday, December 5, 2025

Geetha Shivarajkumar ಗೀತಾಶಿವರಾಜ್ ಕುಮಾರ್ ಗೆ ಸಿನಿಮಾ ನಿರ್ಮಾಪಕರ ಸಂಘದ ಬೆಂಬಲ

Date:

Geetha Shivarajkumar ಲೋಕಸಭೆ ಚುನಾವಣೆಗೆ ದಿನಾಂಕ ಘೋಷಣೆಯಾಗಿದ್ದು, ಅಭ್ಯರ್ಥಿಗಳು ಪ್ರಚಾರಕ್ಕೆ ಭರ್ಜರಿ ತಯಾರಿ ನಡೆಸುತ್ತಿದ್ದಾರೆ. ಶಿವಮೊಗ್ಗ ಲೋಕಸಭಾ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಗೀತಾ ಶಿವರಾಜ್​ಕುಮಾರ್ ಕಣಕ್ಕಿಳಿದಿದ್ದು, ಅವರ ಬೆಂಬಲಕ್ಕೆ ಸ್ಯಾಂಡಲ್​ವುಡ್​ನ ನಿರ್ಮಾಪಕರು ನಿಂತಿದ್ದಾರೆ. ಈ ಹಿನ್ನೆಲೆಯಲ್ಲಿ ಇಂದು ಶಿವರಾಜ್​ಕುಮಾರ್ ಅವರ ನಾಗವಾರದ ನಿವಾಸದಲ್ಲಿ ಫಿಲ್ಮ್ ಚೇಂಬರ್ ಅಧ್ಯಕ್ಷ ಎನ್ ಎಂ ಸುರೇಶ್, ಮಾಜಿ ಅಧ್ಯಕ್ಷರುಗಳಾದ ಸಾರಾ ಗೋವಿಂದು, ಕೆ.ವಿ.ಚಂದ್ರಶೇಖರ್, ಥಾಮಸ್ ಡಿಸೋಜಾ, ಚಿನ್ನೇಗೌಡ್ರು, ನಿರ್ಮಾಪಕ ಕೆ.ಪಿ ಶ್ರೀಕಾಂತ್, ಉಮೇಶ್ ಬಣಕಾರ್ ಸೇರಿದಂತೆ ಅನೇಕರು ಪತ್ರಿಕಾಗೋಷ್ಠಿ ನಡೆಸುವ ಮೂಲಕ ದೊಡ್ಮನೆ ಸೊಸೆಗೆ ಬೆಂಬಲ ನೀಡುವುದಾಗಿ ತಿಳಿಸಿದ್ದಾರೆ.

ಫಿಲ್ಮ್ ಚೇಂಬರ್ ಅಧ್ಯಕ್ಷ ಹಾಗೂ ನಿರ್ಮಾಪಕ ಎನ್ ಎಂ ಸುರೇಶ್ ಮಾತನಾಡಿ, “ದೊಡ್ಮನೆಗೆ ಅವಕಾಶ ಸಿಕ್ಕಿರೋದು ಖುಷಿಯಾಗಿದೆ. ಅದರಲ್ಲಿ ಗೀತಾ ಅವರಿಗೆ ಟಿಕೆಟ್ ಸಿಕ್ಕಿರೋದು ನಮಗೆಲ್ಲಾ ಸಂತಸ ತಂದಿದೆ. ಶಿವಮೊಗ್ಗ ಬಹಳ ಪವಿತ್ರವಾದ ಸ್ಥಳ. ಚಿತ್ರೋದ್ಯಮದ ಆಸ್ತಿ ದೊಡ್ಮನೆಗೆ ನಾವು ಸಾಥ್ ಕೊಡುತ್ತೇವೆ. ನಾವು ಚುನಾವಣೆ ಕೆಲಸ ಮಾಡ್ತೀವಿ. ನಾವೆಲ್ಲಾ ಗೀತಾ ಶಿವರಾಜ್​ಕುಮಾರ್ ಅವರು ನಾಮಪತ್ರ ಸಲ್ಲಿಸುವ ದಿನ ಅವರೊಂದಿಗೆ ಇರುತ್ತೇವೆ. ಈ ಚುನಾವಣೆ ನಮಗೆ ಹಬ್ಬ ಇದ್ದಂತೆ, ಇಡೀ ಚಿತ್ರರಂಗ ಒಟ್ಟಾಗಿ ಗೀತಾ ಶಿವರಾಜ್​ಕುಮಾರ್ ಅವರನ್ನ ಬೆಂಬಲಿಸುತ್ತೇವೆ ಎಂದರು.

ಗೀತಾರನ್ನು ಒಮ್ಮೆ ಸಂಸದೆ ಆಗಿ ನೋಡಬೇಕು ಎಂಬ ಆಸೆ ಇದೆ: ನಟ ಶಿವರಾಜ್‌ಕುಮಾರ್‌ ಮಾತನಾಡಿ, ಡಾ. ರಾಜ್​ಕುಮಾರ್ ಅವರ ಮಾತಿನಂತೆ ಚಿತ್ರರಂಗ ಅಂದರೆ ಒಂದು ಕುಟುಂಬ. ನನ್ನ ಪತ್ನಿ ಗೆಲುವಿಗಾಗಿ ನಿಮ್ಮ ಸಹಕಾರ ನನಗೆ ಖುಷಿ ಕೊಟ್ಟಿದೆ. ರಾಜಕೀಯದಲ್ಲಿ ಅನುಭವ ಇದ್ದರೆ ಸಾಲದು. ನಂಬಿಕೆ, ಆತ್ಮವಿಶ್ವಾಸ ಕೂಡಬೇಕು. ಡಾ. ರಾಜ್ ಕುಮಾರ್ ಅವರಿಗೆ ರಾಜಕೀಯ ಇಷ್ಟ ಇರಲಿಲ್ಲ. ಆದರೆ ರಾಜಕೀಯ ಮಾಡುವವರಿಗೆ ಯಾವತ್ತೂ ಬೇಡ ಅನ್ನಲಿಲ್ಲ. ಹಾಗಾಗಿಯೇ ನಾನು ಬಂಗಾರಪ್ಪ ಅವರ ಮಗಳನ್ನು ಮದುವೆಯಾದೆ. ಕರ್ನಾಟಕದಲ್ಲಿ ಹೆಣ್ಣು ಮಕ್ಕಳು ಹೆಚ್ಚಾಗಿ ರಾಜಕೀಯಕ್ಕೆ ಬರಬೇಕು. ಗೀತಾರನ್ನು ಒಮ್ಮೆ ಸಂಸದೆ ಆಗಿ ನೋಡಬೇಕು ಎಂಬ ಆಸೆ ಇದೆ. ಅದರಂತೆ ಗೀತಾ ಗೆದ್ದೇ ಗೆಲ್ಲುತ್ತಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಗೀತಾ ಶಿವರಾಜ್​ಕುಮಾರ್ ಮಾತನಾಡಿ, ನನ್ನ ಪರವಾಗಿ ನಿಂತ ನಿರ್ಮಾಪಕರಿಗೆ ಧನ್ಯವಾದ. ನಾನು ರಾಜಕೀಯದಲ್ಲಿ ಮೊದಲು ಸೋತೆ. ರಾಜಕೀಯದಲ್ಲಿ ಸೋಲು – ಗೆಲುವಿಗೆ ನಾನು ಹೆದರುವುದಿಲ್ಲ. ಈ ಬಾರಿ ನಾನು ಚುನಾವಣೆಯಲ್ಲಿ ಗೆದ್ದೇ ಗೆಲ್ಲುತ್ತೇನೆ ಎಂದರು.

Geetha Shivarajkumar ಇನ್ನು ಶಿಕ್ಷಣ ಸಚಿವ ಮಧು ಬಂಗಾರಪ್ಪ ಮಾತನಾಡಿ, ನನಗೆ ಚಿತ್ರರಂಗದ ಮೇಲೆ ಬಹಳ ಗೌರವವಿದೆ. ಇಂದು ನಿರ್ಮಾಪಕರು ನಮ್ಮ ಅಕ್ಕನ ಪರವಾಗಿ ನಿಂತಿದ್ದಾರೆ. 2014ರಲ್ಲಿ ಬೇರೆ ಪಕ್ಷದಲ್ಲಿ ಇದ್ದೆವು. ಆಗ ಸೋಲಾಯ್ತು. ಚುನಾವಣೆಯಲ್ಲಿ ನಾನು ಈವರೆಗೆ ನಾನು 6 ಬಾರಿ ಸೋತಿದ್ದೇನೆ. ಮಧು ಬಂಗಾರಪ್ಪ ಚುನಾವಣೆಯಲ್ಲಿ ಮಾತ್ರ ಸೋತಿದ್ದಾನೆ, ರಾಜಕೀಯದಲ್ಲಿ ಅಲ್ಲ. ಆದೇ ರೀತಿ ಈ ಬಾರಿ ಗೀತಾ ಶಿವರಾಜ್​ಕುಮಾರ್ ಅವರನ್ನು ಗೆದ್ದೇ ಗೆಲ್ಲಿಸುತ್ತೇನೆ. ಇದೇ ಮಾರ್ಚ್ 20 ರಂದು ಗೀತಾ ಶಿವರಾಜ್​ಕುಮಾರ್ ಅವರು ಶಿವಮೊಗ್ಗಕ್ಕೆ ಆಗಮಿಸಲಿದ್ದು, ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ 400 ಸಭೆ ಮಾಡಲು ಸಿದ್ಧತೆ ಮಾಡಿಕೊಂಡಿದ್ದೇವೆ ಎಂದು ತಿಳಿಸಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Indian Medical Association 30 ವರ್ಷ ದಾಟಿದ ಮಹಿಳೆಯರು ಪ್ಯಾಪ್ಸ್ ಮಿಯರ್ ಟೆಸ್ಟ್ ಅನ್ನು 3 ವರ್ಷಕ್ಕೆ ಒಂದು ಬಾರಿ‌ ಮಾಡಿಸಬೇಕು- ಡಾ.ರಕ್ಷಾರಾವ್

Indian Medical Association ಮಹಿಳೆಯರು ಉತ್ತಮ ಆರೋಗ್ಯ ಕಾಪಾಡಿಕೊಳ್ಳಲು ಜಾಗ್ರತೆ ವಹಿಸಬೇಕು...

MESCOM ಡಿಸೆಂಬರ್ ‌9. ಕುಂಸಿ ಮೆಸ್ಕಾಂ ಉಪವಿಭಾಗ ಕಚೇರಿಯಲ್ಲಿ ಜನ ಸಂಪರ್ಕ ಸಭೆ

MESCOM ಕುಂಸಿ ಮೆಸ್ಕಾಂ ಉಪವಿಭಾಗದಲ್ಲಿ ಡಿ. 09 ರಂದು ಬೆಳಗ್ಗೆ 11.00...