Monday, February 2, 2026
Monday, February 2, 2026

Sahyadri Science College ವಿದೇಶಗಳ್ಲಿ ವಿವಿಧ ಕಲಾಪ್ರಕಾರಗಳ ಪರಿಚಯವನ್ನ ಡಾ.ಗಂಗೂಬಾಯಿ ಹಾನಗಲ್ ವಿವಿ ಮಾಡುತ್ತಿದೆ-ಡಾ.ನಾಗೇಶ್ ಬೆಟಕೋಟೆ

Date:

Sahyadri Science College ಎಲ್ಲಿ ಸಾಂಸ್ಕoತಿಕ ಮನಸ್ಸುಗಳು ಇರುತ್ತೋ ಅಂತಹ ಸಮಾಜ ಉತ್ತಮವಾಗಿರುತ್ತೆ. ಕೆಲವು ಪ್ರದೇಶಗಳಿಗೆ ಸೀಮಿತವಾಗಿದ್ದ, ಇಂತಹ ವಿವಿಧ ಕಲಾ ಪ್ರಕಾರದ ಅಧ್ಯಯನದೊಂದಿಗೆ ರಾಜ್ಯ, ರಾಷ್ಟ್ರ ಮಾತ್ರವಲ್ಲದೆ ವಿದೇಶಗಳಲ್ಲೂ ಇದನ್ನು ಪಸರಿಸುವಂತ ಕಾರ್ಯವನ್ನು ಡಾ. ಗಂಗೂಬಾಯಿ ಹಾನಗಲ್ ಸಂಗೀತ ಮತ್ತು ಪ್ರದರ್ಶಕ ವಿಶ್ವವಿದ್ಯಾಲಯ ಮಾಡುತ್ತಿದೆ ಎಂದು ವಿಶ್ವವಿದ್ಯಾಲಯದ ಕುಲಪತಿಗಳಾದ ಡಾ. ನಾಗೇಶ್ ಬೆಟಕೋಟೆ ಅವರು ತಿಳಿಸಿದರು.

ಶಿವಮೊಗ್ಗದ ಸಹ್ಯಾದ್ರಿ ಕಲಾ ಕಾಲೇಜಿನ ಜಯಚಾಮರಾಜೇಂದ್ರ ಒಡೆಯರ್ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ, ರಾಜ್ಯಮಟ್ಟದ ಪರೀಕ್ಷೆಗಳ ಪರೀಕ್ಷಕರು, ಮಾರ್ಗದರ್ಶಕರು ಹಾಗೂ ಗುರುಗಳ ಮೂಲ ದಾಖಲಾತಿ ಪರಿಶೀಲನಾ ಸಭೆಯನ್ನುದ್ದೇಶಿಸಿ ಮಾತನಾಡಿದರು.

ಸದ್ಯ ವಿಶ್ವವಿದ್ಯಾಲಯದಲ್ಲಿ ಸುಮಾರು 17 ಸಾವಿರಕ್ಕೂ ಹೆಚ್ಚಿನ ವಿದ್ಯಾರ್ಥಿಗಳು ನೊಂದಾಯಿಸಿಕೊಂಡಿದ್ದು, ಇಲ್ಲಿ ಕಲಿತವರಿಗೆ ಉದ್ಯೋಗ ಸೇರಿದಂತೆ, ಹಲವು ಕ್ಷೇತ್ರಗಳಲ್ಲಿ ಮನ್ನಣೆ ದೊರೆಯುವುದರ ಜೊತೆಗೆ ನಮ್ಮ ಕಲೆ ಸಂಸ್ಕøತಿ ಉಳಿಸಲು ಸಹಕಾರಿಯಾಗುತ್ತದೆ ಎಂದರು.

ಕಾರ್ಯಕ್ರಮದಲ್ಲಿ ಸಹ್ಯಾದ್ರಿ ಕಲಾ ಕಾಲೇಜಿನ ಪ್ರಾಚಾರ್ಯರಾದ ಡಾ ಸೈಯದ್ ಸನಾವುಲ್ಲ ಉಪಸ್ಥಿತರಿದ್ದರು.

Sahyadri Science College ಸುಮಾರು ಐದು ಜಿಲ್ಲೆಗಳಿಂದ 200ಕ್ಕೂ ಹೆಚ್ಚು ಸಂಗೀತ, ನೃತ್ಯ ಕ್ಷೇತ್ರಗಳಲ್ಲಿ ತರಬೇತಿ ನೀಡಿದ ಗುರಗಳು, ಸಂಘಸಂಸ್ಥೆಗಳ ಮುಖ್ಯಸ್ಥರು ಭಾಗವಹಿಸಿದ್ದರು. ವಿಶ್ವವಿದ್ಯಾಲಯದ ಸಿಬ್ಬಂದಿ ವರ್ಗ ಸೇರಿದಂತೆ ಹಲವರು ಹಾಜರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...

MESCOM ಹೊಳೆಹೊನ್ನೂರು ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಹೊಳೆಹೊನ್ನೂರು ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಫೆ. 03 ರಂದು ಬೆಳಿಗ್ಗೆ...

Shivamogga Police ವ್ಯಕ್ತಿ ಮೇಲೆ ಮಾರಣಾಂತಿಕ ಹಲ್ಲೆ, ಮೂವರಿಗೆ 5 ವರ್ಷ ಜೈಲು ಶಿಕ್ಷೆ

Shivamogga Police ಮಾರಣಾಂತಿಕವಾಗಿ ಹಲ್ಲೆ ಮಾಡಿ ಹಾಗೂ ಅವಾಚ್ಯ ಶಬ್ದಗಳಿಂದ ಬೈದು...