Sunday, December 14, 2025
Sunday, December 14, 2025

Arvind Kejriwal ಅಬಕಾರಿ ನೀತಿ ಪರಿಷ್ಕರಣೆ ಅಕ್ರಮ ಸಂಬಂಧ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಬಂಧನ

Date:

Arvind Kejriwal ಅಬಕಾರಿ ನೀತಿ ಪರಿಷ್ಕರಣೆಯಲ್ಲಿನ ಅಕ್ರಮಕ್ಕೆ ಸಂಬಂಧಿಸಿದಂತೆ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು ಇಡಿ ಅಧಿಕಾರಿಗಳು ಬಂಧಿಸಿದ್ದಾರೆ.
ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರಿಗೆ ಬಂಧನದಿಂದ ರಕ್ಷಣೆ ನೀಡಲು ದೆಹಲಿ ಹೈಕೋರ್ಟ್ ಗುರುವಾರ ನಿರಾಕರಿಸಿದ್ದು ಇದರ ಬೆನ್ನಲ್ಲೇ ಇಡಿ ಅಧಿಕಾರಿಗಳ ತಂಡ ದೆಹಲಿ ಮುಖ್ಯಮಂತ್ರಿ ನಿವಾಸಕ್ಕೆ ತೆರಳಿ ಮತ್ತೊಂದು ಸಮನ್ಸ್ ಜಾರಿ ಮಾಡಿ, ವಿಚಾರಣೆ ನಡೆಸಿ ಇದೀಗ ಬಂಧಿಸಿದೆ.

ಅರವಿಂದ್ ಕೇಜ್ರಿವಾಲ್ ಬಂಧನ
ಇಡಿಯಿಂದ ಕೇಜ್ರಿವಾಲ್ ವಿಚಾರಣೆ; ಬಂಧನ ಸಾಧ್ಯತೆ: ‘ಸುಪ್ರೀಂ’ ಮೊರೆ ಹೋದ ದೆಹಲಿ ಸಿಎಂ, ಭದ್ರತೆ ಹೆಚ್ಚಳ
ಇಡಿ ಅಧಿಕಾರಿಗಳ ತಂಡ ದೆಹಲಿ ಸಿಎಂ ನಿವಾಸಕ್ಕೆ ಆಗಮಿಸಿದ ಕಾರಣ, ಮುನ್ನೆಚ್ಚರಿಕೆ ಕ್ರಮವಾಗಿ ದೆಹಲಿ ಪೊಲೀಸರು ಭದ್ರತೆ ಹೆಚ್ಚಿಸಿದ್ದಾರೆ ಮತ್ತು ಸಿವಿಲ್ ಲೈನ್ಸ್‌ನಲ್ಲಿರುವ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ನಿವಾಸದ ಬಳಿ ಹೆಚ್ಚುವರಿ ಸಿಬ್ಬಂದಿಯನ್ನು ನಿಯೋಜಿಸಿದ್ದಾರೆ. ಬ್ಯಾರಿಕೇಡ್‌ಗಳನ್ನು ಹಾಕಲಾಗಿದ್ದು, ಸಹಾಯಕ ಪೊಲೀಸ್ ಆಯುಕ್ತರ ಶ್ರೇಣಿಯ ಅಧಿಕಾರಿಗಳನ್ನು ನಿಯೋಜಿಸಲಾಗಿದೆ.

Arvind Kejriwal ದೆಹಲಿ ಸಿಎಂ ನಿವಾಸದ ಬಳಿ ಮತ್ತು ಇಡಿ ಕಚೇರಿ ಬಳಿ ದೆಹಲಿ ಪೊಲೀಸ್ ಸಿಬ್ಬಂದಿಯೊಂದಿಗೆ RAF ಮತ್ತು CRPF ಪಡೆಗಳನ್ನು ನಿಯೋಜಿಸಲಾಗಿದೆ. ಸಿಎಂ ನಿವಾಸದ ಬಳಿ ಮತ್ತು ಇಡಿ ಕಚೇರಿ ಬಳಿ ಎಎಪಿ ಕಾರ್ಯಕರ್ತರು ಸೇರುವ ನಿರೀಕ್ಷೆ ಇರುವು ಹಿನ್ನೆಲೆಯಲ್ಲಿ ಹೆಚ್ಚಿನ ಭದ್ರತಾ ಸಿಬ್ಬಂದಿಯನ್ನು ನಿಯೋಜನೆ ಮಾಡಲಾಗಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಇಡಿ ಹೆಚ್ಚುವರಿ ಭದ್ರತಾ ಕ್ರಮಗಳನ್ನು ಕೋರಿದ್ದರಿಂದ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಮೂಲಗಳು ತಿಳಿಸಿವೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Alvas Cultural Fest ಡಿಸೆಂಬರ್ 15. ಶಿವಮೊಗ್ಗದಲ್ಲಿ ಆಳ್ವಾಸ್ ಸಾಂಸ್ಕೃತಿಕ ವೈಭವ ಅನಾವರಣ.

Alvas Cultural Fest ಆಳ್ವಾಸ್ ನುಡಿಸಿರಿ ವಿರಾಸತ್ ಜಿಲ್ಲಾ ಘಟಕ, ಕರ್ನಾಟಕ...

Shimoga News ದೇಸಿವಸ್ತುಗಳ ಮಾರಾಟ ಮಳಿಗೆಯಲ್ಲಿ ಸೋಲಾರ್ ಬುಕ್ ಗೆ ಚಾಲನೆ.

Shimoga News ನಗರದ ಗೋಪಾಳ ರಸ್ತೆ ಆಲ್ಕೊಳ ಸಮೀಪದ ಬಂಟರ ಭವನದಲ್ಲಿ...

D S Arun ಗ್ರಾಮ ಪಂಚಾಯತ್ ನಿರ್ವಹಣೆಯಗ್ರಂಥಪಾಲಕರಿಗೆ ಕನಿಷ್ಠ ವೇತನ ಪಾವತಿಗೆಶಾಸಕ ಡಿ.ಎಸ್.ಅರುಣ್ ಒತ್ತಾಯ.

D S Arun ಗ್ರಾಮ ಪಂಚಾಯಿತಿಗಳ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಗ್ರಂಥಪಾಲಕರಿಗೆ ಸರ್ಕಾರ...

Shimoga News ಸೂಗೂರು ಗ್ರಾಮ ಪಂಚಾಯತಿಯ ಸಾಮಾಜಿಕ‌ನ್ಯಾಯ ಸಮಿತಿ ಅಧ್ಯಕ್ಷರಾಗಿ ವೀರೇಶ್ ಕ್ಯಾತಿನಕೊಪ್ಪಅಧಿಕಾರ ಸ್ವೀಕಾರ.

Shimoga News ಶಿವಮೊಗ್ಗ ತಾಲೂಕಿನ ಸೂಗುರು ಗ್ರಾಮ ಪಂಚಾಯತಿಯ ಸಾಮಾಜಿಕ ನ್ಯಾಯ...