Monday, February 2, 2026
Monday, February 2, 2026

Chandragutti ಚಂದ್ರಗುತ್ತಿಯಲ್ಲಿ ಸಾವಿಗೀಡಾದ ಮಂಗಗಳು: ಮಂಗನಕಾಯಿಲೆ ಆತಂಕದಲ್ಲಿ ಸಾರ್ವಜನಿಕರು

Date:

Chandragutti ಸೊರಬ ; ತಾಲೂಕಿನ ಚಂದ್ರಗುತ್ತಿ ಗ್ರಾಮದ ಸೊರಬ ರಸ್ತೆಯ ಜೈನ ಬಸದಿ ಬಳಿ ನಾಲ್ಕು ಮಂಗಗಳು ಮೃತಪಟ್ಟ ಘಟನೆ ಗುರುವಾರ ನಡೆದಿದೆ.

ಸೊರಬ ಪಕ್ಕದ ಶಿರಸಿ ತಾಲೂಕಿನಲ್ಲಿ ಇತ್ತೀಚೆಗೆ ಮಂಗನ ಕಾಯಿಲೆಗೆ ತುತ್ತಾಗಿ ವ್ಯಕ್ತಿಯೋರ್ವ ಮರಣ ಹೊಂದಿರುವುದು ವರದಿಯಾಗಿದೆ. ಅದರ ಬೆನ್ನಲ್ಲೇ ಚಂದ್ರಗುತ್ತಿ ಗ್ರಾಮದಲ್ಲಿ ಮಂಗಗಳು ಸತ್ತಿರುವುದು ಸುತ್ತಮುತ್ತಲಿನ ಗ್ರಾಮಸ್ಥರಲ್ಲಿ ಆತಂಕ ಮೂಡಿಸಿದೆ.

ಚಂದ್ರಗುತ್ತಿ ಭಾಗದಲ್ಲಿ ಈಚೆಗೆ ಅವ್ಯಾಹತವಾಗಿ ಅರಣ್ಯ ನಾಶದ ಜೊತೆಗೆ ಬೆಂಕಿ ಹಚ್ಚಿದ ಪರಿಣಾಮ ಪಶು ಪಕ್ಷಿಗಳಿಗೆ ಆಹಾರ ಸಿಗದಂತಾಗಿದೆ. ನೀರು ಆಹಾರ ಅರಿಸಿ ನಾಡಿಗೆ, ಹೊಲ ಗದ್ದೆಗಳ ಸಮೀಪಕ್ಕೆ ಬಂದು ಜನರ ಕ್ರೂರತ್ವಕ್ಕೆ ಬಲಿಯಾಗುತ್ತಿವೆ. ನದಿ, ಕೆರೆಗಳಿಗೆ ಪಂಪ್ ಹಚ್ಚುವ ಮೂಲಕ ನೀರು ಸಂಪೂರ್ಣ ಬರಿದಾಗಿದ್ದು ಮನುಷ್ಯನ ಉಪಯೋಗಕ್ಕೂ ನೀರು ಲಭಿಸದಂತಾಗಿದೆ.

ಈಚೆಗೆ ಗಿಳಿ, ಮಂಗಗಳು ನಡೆಸುತ್ತಿರುವ ದಾಳಿಯಿಂದ ಬೆಳೆಗಳನ್ನು ರಕ್ಷಿಸಿಕೊಳ್ಳಲು ವಾಸನೆ ರಹಿತ ಔಷಧಿಗಳನ್ನು ಬೆಳೆಗಳಿಗೆ ಸಿಂಪಡಿಸುತ್ತಿದ್ದು, ಅಂತಹ ಔಷಧಿ ಸೇವಿಸಿ ಮಂಗಗಳು ಮೃತಪಟ್ಟಿರಬಹುದು ಎಂದು ಅಧಿಕಾರಿಗಳು ಮತ್ತು ಸಾರ್ವಜನಿಕರು ಶಂಕಿಸಿದ್ದಾರೆ.

ಸ್ಥಳಕ್ಕೆ ಚಂದ್ರಗುತ್ತಿ ಪಶುವೈದ್ಯ ಸಿಬ್ಬಂದಿಗಳು ಭೇಟಿ ನೀಡಿ ಮರಣೋತ್ತರ ಪರೀಕ್ಷೆ ನಡೆಸಿ ಕಾಡಿನಲ್ಲಿ ಅಂತ್ಯ ಸಂಸ್ಕಾರ ನಡೆಸಿದರು.

Chandragutti ಚಂದ್ರಗುತ್ತಿ ಗ್ರಾ.ಪಂ. ಪಿಡಿಒ ನಾರಾಯಣಮೂರ್ತಿ, ಗ್ರಾಪಂ ಸದಸ್ಯ ಎಂ.ಪಿ. ರತ್ನಾಕರ್, ಪಶು ವೈದ್ಯ ಸಿಬ್ಬಂದಿ ಕಣ್ಣಪ್ಪ, ಪ್ರಾಥಮಿಕ ಆರೋಗ್ಯ ಕೇಂದ್ರದ ವೀಣಾ, ಹೇಮಾ, ಮುದಾಸಿರ್, ಆಶಾ ಕಾರ್ಯಕರ್ತೆಯರಾದ ಅಶ್ವಿನಿ, ಶರಾವತಿ, ಅರಣ್ಯ ಸಿಬ್ಬಂದಿ ಪ್ರಶಾಂತ್,
ಗ್ರಾಮಸ್ಥರಾದ ಕೃಷಪ್ಪ, ಪ್ರಶಾಂತ್ ನಾಯ್ಕ್ ಸ್ಥಳಕ್ಕೆ ಭೇಟಿ ನೀಡಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...

MESCOM ಹೊಳೆಹೊನ್ನೂರು ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಹೊಳೆಹೊನ್ನೂರು ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಫೆ. 03 ರಂದು ಬೆಳಿಗ್ಗೆ...

Shivamogga Police ವ್ಯಕ್ತಿ ಮೇಲೆ ಮಾರಣಾಂತಿಕ ಹಲ್ಲೆ, ಮೂವರಿಗೆ 5 ವರ್ಷ ಜೈಲು ಶಿಕ್ಷೆ

Shivamogga Police ಮಾರಣಾಂತಿಕವಾಗಿ ಹಲ್ಲೆ ಮಾಡಿ ಹಾಗೂ ಅವಾಚ್ಯ ಶಬ್ದಗಳಿಂದ ಬೈದು...