Thursday, June 18, 2026
Thursday, June 18, 2026

Arvind Kejriwal  ಕೇಜ್ರಿವಾಲರ ಕೇಸ್ ಗೆ ಅಪ್ರೂವರ್ ಸಾಕ್ಷ್ಯ ಆಗುವೆ- ಸುಖೇಶ್ ಚಂದ್ರಶೇಖರ್

Date:

Arvind Kejriwal  ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದಂತೆ ಬಂಧನಕ್ಕೀಡಾಗಿ ಜಾರಿ ನಿರ್ದೇಶನಾಲಯದ ವಶದಲ್ಲಿರುವ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ವಿರುದ್ಧ ಅಪ್ರೂವರ್ ಆಗಿ ನಾನು ಎಲ್ಲ ಸಾಕ್ಷ್ಯಗಳನ್ನು ಹೇಳುತ್ತೇನೆ ಎಂದು ವಂಚಕ ಸುಕೇಶ್ ಚಂದ್ರಶೇಖರ್ ಹೇಳಿದ್ದಾನೆ.

ಈ ಸಂಬಂಧ ಸುಕೇಶ್ ಚಂದ್ರಶೇಖರ್ ಪತ್ರವೊಂದನ್ನು ಬರೆದಿದ್ದು, ತಿಹಾರ್ ಕ್ಲಬ್ಗೆ ಸ್ವಾಗತ. ನಿಮ್ಮ ಎಲ್ಲ ನಾಟಕ ಬಂದ್. ಯಾವಾಗಲೂ ಸತ್ಯ ಗೆಲ್ಲುತ್ತದೆ. ಇದು ಹೊಸ ಭಾರತದ ಶಕ್ತಿ, ಕಾನೂನಿನ ಮುಂದೆ ಯಾರು ಮೇಲಲ್ಲ, ಎಂಬುದಕ್ಕೆ ಉತ್ತಮ ಉದಾಹರಣೆ. ಹಿಂದಿನದನ್ನು ಬಹಿರಂಗಪಡಿಸುತ್ತೇನೆ. ಅರವಿಂದ್ ಕೇಜ್ರಿವಾಲ್ ಕಳ್ಳ.. ಆತನ ನೈಜತೆಯನ್ನು ಪ್ರಪಂಚಕ್ಕೆ ತೋರಿಸುತ್ತೇನೆ ಎಂದು ಸುಕೇಶ್ ಪತ್ರ ಬರೆದಿದ್ದಾನೆ.

ನನ್ನ ಪ್ರೀತಿಯ ಅರವಿಂದ್ ಕೇಜ್ರಿವಾಲ್ ಜೀ, ತಿಹಾರ್ ಕ್ಲಬ್ಗೆ ಬಾಸ್ ಆಗಿರುವ ನಿಮ್ಮನ್ನು ಸ್ವಾಗತಿಸಲು ಒಂದು ಉತ್ತಮ ಅವಕಾಶವನ್ನು ನೀಡಿದ್ದೀರಾ, ಇಂದಿನಿಂದ ನಿಮ್ಮ ಎಲ್ಲ ನಾಟಕಗಳು ಅಂತ್ಯವಾಗಲಿದೆ. ಮುಂದಿನ ವಾರ ಮಾರ್ಚ್ 25ಕ್ಕೆ ನನ್ನ ಜನ್ಮದಿನ, ಆ ಸಂಭ್ರಮವನ್ನು ನೀವು ಹೆಚ್ಚಿಸಿದ್ದೀರಾ, ಏಕೆಂದರೆ ನನ್ನ ಜನ್ಮದಿನದಂದು ತಿಹಾರ್ಗೆ ಬಂದಿದ್ದೀರಾ, ಅದು ನನಗೆ ಖುಷಿ, ನನ್ನ ಸಂಭ್ರಮ ಡಬಲ್ ಆಗಿದೆ. ತಿಹಾರ್ ಕ್ಲಬ್ ನಡೆಸಲು ಮೂವರು ಸಹೋದರರು ಬಂದಿದ್ದಾರೆ.

Arvind Kejriwal  ಮೊದಲನೇಯವರು ಬಿಗ್ಬಾಸ್ ಅರವಿಂದ್ ಕೇಜ್ರಿವಾಲ್, ಎರಡನೇಯದ್ದು ಸಿಇಒ ಮನೀಶ್ ಸಿಸೋಡಿಯಾ ಮೂರನೇಯದ್ದು, ಸಿಇಒ ಸತ್ಯೇಂದರ್ ಜೈನ್ ಎಂದು ಸುಕೇಶ್ ಲೇವಡಿ ಮಾಡಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Klive Special Article ನಿರ್ಲಕ್ಷ್ಯ ಮಾಡದ ನಿಶ್ಶಬ್ದ ಕಾಯಿಲೆ, ಕಿಡ್ನಿ ಕ್ಯಾನ್ಸರ್- ಡಾ.ಯು‌.ಎಸ್.ಕಾರ್ತಿಕ್

Klive Special Article ಕಿಡ್ನಿ ಕ್ಯಾನ್ಸರ್ : ನೀವು ನಿರ್ಲಕ್ಷಿಸಬಾರದ ನಿಶ್ಯಬ್ದ...

K.S. Eshwarappa ಮನಸ್ಸು ಬಿಜೆಪಿ: ದೇಹ ಮಾತ್ರ ಹೊರಗೆ : ಕೆ.ಎಸ್.ಈಶ್ವರಪ್ಪ

K.S. Eshwarappa ಪಕ್ಷದ ಬೆಳವಣಿಗೆ ಮತ್ತು ಶುದ್ಧೀಕರಣಕ್ಕೆ ಆಗ್ರಹಿಸಿ ಬಿಜೆಪಿಯಿಂದ ಹೊರ...

ಸಮಾನತೆ, ಸ್ವಾವಲಂಬನೆ ಸಾಧಿಸುವಲ್ಲಿ ಸಹಕಾರ ಸಂಘಗಳ ಪಾತ್ರ ಅಪಾರ : ಶ್ರೀರಂಭಾಪುರಿಶ್ರೀ

ಸಮಾನತೆ, ಸ್ವಾವಲಂಬನೆ ಸಾಧನೆಯಲ್ಲಿ ಸಹಕಾರ ಸಂಘಗಳ ಪಾತ್ರ ಮಹತ್ವವಾದದು. ಅಭಿವೃದ್ಧಿಯನ್ನು ಸಾಧಿಸಲು...