Sunday, December 14, 2025
Sunday, December 14, 2025

Shakhahaari ಶಾಖಾಹಾರಿ ಚಿತ್ರರಸಿಕರ ಮನಗೆದ್ದಿದೆ, ಶಿವಮೊಗ್ಗದ ಭಾರತ್ ಸಿನಿಮಾದಲ್ಲಿ ವೀಕ್ಷಿಸಿ- ರಾಜೇಶ್ ಕೀಳಂಬಿ ಚಿತ್ರ ನಿರ್ಮಾಪಕರು

Date:

Shakhahaari ಮಾರ್ಚ್ 24ರಂದು ಶಿವಮೊಗ್ಗ ಜಿಲ್ಲಾ ಕನ್ನಡ ಸಾಹಿತ್ಯ ಸಾಂಸ್ಕೃತಿಕ ವೇದಿಕೆ ವತಿಯಿಂದ ಸಾಹಿತ್ಯ ಹುಣ್ಣಿಮೆ ಶಾಖ ಹರಿ ಚಿತ್ರತಂಡದೊಂದಿಗೆ ಮಾತುಕತೆ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಡಿ ಮಂಜುನಾಥ್ ಅವರು ವಹಿಸಿದ್ದರು.

ಕಾರ್ಯಕ್ರಮವನ್ನು ದೀಪ ಬೆಳಗಿಸುವುದರ ಮುಖಾಂತರ ಉದ್ಘಾಟಿಸಲಾಯಿತು. ಕಾರ್ಯಕ್ರಮದಲ್ಲಿ ಶಾಖಾಹಾರಿ ಚಿತ್ರದ ನಿರ್ಮಾಪಕರಾದ ರಾಜೇಶ್ ಕೀಳಂಬಿ ಅವರು ಮಾತನಾಡಿ,ಶಾಖಾಹಾರಿ ಸಿನಿಮಾವನ್ನು ಶಿವಮೊಗ್ಗದವರೇ ಒಗ್ಗೂಡಿ ಮಾಡಿರುವ ಸಿನಿಮಾವಾಗಿದೆ. ವಿಶೇಷವಾಗಿ ಸಿನಿಮಾದಲ್ಲಿ ಮಲೆನಾಡಿನ ಸೊಬಗನ್ನ ಚಿತ್ರೀಕರಣ ಮಾಡಲಾಗಿದೆ. ಸಾಹಿತ್ಯದಲ್ಲಿರುವ ಹಾಗೆ ಹಾಸ್ಯ, ಚುಟುಕು, ಕವಿತೆ, ಗೀತೆ, ವಿಚಾರ -ಈ ಎಲ್ಲಾ ಅಂಶಗಳು ಸಿನಿಮಾವೂ ಒಳಗೊಂಡಿರುತ್ತದೆ ಎಂದು ಹೇಳಿದರು.

ಶಿವಮೊಗ್ಗದ ಜನರು ಶಾಖಾಹಾರಿ ಸಿನಿಮಾವನ್ನ ವೀಕ್ಷಿಸಿ, ಒಳ್ಳೆಯ ಅಭಿಪ್ರಾಯ ವ್ಯಕ್ತ ಪಡಿಸಿದ್ದಾರೆ. ಶಾಖಾಹಾರಿ ಚಿತ್ರವು ಶಿವಮೊಗ್ಗದ ಭಾರತ್ ಸಿನಿಮಾದಲ್ಲಿ ಪ್ರದರ್ಶನ ಗೊಳ್ಳುತ್ತಿದೆ. ಇದುವರೆಗೂ ಚಿತ್ರವನ್ನ ನೋಡದೆ ಇರುವವರು ಶಾಖಾಹಾರಿಯನ್ನ ನೋಡಿ ಎಂದು ಮನವಿ ಮಾಡಿದರು.

Shakhahaari ಕಾರ್ಯಕ್ರಮದಲ್ಲಿ ಶಾಖಾಹಾರಿ ಚಿತ್ರದ ಇನ್ನೋರ್ವ ನಿರ್ಮಾಪಕರಾದ ಶ್ರೀಮತಿ ರಂಜನಿ ಪ್ರಸನ್ನ, ಚಿತ್ರದ ನಿರ್ದೇಶಕರಾದ ಸಂದೀಪ್ ಸುಂಕದ್, ಚಿತ್ರದ ಸಂಕಲನಕಾರರಾದ ಶಶಾಂಕ್ ನಾರಾಯಣ, ಶ್ರೀ ಹರ್ಷ ಗೋಭಟ್, ಶ್ರೀಮತಿ ಶೃತಿ ಮಡಿವಾಳೆ ಇನ್ನೂ ಮುಂತಾದ ಗಣ್ಯರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Alvas Cultural Fest ಡಿಸೆಂಬರ್ 15. ಶಿವಮೊಗ್ಗದಲ್ಲಿ ಆಳ್ವಾಸ್ ಸಾಂಸ್ಕೃತಿಕ ವೈಭವ ಅನಾವರಣ.

Alvas Cultural Fest ಆಳ್ವಾಸ್ ನುಡಿಸಿರಿ ವಿರಾಸತ್ ಜಿಲ್ಲಾ ಘಟಕ, ಕರ್ನಾಟಕ...

Shimoga News ದೇಸಿವಸ್ತುಗಳ ಮಾರಾಟ ಮಳಿಗೆಯಲ್ಲಿ ಸೋಲಾರ್ ಬುಕ್ ಗೆ ಚಾಲನೆ.

Shimoga News ನಗರದ ಗೋಪಾಳ ರಸ್ತೆ ಆಲ್ಕೊಳ ಸಮೀಪದ ಬಂಟರ ಭವನದಲ್ಲಿ...

D S Arun ಗ್ರಾಮ ಪಂಚಾಯತ್ ನಿರ್ವಹಣೆಯಗ್ರಂಥಪಾಲಕರಿಗೆ ಕನಿಷ್ಠ ವೇತನ ಪಾವತಿಗೆಶಾಸಕ ಡಿ.ಎಸ್.ಅರುಣ್ ಒತ್ತಾಯ.

D S Arun ಗ್ರಾಮ ಪಂಚಾಯಿತಿಗಳ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಗ್ರಂಥಪಾಲಕರಿಗೆ ಸರ್ಕಾರ...

Shimoga News ಸೂಗೂರು ಗ್ರಾಮ ಪಂಚಾಯತಿಯ ಸಾಮಾಜಿಕ‌ನ್ಯಾಯ ಸಮಿತಿ ಅಧ್ಯಕ್ಷರಾಗಿ ವೀರೇಶ್ ಕ್ಯಾತಿನಕೊಪ್ಪಅಧಿಕಾರ ಸ್ವೀಕಾರ.

Shimoga News ಶಿವಮೊಗ್ಗ ತಾಲೂಕಿನ ಸೂಗುರು ಗ್ರಾಮ ಪಂಚಾಯತಿಯ ಸಾಮಾಜಿಕ ನ್ಯಾಯ...