Saturday, October 5, 2024
Saturday, October 5, 2024

Apoorva Sangama ಓದುವ ಹವ್ಯಾಸ ಬೆಳೆಸುತ್ತಿರುವ “ಅಪೂರ್ವ ಸಂಗಮ”

Date:

Apoorva Sangama ಅಪೂರ್ವ ಸಂಗಮ ಎಂಬ ತಂಡವು ಶಿವಮೊಗ್ಗ ನಗರದ ಗಾಂಧಿ ಪಾರ್ಕ್ ನಲ್ಲಿ ಸಾಹಿತ್ಯಾಸಕ್ತ ಅಪರಿಚಿತರೆಲ್ಲ ನಿಗದಿತ ಕಾಲದಲ್ಲಿ ಸೇರಿ ಪರಿಚಿತರಾಗಿ ಓದುವ ಹವ್ಯಾಸವನ್ನು ಕೆಲವು ತಿಂಗಳುಗಳಿಂದ ನಡೆಸಿಕೊಂಡು ಬರುತ್ತಿದೆ. ಈ ಒಂದು ಭೇಟಿ ಕೇವಲ ಓದಿಗೆ ಮೀಸಲಾಗದೆ ಪ್ರಬಂಧ ಸ್ಪರ್ಧೆ, ಅಂಕಣ ಬರೆಯುವುದು, ಕಥೆ, ಕವನ ರಚನೆ ಹೀಗೆ ಸಾಹಿತ್ಯದ ಹಲವು ಮಗ್ಗಲುಗಳ ಮೇಲೆ ಸ್ಪರ್ಧೆ ಏರ್ಪಡಿಸಲಾಗುತ್ತದೆ. ತೀರ್ಪುಗಾರರಾಗಿ ಪರಿಣಿತಿ ಹೊಂದಿರುವ ವ್ಯಕ್ತಿಗಳಿಂದ ವಿಜೇತರನ್ನು ಆಯ್ಕೆ ಮಾಡಲಾಗುತ್ತದೆ. ವಿಜೇತರಿಗೆ ಪುಸ್ತಕವನ್ನು ಬಹುಮಾನವಾಗಿ ನೀಡಲಾಗುತ್ತಿದೆ. ಇದು ಒಂದು ಸ್ಪರ್ಧೆಯಾಗಿ ಉಳಿಯದೆ ತಂಡದ ಅನೇಕರಲ್ಲಿ ಬರೆಯುವ ಹುಮ್ಮಸ್ಸು ಹಾಗೂ ಧೈರ್ಯದಿಂದ ತಮ್ಮ ಅನುಭವಗಳನ್ನು ಬರೆಯಲು ಪ್ರೇರೇಪಿಸುತ್ತದೆ. ಪ್ರತಿ ಭೇಟಿಯಿಂದ ಭೇಟಿಗೆ ಹೊಸತನ ಹೊಸ ಹುರುಪಿನಿಂದ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತಿದೆ. ಈ ಬಾರಿಯ ಭೇಟಿಯಲ್ಲಿ ಸಾಹಿತ್ಯಾಸಕ್ತ ಓದುಗರು ಸೇರಿ ತಮ್ಮ ಆಸಕ್ತಿಯ ಪುಸ್ತಕವನ್ನು ಕೆಲಕಾಲ ಓದಿ ನಂತರ ಎಲ್ಲಾ ಸೇರಿ ತಮ್ಮ ಪರಿಚಯ ಮಾಡಿಕೊಂಡು ತಮ್ಮ ಅನುಭವಗಳನ್ನು ಹಂಚಿಕೊಂಡರು.

ಇದೇ ಸಂದರ್ಭದಲ್ಲಿ ಜನಪದ ಸಾಹಿತ್ಯದಲ್ಲಿ ಜೀವನದ ಮೌಲ್ಯಗಳು ಎಂಬ ವಿಷಯದ ಕುರಿತ ಲೇಖನ ಸ್ಪರ್ಧೆಯಲ್ಲಿ ಪ್ರಥಮ ಬಹುಮಾನ ಗೌಸ್ ಪೀರ್, ದ್ವಿತೀಯ ಬಹುಮಾನ ನವೀನ್ ಚಂದ್ರ ಹಾಗೂ ಅಕ್ಷತಾ ಜೊತೆಗೆ ಹಳ್ಳಿಗಳ ವಿಕಾಸ ಯೋಜನೆಯಲ್ಲಿ ಪರಿಸರ ನಾಶ ಎಂಬ ವಿಷಯದ ಕುರಿತ ಲೇಖನ ಸ್ಪರ್ಧೆಯಲ್ಲಿ ಪ್ರಥಮ ಬಹುಮಾನ ನವೀನ್ ಚಂದ್ರ, ದ್ವಿತೀಯ ಬಹುಮಾನ ಗೌಸ್ ಪೀರ್, ತೃತೀಯ ಬಹುಮಾನವನ್ನು ಅಕ್ಷತಾರವರಿಗೆ ಪುಸ್ತಕ ರೂಪದಲ್ಲಿ ಅಪೂರ್ವ ಸಂಗಮ ತಂಡದ ಮುಖ್ಯಸ್ಥರಾದ ಹಾಗೂ ಕಾರ್ಯಕ್ರಮದ ಆಯೋಜಕರಾದ ಗುರುದತ್ತ್ ನೀಡಿದರು.

Apoorva Sangama ನಂತರ ಶುಚಿತ್ವ ಕಾಪಾಡುವ ನಿಟ್ಟಿನಲ್ಲಿ ನದಿ ತೀರದಲ್ಲಿ ಸ್ವಚ್ಛತೆ ಮಾಡುವ ಬಗ್ಗೆ ಹಾಗೂ ಜನರಿಗೆ ನದಿಯ ಪ್ರಾಮುಖ್ಯತೆಯ ಅರಿವು ಮೂಡಿಸುವ ಬಗ್ಗೆ ಚರ್ಚೆ ಮಾಡಲಾಯಿತು.
ಕಾರ್ಯಕ್ರಮದಲ್ಲಿ ಹಲವು ಕಾಲೇಜಿನ ವಿದ್ಯಾರ್ಥಿಗಳು, ಸಾಹಿತ್ಯಾಸಕ್ತರು ಹಾಗೂ ಅನೇಕ ಕ್ಷೇತ್ರಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಓದುಗರು ಪಾಲ್ಗೊಂಡಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S.N.Chennabasappa ಬನ್ನಿ ಪೂಜೆಗೆ ಶಾಸಕ ಚೆನ್ನಿ ಅವರಿಂದ ಪೂರ್ವೋಚಿತ ಸಿದ್ಧತೆ

S.N.Chennabasappa ನವರಾತ್ರಿ ಉತ್ಸವದ ಕಡೆಯ ದಿನದಂದು ನಗರದ ಅಲ್ಲಮಪ್ರಭು ಮೈದಾನದಲ್ಲಿ (ಫ್ರೀಡಂ...

Shree Sigandur Chowdeshwari Temple ಸಿಗಂದೂರು ದೇವಿ ವೈಭವದ ನವರಾತ್ರಿ ಉತ್ಸವ

Shree Sigandur Chowdeshwari Temple ಶ್ರೀ ಕ್ಷೇತ್ರ ಸಿಗಂದೂರಿನಲ್ಲಿ...

Madhu Bangarappa ಸಾರ್ವಜನಿಕರ ಅಹವಾಲುಗಳಿಗೆ ಸಕಾಲದಲ್ಲಿ ಅಗತ್ಯ ಸೌಲಭ್ಯ ಒದಗಿಸಿ- ಮಧು ಬಂಗಾರಪ್ಪ

Madhu Bangarappa ಸೌಲಭ್ಯ ಅರಸಿ ಕಚೇರಿಗೆ ಆಗಮಿಸುವ ಗ್ರಾಮೀಣ ಮತ್ತು...

CM Siddharamaiah ಚಾಮುಂಡೇಶ್ವರಿ ಆಶೀರ್ವಾದದಿಂದಲೇ ಎರಡನೇ ಬಾರಿಗೆ ಮುಖ್ಯಮಂತ್ರಿಯಾಗಿದ್ದೇನೆ- ಸಿದ್ಧರಾಮಯ್ಯ

CM Siddharamaiah ತಾಯಿ ಚಾಮುಂಡೇಶ್ವರಿ ಹಾಗೂ ಇಲ್ಲಿನ ಜನರ ಆಶೀರ್ವಾದದಿಂದಲೇ ಎರಡನೇ...