Saturday, December 6, 2025
Saturday, December 6, 2025

B. S. Yediyurappa ಹೊರನಾಡು ದೇವಿಗೆ ವಿಶೇಷ ಸೇವೆ ಸಲ್ಲಿಸಿದ ಬಿಎಸ್ ವೈ ಕುಟುಂಬ

Date:

B. S. Yediyurappa ಲೋಕಸಭೆ ಚುನಾವಣೆಯ ಅಖಾಡ ರಂಗೇರುತ್ತಿರುವ ಸಂದರ್ಭದಲ್ಲಿ ಜಿಲ್ಲೆಯ ಕಳಸ ತಾಲೂಕಿನಲ್ಲಿರುವ ಶ್ರೀ ಅನ್ನಪೂರ್ಣೇಶ್ವರಿ ಕ್ಷೇತ್ರಕ್ಕೆ (ಹೊರನಾಡು) ಮಾಜಿ ಮುಖ್ಯಮಂತ್ರಿ ಹಾಗು ಬಿಜೆಪಿಯ ಹಿರಿಯ ನಾಯಕ ಬಿ.ಎಸ್.ಯಡಿಯೂರಪ್ಪ ತಮ್ಮ ಕುಟುಂಬ ಸದಸ್ಯರೊಂದಿಗೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು.

ಇದಕ್ಕೂ ಮುನ್ನ ಬಿಎಸ್​ವೈ ಕುಟುಂಬಕ್ಕೆ ದೇಗುಲದ ಆಡಳಿತ ಮಂಡಳಿ ಅದ್ಧೂರಿ ಸ್ವಾಗತ ನೀಡಿತು. ಅನ್ನಪೂರ್ಣೇಶ್ವರಿ ದೇವರಿಗೆ ವಿಶೇಷ ಪೂಜೆ, ಪ್ರಾರ್ಥನೆ ಸಲ್ಲಿಸಿದ ಕುಟುಂಬ ಸದಸ್ಯರು, ದೇವಸ್ಥಾನದ ಆವರಣದಲ್ಲಿ ರಥೋತ್ಸವ ಸೇವೆ ಮಾಡಿಸಿದರು. ಅನ್ನಪೂರ್ಣೇಶ್ವರಿ ಕುಳಿತ ರಥವನ್ನು ದೇವಸ್ಥಾನದ ಸುತ್ತ ಯಡಿಯೂರಪ್ಪ ಹಾಗೂ ಪುತ್ರ ಬಿ.ವೈ ವಿಜಯೇಂದ್ರ ಎಳೆದರು.

B. S. Yediyurappa ರಥ ಎಳೆಯುವಾಗ ದೇಗುಲದ ಆವರಣದಲ್ಲಿ ಮಂತ್ರ ಘೋಷ ಮೊಳಗಿತು. ಯಡಿಯೂರಪ್ಪ ಕುಟುಂಬದ 20ಕ್ಕೂ ಹೆಚ್ಚು ಸದಸ್ಯರು ಆಗಮಿಸಿದ್ದರು. ಬಿಎಸ್‌ವೈ ಕುಟುಂಬ ದೇಗುಲದಲ್ಲಿ ಚಂಡಿಕಾಹೋಮವನ್ನೂ ನಡೆಸಲಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ತಮ್ಮ ಕುಟುಂಬ ಹಾಗೂ ತಮ್ಮ ಇಷ್ಟಾರ್ಥ ಸಿದ್ಧಿಗಾಗಿ ವಿಶೇಷ ಹೋಮ ನಡೆಸುತ್ತಿದ್ದಾರೆ ಎಂದು ತಿಳಿದು ಬಂದಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Indian Medical Association 30 ವರ್ಷ ದಾಟಿದ ಮಹಿಳೆಯರು ಪ್ಯಾಪ್ಸ್ ಮಿಯರ್ ಟೆಸ್ಟ್ ಅನ್ನು 3 ವರ್ಷಕ್ಕೆ ಒಂದು ಬಾರಿ‌ ಮಾಡಿಸಬೇಕು- ಡಾ.ರಕ್ಷಾರಾವ್

Indian Medical Association ಮಹಿಳೆಯರು ಉತ್ತಮ ಆರೋಗ್ಯ ಕಾಪಾಡಿಕೊಳ್ಳಲು ಜಾಗ್ರತೆ ವಹಿಸಬೇಕು...

MESCOM ಡಿಸೆಂಬರ್ ‌9. ಕುಂಸಿ ಮೆಸ್ಕಾಂ ಉಪವಿಭಾಗ ಕಚೇರಿಯಲ್ಲಿ ಜನ ಸಂಪರ್ಕ ಸಭೆ

MESCOM ಕುಂಸಿ ಮೆಸ್ಕಾಂ ಉಪವಿಭಾಗದಲ್ಲಿ ಡಿ. 09 ರಂದು ಬೆಳಗ್ಗೆ 11.00...