Tuesday, October 1, 2024
Tuesday, October 1, 2024

Geetha Shivarajkumar ಲೋಕಸಭೆಯಲ್ಲಿ ನಿಮ್ಮ ಧ್ವನಿಯಾಗಿಕೆಲಸ ನಾಡುವ ಆಸೆ- ಗೀತಾ ಶಿವರಾಜ್ ಕುಮಾರ್

Date:

Geetha Shivarajkumar ಮಲೆನಾಡಿನ ಅರಣ್ಯಭೂಮಿ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು ಗೀತಾ ಶಿವರಾಜಕುಮಾರ್ ಅವರನ್ನು ಗೆಲ್ಲಿಸುವಂತೆ ಸಚಿವ ಮ
ಧು ಬಂಗಾರಪ್ಪ ಮನವಿ ಮಾಡಿದರು.
ಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ಪಕ್ಷದಿಂದ ಸೋಮವಾರ ಇಲ್ಲಿ ಆಯೋಜಿಸಿದ್ದ ಕಾರ್ಯಕರ್ತರ ಸಭೆಯನ್ನು ಉದ್ದೇಶಿಸಿ ಅವರು
ಮಾತನಾಡಿದರು.
ಅರಣ್ಯಭೂಮಿಯಲ್ಲಿ ಸಾಗುವಳಿ ಮಾಡುತ್ತಿರುವವರು, ವಾಸ ಮಾಡುತ್ತಿರುವವರು ತೀವ್ರ ಸಂಕಷ್ಟದಲ್ಲಿದ್ದಾರೆ. ಮಾಜಿ ಮುಖ್ಯಮಂತ್ರಿ ಎಸ್.ಬಂಗಾರಪ್ಪ, ಮಾಜಿ ಸಚಿವ ಕಾಗೋಡು ತಿಮ್ಮಪ್ಪ ಕನಸು ಸಹ ಅಂತಹವರಿಗೆ ಹಕ್ಕುಪತ್ರ ಕೊಡಬೇಕು ಎನ್ನುವುದು ಆಗಿತ್ತು. ಈತನಕ ಈಡೇರದ ಬಯಕೆಯನ್ನು ಗೀತಾ ಶಿವರಾಜ ಕುಮಾರ್ ನಿಮ್ಮ ಧ್ವನಿಯಾಗಿ ಈಡೇರಿಸುತ್ತಾರೆ ಎಂದರು.
ಶಾಸಕ ಗೋಪಾಲಕೃಷ್ಣ ಬೇಳೂರು ಮಾತನಾಡಿ, ರಾಜ್ಯ ಸರ್ಕಾರ ಜಾರಿಗೆ ತಂದಿರುವ ಗ್ಯಾರಂಟಿ ಶೇ. ೯೫ಕ್ಕೂ ಹೆಚ್ಚು ಯಶಸ್ವಿಯಾಗಿದೆ. ಕಾಂಗ್ರೆಸ್ ಸರ್ಕಾರದ ಸಾಧನೆ ರಾಜ್ಯದ ಮನೆಮನೆಯಲ್ಲಿ ಚರ್ಚೆಯಾಗುತ್ತಿದೆ. ಹಿಂದಿನ ಸರ್ಕಾರದಲ್ಲಿ ದುಷ್ಟಕೂಟವೊಂದು ಯಾವುದೇ ಅಭಿವೃದ್ಧಿ ಕೆಲಸ ಮಾಡದೆ ಮತದಾರರನ್ನು ವಂಚಿಸಿದೆ. ಬಡವರ ಕಲ್ಯಾಣಕ್ಕಾಗಿ ಇರುವ ಉದ್ಯೋಗ ಖಾತ್ರಿ ಯಶಸ್ವಿಯಾಗಿಲ್ಲ, ಆಶ್ರಯ, ಅಕ್ರಮಸಕ್ರಮ ಯಾವುದೂ ಜನರಿಗೆ ಪರಿಣಾಮಕಾರಿಯಾಗಿ ತಲುಪಿಲ್ಲ. ಸಂಸದ ರಾಘವೇಂದ್ರ ನಾಲ್ಕೂವರೆ ವರ್ಷ ಎಲ್ಲಿಯೂ ಕಾಣ ಸಿಕೊಳ್ಳದೇ ಈಗ ಪ್ರತ್ಯಕ್ಷವಾಗಿದ್ದಾರೆ. ಚುನಾವಣೆ ಹತ್ತಿರ ಬಂದಾಗ ಈಡಿಗರ ಸಮಾವೇಶ ಮಾಡಿ ಕಾಗೋಡು ತಿಮ್ಮಪ್ಪ ಅವರನ್ನು ಬಿಟ್ಟು ಯಡಿಯೂರಪ್ಪ ಅವರನ್ನು ಮಾಜಿ ಶಾಸಕ ಹಾಲಪ್ಪ ಸನ್ಮಾನಿಸಿದ್ದಾರೆ ಎಂದರು.
Geetha Shivarajkumar ಶಿವಮೊಗ್ಗ ಲೋಕಸಭಾ ಅಭ್ಯರ್ಥಿ ಗೀತಾ ಶಿವರಾಜ ಕುಮಾರ್ ಮಾತನಾಡಿ, ಲೋಕಸಭೆಯಲ್ಲಿ ನಿಮ್ಮ ಧ್ವನಿಯಾಗಿ ಕೆಲಸ ಮಾಡುವ ಆಸೆ ಇದ್ದು, ಮತದಾರರು ಅದಕ್ಕೆ ಅವಕಾಶ ಮಾಡಿಕೊಡಬೇ ಕೆಂದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

CM Siddharamaih ಪರಿಹಾರ ರೂಪದಲ್ಲಿ ಪಡೆದಿದ್ದ ನಿವೇಶನಗಳನ್ನ ಪತ್ನಿ ಹಿಂದಿರುಗಿಸಿದ್ದಾರೆ- ಸಿದ್ಧರಾಮಯ್ಯ

CM Siddharamaih ಮೈಸೂರಿನ ಮುಡಾ ಭೂಸ್ವಾಧೀನ ನಡೆಸದೆ ವಶಕ್ಕೆ ಪಡೆದಿದ್ದ...

R. Ashok ಸಿದ್ಧರಾಮಯ್ಯನವರಿಗೆ ತಮ್ಮ ತಪ್ಪಿನ ಅರಿವಾಯಿತಲ್ಲ”-ಆರ್ .ಅಶೋಕ್ ಪ್ರತಿಕ್ರಿಯೆ

R. Ashok ಮೂಡಾ ಹಗರಣದಲ್ಲಿ ಕಾನೂನಿನ ಕುಣಿಕೆ ಬಿಗಿಯಾಗುತ್ತಿದ್ದಂತೆ ಸಿಎಂ ಸಿದ್ಧರಾಮಯ್ಯ...

Shivamogga-Bhadravathi Urban Development Authority ಊರಗಡೂರು ನಿವೇಶನ ಪಡೆಯಲು ಅರ್ಜಿ ಸಲ್ಲಿಕೆ ಅಂತಿಮ ದಿನಾಂಕ ಮುಂದೂಡಿಕೆ

Shivamogga-Bhadravathi Urban Development Authority ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರವು ಶಿವಮೊಗ್ಗ ನಗರದ...