Wednesday, September 16, 2026
Wednesday, September 16, 2026

Geetha Shivarajkumar ಲೋಕಸಭೆಯಲ್ಲಿ ನಿಮ್ಮ ಧ್ವನಿಯಾಗಿಕೆಲಸ ನಾಡುವ ಆಸೆ- ಗೀತಾ ಶಿವರಾಜ್ ಕುಮಾರ್

Date:

Geetha Shivarajkumar ಮಲೆನಾಡಿನ ಅರಣ್ಯಭೂಮಿ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು ಗೀತಾ ಶಿವರಾಜಕುಮಾರ್ ಅವರನ್ನು ಗೆಲ್ಲಿಸುವಂತೆ ಸಚಿವ ಮ
ಧು ಬಂಗಾರಪ್ಪ ಮನವಿ ಮಾಡಿದರು.
ಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ಪಕ್ಷದಿಂದ ಸೋಮವಾರ ಇಲ್ಲಿ ಆಯೋಜಿಸಿದ್ದ ಕಾರ್ಯಕರ್ತರ ಸಭೆಯನ್ನು ಉದ್ದೇಶಿಸಿ ಅವರು
ಮಾತನಾಡಿದರು.
ಅರಣ್ಯಭೂಮಿಯಲ್ಲಿ ಸಾಗುವಳಿ ಮಾಡುತ್ತಿರುವವರು, ವಾಸ ಮಾಡುತ್ತಿರುವವರು ತೀವ್ರ ಸಂಕಷ್ಟದಲ್ಲಿದ್ದಾರೆ. ಮಾಜಿ ಮುಖ್ಯಮಂತ್ರಿ ಎಸ್.ಬಂಗಾರಪ್ಪ, ಮಾಜಿ ಸಚಿವ ಕಾಗೋಡು ತಿಮ್ಮಪ್ಪ ಕನಸು ಸಹ ಅಂತಹವರಿಗೆ ಹಕ್ಕುಪತ್ರ ಕೊಡಬೇಕು ಎನ್ನುವುದು ಆಗಿತ್ತು. ಈತನಕ ಈಡೇರದ ಬಯಕೆಯನ್ನು ಗೀತಾ ಶಿವರಾಜ ಕುಮಾರ್ ನಿಮ್ಮ ಧ್ವನಿಯಾಗಿ ಈಡೇರಿಸುತ್ತಾರೆ ಎಂದರು.
ಶಾಸಕ ಗೋಪಾಲಕೃಷ್ಣ ಬೇಳೂರು ಮಾತನಾಡಿ, ರಾಜ್ಯ ಸರ್ಕಾರ ಜಾರಿಗೆ ತಂದಿರುವ ಗ್ಯಾರಂಟಿ ಶೇ. ೯೫ಕ್ಕೂ ಹೆಚ್ಚು ಯಶಸ್ವಿಯಾಗಿದೆ. ಕಾಂಗ್ರೆಸ್ ಸರ್ಕಾರದ ಸಾಧನೆ ರಾಜ್ಯದ ಮನೆಮನೆಯಲ್ಲಿ ಚರ್ಚೆಯಾಗುತ್ತಿದೆ. ಹಿಂದಿನ ಸರ್ಕಾರದಲ್ಲಿ ದುಷ್ಟಕೂಟವೊಂದು ಯಾವುದೇ ಅಭಿವೃದ್ಧಿ ಕೆಲಸ ಮಾಡದೆ ಮತದಾರರನ್ನು ವಂಚಿಸಿದೆ. ಬಡವರ ಕಲ್ಯಾಣಕ್ಕಾಗಿ ಇರುವ ಉದ್ಯೋಗ ಖಾತ್ರಿ ಯಶಸ್ವಿಯಾಗಿಲ್ಲ, ಆಶ್ರಯ, ಅಕ್ರಮಸಕ್ರಮ ಯಾವುದೂ ಜನರಿಗೆ ಪರಿಣಾಮಕಾರಿಯಾಗಿ ತಲುಪಿಲ್ಲ. ಸಂಸದ ರಾಘವೇಂದ್ರ ನಾಲ್ಕೂವರೆ ವರ್ಷ ಎಲ್ಲಿಯೂ ಕಾಣ ಸಿಕೊಳ್ಳದೇ ಈಗ ಪ್ರತ್ಯಕ್ಷವಾಗಿದ್ದಾರೆ. ಚುನಾವಣೆ ಹತ್ತಿರ ಬಂದಾಗ ಈಡಿಗರ ಸಮಾವೇಶ ಮಾಡಿ ಕಾಗೋಡು ತಿಮ್ಮಪ್ಪ ಅವರನ್ನು ಬಿಟ್ಟು ಯಡಿಯೂರಪ್ಪ ಅವರನ್ನು ಮಾಜಿ ಶಾಸಕ ಹಾಲಪ್ಪ ಸನ್ಮಾನಿಸಿದ್ದಾರೆ ಎಂದರು.
Geetha Shivarajkumar ಶಿವಮೊಗ್ಗ ಲೋಕಸಭಾ ಅಭ್ಯರ್ಥಿ ಗೀತಾ ಶಿವರಾಜ ಕುಮಾರ್ ಮಾತನಾಡಿ, ಲೋಕಸಭೆಯಲ್ಲಿ ನಿಮ್ಮ ಧ್ವನಿಯಾಗಿ ಕೆಲಸ ಮಾಡುವ ಆಸೆ ಇದ್ದು, ಮತದಾರರು ಅದಕ್ಕೆ ಅವಕಾಶ ಮಾಡಿಕೊಡಬೇ ಕೆಂದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಗುಡ್ ಲಕ್ ಆರೈಕೆ ಕೇಂದ್ರಕ್ಕೆ ಹೇಮಾ ಗೋಣೂರು ಅವರಿಂದ ರೂ.50 ಸಾವಿರ ದೇಣಿಗೆ

ಅಶಕ್ತರು ಹಾಗೂ ಹಿರಿಯರ ಸೇವೆ ದೇವರ ಸೇವೆಗೆ ಸಮಾನವಾಗಿದೆ. ನಾವು ಮಾಡುವ...

MESCOM ಸೆ.16. ಜೋಗದ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಜನಸಂಪರ್ಕ ಸಭೆ

MESCOM ಜೋಗ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಸೆ. 16 ರಂದು ಬೆಳಿಗ್ಗೆ...