Sunday, December 14, 2025
Sunday, December 14, 2025

Siddaramaiah ಪ್ರತಿಯೊಂದು ಯೋಜನೆಯು ಜನರಿಗೆ ತಲುಪಬೇಕು – ಸಿದ್ದರಾಮಯ್ಯ

Date:

Siddaramaiah ನಮ್ಮ ಕಾರ್ಯಕರ್ತರಿಗೆ ನಾವು ಮಾಡಿರುವ ಕೆಲಸವನ್ನು ಜನರಿಗೆ ಮುಟ್ಟಿಸುವ ಕೆಲಸ ಮಾಡಬೇಕು ಎಂದು ಹೇಳಿದ್ದೇನೆ. ಹಿಂದಿನ ಬಾರಿ ನಮ್ಮ ಸರ್ಕಾರ 168 ಭರವಸೆಗಳಲ್ಲಿ 158 ಭರವಸೆಗಳನ್ನು ಈಡೇರಿಸಿತ್ತು. ಹಾಗಾಗಿ ನುಡಿದಂತೆ ನಡೆದಿದ್ದೇವೆ ಎಂದು ಹೆಮ್ಮೆಯಿಂದ ಹೇಳುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದ್ದಾರೆ.

ನಾವು ಹಣ ಕೇಳುತ್ತಿರುವುದು ಗ್ಯಾರಂಟಿಗಳಿಗೆ ಎಂದು ಸೀತಾರಾಮನ್
ಹೇಳುತ್ತಾರೆ. ಈ ಬಗ್ಗೆ ಒಂದೇ ವೇದಿಕೆಯಲ್ಲಿ ಚರ್ಚೆ ಮಾಡಲು ಬಿಜೆಪಿಯವರಿಗೆ ನಾವು ಆಹ್ವಾನ ನೀಡಿದ್ದೇವೆ. ಗ್ಯಾರಂಟಿಗಳಿಗೆ ಒಂದು ಪೈಸೆಯನ್ನೂ ಕೊಡಬೇಡಿ. ಮುಂದಿನ ವರ್ಷದಲ್ಲಿ ಗ್ಯಾರಂಟಿ ಯೋಜನೆಗಳಿಗೆ 52,009 ಕೋಟಿ ರೂ.ಗಳನ್ನು ಬಜೆಟ್ ನಲ್ಲಿ ಮೀಸಲಿರಿಸಲಾಗಿದೆ.
Siddaramaiah 2023-24 ರ ಬಜೆಟ್ ನಲ್ಲಿ ಭದ್ರಾ ಮೇಲ್ದಂಡೆ ಯೋಜನೆಗೆ 5,300 ಕೋಟಿ ರೂ.ಗಳನ್ನು ಕೊಡುತ್ತೇವೆ ಎಂದಿದ್ದರು, ಒಂದೇ ಒಂದು ಪೈಸೆ ಬಂದಿಲ್ಲ. ಬಜೆಟ್ ನಲ್ಲಿ ಘೋಷಿಸಿದಂತೆ ಹಣ ಕೊಟ್ಟಿದ್ದೇವೆ ಎಂದು ದೇವರ ಮೇಲೆ ಪ್ರಮಾಣ ಮಾಡಿ ಹೇಳಲಿ.
18,171 ಕೋಟಿ ರೂ.ಗಳ ಬರಪರಿಹಾರವನ್ನು ಕೊಡಲು ಮನವಿ ಮಾಡಿ 5 ತಿಂಗಳಾಗಿದ್ದರೂ ಒಂದು ರೂಪಾಯಿ ನೀಡಿಲ್ಲ. ರೈತರು ಕಷ್ಟದಲ್ಲಿದ್ದರೂ ಈವರೆಗೆ ಒಂದು ರೂಪಾಯಿ ಬಿಡುಗಡೆ ಮಾಡಿಲ್ಲ. ಇದು ಸತ್ಯ. ಬಿಜೆಪಿ
ಕರ್ನಾಟಕದ ಜನರನ್ನು ಅತ್ಯಂತ ಅಲಕ್ಷ್ಯದಿಂದ ಕಾಣುತ್ತಿದ್ದು, ಮಲತಾಯಿ ಧೋರಣೆ ತೋರುತ್ತಿದ್ದಾರೆ ಎಂದು ಹೇಳಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Alvas Cultural Fest ಡಿಸೆಂಬರ್ 15. ಶಿವಮೊಗ್ಗದಲ್ಲಿ ಆಳ್ವಾಸ್ ಸಾಂಸ್ಕೃತಿಕ ವೈಭವ ಅನಾವರಣ.

Alvas Cultural Fest ಆಳ್ವಾಸ್ ನುಡಿಸಿರಿ ವಿರಾಸತ್ ಜಿಲ್ಲಾ ಘಟಕ, ಕರ್ನಾಟಕ...

Shimoga News ದೇಸಿವಸ್ತುಗಳ ಮಾರಾಟ ಮಳಿಗೆಯಲ್ಲಿ ಸೋಲಾರ್ ಬುಕ್ ಗೆ ಚಾಲನೆ.

Shimoga News ನಗರದ ಗೋಪಾಳ ರಸ್ತೆ ಆಲ್ಕೊಳ ಸಮೀಪದ ಬಂಟರ ಭವನದಲ್ಲಿ...

D S Arun ಗ್ರಾಮ ಪಂಚಾಯತ್ ನಿರ್ವಹಣೆಯಗ್ರಂಥಪಾಲಕರಿಗೆ ಕನಿಷ್ಠ ವೇತನ ಪಾವತಿಗೆಶಾಸಕ ಡಿ.ಎಸ್.ಅರುಣ್ ಒತ್ತಾಯ.

D S Arun ಗ್ರಾಮ ಪಂಚಾಯಿತಿಗಳ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಗ್ರಂಥಪಾಲಕರಿಗೆ ಸರ್ಕಾರ...

Shimoga News ಸೂಗೂರು ಗ್ರಾಮ ಪಂಚಾಯತಿಯ ಸಾಮಾಜಿಕ‌ನ್ಯಾಯ ಸಮಿತಿ ಅಧ್ಯಕ್ಷರಾಗಿ ವೀರೇಶ್ ಕ್ಯಾತಿನಕೊಪ್ಪಅಧಿಕಾರ ಸ್ವೀಕಾರ.

Shimoga News ಶಿವಮೊಗ್ಗ ತಾಲೂಕಿನ ಸೂಗುರು ಗ್ರಾಮ ಪಂಚಾಯತಿಯ ಸಾಮಾಜಿಕ ನ್ಯಾಯ...