Sunday, August 2, 2026
Sunday, August 2, 2026

Geetha Shivarajkumar ರೈತರಿಗೆ ಬೆಂಬಲ ಬೆಲೆ ಸಿಗುವಂತೆ ಕಾರ್ಯ ನಿರ್ವಹಿಸುವೆ- ಗೀತಾ ಶಿವರಾಜ್ ಕುಮಾರ್

Date:

Geetha Shivarajkumar ಶಿವಮೊಗ್ಗ ಜಿಲ್ಲೆಯ ಗ್ರಾಮಾಂತರ ಪ್ರದೇಶಗಳಿಗೆ ಮಾಜಿ ಮುಖ್ಯಮಂತ್ರಿ ಬಂಗಾರಪ್ಪ ಅವರು ಅಪಾರ ಕೊಡುಗೆ ನೀಡಿದ್ದಾರೆ.

ಅದೇ, ಧೈರ್ಯದಿಂದ ಗೀತಾಕ್ಕಗೆ ಮತ ನೀಡಿ, ಚುನಾವಣೆಯಲ್ಲಿ ಗೆಲುವು ಸಾಧಿಸಲು ಆಶೀರ್ವದಿಸಬೇಕು ಎಂದು ಕೇಳಿಕೊಳ್ಳುತ್ತಿದ್ದೇನೆ‌ ಎಂದು ಶಿಕ್ಷಣ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಮಧುಬಂಗಾರಪ್ಪ ಹೇಳಿದರು.

ತಾಲ್ಲೂಕಿನ ಹಾರನಹಳ್ಳಿ ಗ್ರಾಮದಲ್ಲಿ ಬುಧವಾರ ಆಯೋಜಿಸಿದ್ದ ಕಾಂಗ್ರೆಸ್ ಪಕ್ಷದ ಲೋಕಸಭಾ ಚುನಾವಣೆ ಶಿವಮೊಗ್ಗ ಕ್ಷೇತ್ರದ ಅಭ್ಯರ್ಥಿ ಗೀತಾ ಶಿವರಾಜಕುಮಾರ್ ಪರ ಪ್ರಚಾರ ಸಭೆಯಲ್ಲಿ ಮಾತನಾಡಿದರು.

ರಾಜ್ಯದಲ್ಲಿ ಗ್ಯಾರಂಟಿ ಯೋಜನೆಗಳು ಜನ ಸಾಮಾನ್ಯರಿಗೆ ದಾರಿ ದೀಪವಾಗಿವೆ. ಅದೇ ರೀತಿ, ಎಸ್.ಬಂಗಾರಪ್ಪ ಅವರ ಆಡಳಿತದ ಅವಧಿಯಲ್ಲಿ ಉಚಿತ ವಿದ್ಯುತ್ ಸೇರಿದಂತೆ ಅನೇಕ ಯೋಜನೆಗಳನ್ನು ಜಾರಿಗೆ ತಂದು ಶೋಷಿತ ವರ್ಗಕ್ಕೆ ನೆರಳಾಗಿ ನಿಂತಿದ್ದರು ಎಂದರು.

ಲೋಕಸಭಾ ಕ್ಷೇತ್ರ ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜಕುಮಾರ್ ಮಾತನಾಡಿ, ರೈತರಿಗೆ ಬೆಂಬಲ ಬೆಲೆ ಸಿಗುವ ನಿಟ್ಟಿನಲ್ಲಿ ಕಾರ್ಯ ನಿರ್ವಹಿಸುತ್ತೇನೆ. ರಾಜ್ಯ ಮಟ್ಟದಲ್ಲಿ ಸಚಿವ ಮಧು ಬಂಗಾರಪ್ಪ ರೈತರ ಕಷ್ಟಗಳಿಗೆ ನೆರವಾದರೆ, ಕೇಂದ್ರದ ಹಂತದಲ್ಲಿ ರೈತರ ಕಷ್ಟಗಳಿಗೆ ಸ್ಪಂದಿಸಲು ನಾನು ಶ್ರಮಿಸುತ್ತೇನೆ. ಅದೇ ಕಾರಣಕ್ಕೆ ನನಗೆ ಮತ ನೀಡಿ ಎಂದು ಕೋರಿದರು.

Geetha Shivarajkumar ನಟ ಶಿವರಾಜ ಕುಮಾರ್ ಮಾತನಾಡಿ, ಜನರು ಬದಲಾವಣೆ ಬಯಸುತ್ತಿದ್ದಾರೆ. ಗ್ಯಾರಂಟಿ ಯೋಜನೆಗಳ ಬಗ್ಗೆ ಹೆಚ್ಚು ಮಾತನಾಡುವುದಿಲ್ಲ. ಆದರೆ, ಈ ಯೋಜನೆಗಳಿಂದ ಬಡವರಿಗೆ ಸಹಾಯ ಆಗ ಬೇಕು. ಆಗ ಮಾತ್ರ ಸರ್ಕಾರದ ಯೋಜನೆಗಳಿಗೆ ಬೆಲೆ ಸಿಗಲಿದೆ. ಈ ನಿಟ್ಟಿನಲ್ಲಿ ಯೋಜನೆಗಳು ಜನಸಾಮಾನ್ಯರಿಗೆ ನೆರವಾಗಿವೆ ಎಂದು ನಾನು ಬಯಸುತ್ತೇನೆ ಎಂದು ಹೇಳಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Raghavendra ₹ 6.400 ಕೋಟಿ ವೆಚ್ಚದ ಶಿವಮೊಗ್ಗ- ತುಮಕೂರು ಚತುಷ್ಪಥ ರಸ್ತೆ ಮುಂದಿನ ಮಾರ್ಚ್ ಗೆ ಸಿದ್ಧ- ಬಿ.ವೈ.ರಾಘವೇಂದ್ರ

B.Y. Raghavendra ಮಲೆನಾಡು ಹಾಗೂ ರಾಜಧಾನಿ ಬೆಂಗಳೂರು ನಡುವಿನ ಸಂಪರ್ಕವನ್ನು ಕ್ರಾಂತಿಕಾರಕವಾಗಿ...

S. N. Channabasappa ಬಡಾವಣೆಗಳಿಗೆ ಮೂಲಭೂತ ಸೌಕರ್ಯ ಒದಗಿಸುವುದು ನಮ್ಮ ಮುಖ್ಯ ಕರ್ತವ್ಯ- ಎಸ್.ಎನ್.ಚನ್ನಬಸಪ್ಪ

S. N. Channabasappa ಶಿವಮೊಗ್ಗ ನಗರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಗೆ ಒಳಪಡುವ...

Rotary Club of Shivamogga ಮಕ್ಕಳಲ್ಲಿ ರೋಟರಿ ಸಂಸ್ಥೆ ನಾಯಕತ್ವ ಗುಣಗಳನ್ನ ಬೆಳೆಸುತ್ತದೆ- ಡಿ.ಕೆ.ನರಹರಿ

Rotary Club of Shivamogga ರೋಟರಿ ಸಂಸ್ಥೆಯು ಮಕ್ಕಳಿಗೆ ಶಾಲಾ ಹಂತದಲ್ಲಿಯೇ...

B.Y. Raghavendra ಹವಾಮಾನ ಆಧಾರಿತ ಬೆಳೆವಿಮೆ: ಅರ್ಜಿ ಸಲ್ಲಿಕೆ ಅಂತಿಮ ದಿನಾಂಕ ವಿಸ್ತರಿಸಿ- ಸಂಸದ ಬಿ.ವೈ‌.ರಾಘವೇಂದ್ರ

B.Y. Raghavendra ಮುಂಗಾರು ಹಂಗಾಮಿನಲ್ಲಿ ರಾಜ್ಯಾದ್ಯಂತ ವಾಡಿಕೆಗಿಂತ ಶೇ.34 ರಷ್ಟು ಮಳೆ...