Friday, December 5, 2025
Friday, December 5, 2025

Arvind Kejriwal ಬಂಧಿತ ದೆಹಲಿ ಸಿಎಂ ಕೇಜ್ರಿವಾಲರ ಪದಚ್ಯುತಿ ನಿರಾಕರಿಸಿದ ಕೋರ್ಟ್

Date:

Arvind Kejriwal ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು ಸಿಎಂ ಹುದ್ದೆಯಿಂದ ಪದಚ್ಯುತಿಗೊಳಿಸುವಂತೆ ಕೋರಿ ಸಲ್ಲಿಸಲಾಗಿದ್ದ ಮನವಿಯನ್ನು ದೆಹಲಿ ಹೈಕೋರ್ಟ್ ಗುರುವಾರ ತಿರಸ್ಕರಿಸಿದೆ.

ಈ ಕುರಿತ ಅರ್ಜಿಯನ್ನು ತಳ್ಳಿಹಾಕಿದ ದೆಹಲಿ ನ್ಯಾಯಾಲಯ, ಈ ವಿಚಾರದಲ್ಲಿ ನ್ಯಾಯಾಂಗ ಹಸ್ತಕ್ಷೇಪಕ್ಕೆ ಯಾವುದೇ ಅವಕಾಶವಿಲ್ಲ ಎಂದು ಹೇಳಿದೆ.

ರೈತ ಮತ್ತು ಸಾಮಾಜಿಕ ಕಾರ್ಯಕರ್ತ ಎಂದು ಹೇಳಿಕೊಂಡಿದ್ದ ದೆಹಲಿ ನಿವಾಸಿ ಸುರ್ಜಿತ್ ಸಿಂಗ್ ಯಾದವ್ ಈ ಬಗ್ಗೆ ಕೋರ್ಟ್‌ ಮೊರೆ ಹೋಗಿದ್ದರು. ಹಣಕಾಸು ಅವ್ಯವಹಾರದ ಆರೋಪ ಹೊತ್ತಿರುವ ಮುಖ್ಯಮಂತ್ರಿಯೊಬ್ಬರು ಸಾರ್ವಜನಿಕ ಹುದ್ದೆಯಲ್ಲಿ ಮುಂದುವರಿಯಲು ಅವಕಾಶ ನೀಡಬಾರದು ಎಂದು ಯಾದವ್ ತಮ್ಮ ಅರ್ಜಿಯಲ್ಲಿ ಉಲ್ಲೇಖಿಸಿದ್ದರು.

Arvind Kejriwal ಅರ್ಜಿಯನ್ನು ವಜಾಗೊಳಿಸಿದ ದೆಹಲಿ ಹೈಕೋರ್ಟ್‌ನ ಹಂಗಾಮಿ ಮುಖ್ಯ ನ್ಯಾಯಮೂರ್ತಿ ಮನಮೋಹನ್, ಇದರಲ್ಲಿ ನ್ಯಾಯಾಂಗ ಹಸ್ತಕ್ಷೇಪಕ್ಕೆ ಯಾವುದೇ ಅವಕಾಶವಿದೆಯೇ? ನಾವು ಇಂದಿನ ಪತ್ರಿಕೆಯನ್ನು ಓದಿದ್ದೇವೆ. ಲೆಫ್ಟಿನೆಂಟ್ ಗವರ್ನರ್ ವಿಕೆ ಸಕ್ಸೇನಾ ಅವರು ಈ ಸಮಸ್ಯೆಯನ್ನು ಪರಿಶೀಲಿಸುತ್ತಿದ್ದಾರೆ. ಅದು ರಾಷ್ಟ್ರಪತಿಗಳ ಬಳಿಗೆ ಹೋಗಲಿದೆ. ಲೆಫ್ಟಿನೆಂಟ್ ಗವರ್ನರ್ ಈ ಬಗ್ಗೆ ಪರಿಗಣಿಸಬೇಕು, ರಾಷ್ಟ್ರಪತಿಗಳು ಪರಿಗಣಿಸಬೇಕು. ನಾವು ಏಕೆ ಪರಿಗಣಿಸಬೇಕು, ಅವರು ಪರಿಗಣಿಸುತ್ತಾರೆ. ನಾವು ರಾಷ್ಟ್ರಪತಿ ಆಳ್ವಿಕೆಯನ್ನು ಹೇರುವುದಿಲ್ಲ. ಯಾವುದೇ ಹೈಕೋರ್ಟ್ ಅದನ್ನು ಮಾಡುವುದಿಲ್ಲ. ಅವರು ತೀರ್ಮಾನಕ್ಕೆ ಬರುತ್ತಾರೆ. ಅವರು ಸ್ವಲ್ಪ ಸಮಯ ತೆಗೆದುಕೊಳ್ಳಬಹುದು. ಇದರಲ್ಲಿ ನ್ಯಾಯಾಂಗ ಹಸ್ತಕ್ಷೇಪಕ್ಕೆ ಯಾವುದೇ ಅವಕಾಶವಿಲ್ಲ ಎಂದು ನ್ಯಾಯಮೂರ್ತಿ ಮನಮೋಹನ್ ಅವರು ಹೇಳಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Indian Medical Association 30 ವರ್ಷ ದಾಟಿದ ಮಹಿಳೆಯರು ಪ್ಯಾಪ್ಸ್ ಮಿಯರ್ ಟೆಸ್ಟ್ ಅನ್ನು 3 ವರ್ಷಕ್ಕೆ ಒಂದು ಬಾರಿ‌ ಮಾಡಿಸಬೇಕು- ಡಾ.ರಕ್ಷಾರಾವ್

Indian Medical Association ಮಹಿಳೆಯರು ಉತ್ತಮ ಆರೋಗ್ಯ ಕಾಪಾಡಿಕೊಳ್ಳಲು ಜಾಗ್ರತೆ ವಹಿಸಬೇಕು...

MESCOM ಡಿಸೆಂಬರ್ ‌9. ಕುಂಸಿ ಮೆಸ್ಕಾಂ ಉಪವಿಭಾಗ ಕಚೇರಿಯಲ್ಲಿ ಜನ ಸಂಪರ್ಕ ಸಭೆ

MESCOM ಕುಂಸಿ ಮೆಸ್ಕಾಂ ಉಪವಿಭಾಗದಲ್ಲಿ ಡಿ. 09 ರಂದು ಬೆಳಗ್ಗೆ 11.00...