Sunday, May 3, 2026
Sunday, May 3, 2026

Arvind Kejriwal ಬಂಧಿತ ದೆಹಲಿ ಸಿಎಂ ಕೇಜ್ರಿವಾಲರ ಪದಚ್ಯುತಿ ನಿರಾಕರಿಸಿದ ಕೋರ್ಟ್

Date:

Arvind Kejriwal ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು ಸಿಎಂ ಹುದ್ದೆಯಿಂದ ಪದಚ್ಯುತಿಗೊಳಿಸುವಂತೆ ಕೋರಿ ಸಲ್ಲಿಸಲಾಗಿದ್ದ ಮನವಿಯನ್ನು ದೆಹಲಿ ಹೈಕೋರ್ಟ್ ಗುರುವಾರ ತಿರಸ್ಕರಿಸಿದೆ.

ಈ ಕುರಿತ ಅರ್ಜಿಯನ್ನು ತಳ್ಳಿಹಾಕಿದ ದೆಹಲಿ ನ್ಯಾಯಾಲಯ, ಈ ವಿಚಾರದಲ್ಲಿ ನ್ಯಾಯಾಂಗ ಹಸ್ತಕ್ಷೇಪಕ್ಕೆ ಯಾವುದೇ ಅವಕಾಶವಿಲ್ಲ ಎಂದು ಹೇಳಿದೆ.

ರೈತ ಮತ್ತು ಸಾಮಾಜಿಕ ಕಾರ್ಯಕರ್ತ ಎಂದು ಹೇಳಿಕೊಂಡಿದ್ದ ದೆಹಲಿ ನಿವಾಸಿ ಸುರ್ಜಿತ್ ಸಿಂಗ್ ಯಾದವ್ ಈ ಬಗ್ಗೆ ಕೋರ್ಟ್‌ ಮೊರೆ ಹೋಗಿದ್ದರು. ಹಣಕಾಸು ಅವ್ಯವಹಾರದ ಆರೋಪ ಹೊತ್ತಿರುವ ಮುಖ್ಯಮಂತ್ರಿಯೊಬ್ಬರು ಸಾರ್ವಜನಿಕ ಹುದ್ದೆಯಲ್ಲಿ ಮುಂದುವರಿಯಲು ಅವಕಾಶ ನೀಡಬಾರದು ಎಂದು ಯಾದವ್ ತಮ್ಮ ಅರ್ಜಿಯಲ್ಲಿ ಉಲ್ಲೇಖಿಸಿದ್ದರು.

Arvind Kejriwal ಅರ್ಜಿಯನ್ನು ವಜಾಗೊಳಿಸಿದ ದೆಹಲಿ ಹೈಕೋರ್ಟ್‌ನ ಹಂಗಾಮಿ ಮುಖ್ಯ ನ್ಯಾಯಮೂರ್ತಿ ಮನಮೋಹನ್, ಇದರಲ್ಲಿ ನ್ಯಾಯಾಂಗ ಹಸ್ತಕ್ಷೇಪಕ್ಕೆ ಯಾವುದೇ ಅವಕಾಶವಿದೆಯೇ? ನಾವು ಇಂದಿನ ಪತ್ರಿಕೆಯನ್ನು ಓದಿದ್ದೇವೆ. ಲೆಫ್ಟಿನೆಂಟ್ ಗವರ್ನರ್ ವಿಕೆ ಸಕ್ಸೇನಾ ಅವರು ಈ ಸಮಸ್ಯೆಯನ್ನು ಪರಿಶೀಲಿಸುತ್ತಿದ್ದಾರೆ. ಅದು ರಾಷ್ಟ್ರಪತಿಗಳ ಬಳಿಗೆ ಹೋಗಲಿದೆ. ಲೆಫ್ಟಿನೆಂಟ್ ಗವರ್ನರ್ ಈ ಬಗ್ಗೆ ಪರಿಗಣಿಸಬೇಕು, ರಾಷ್ಟ್ರಪತಿಗಳು ಪರಿಗಣಿಸಬೇಕು. ನಾವು ಏಕೆ ಪರಿಗಣಿಸಬೇಕು, ಅವರು ಪರಿಗಣಿಸುತ್ತಾರೆ. ನಾವು ರಾಷ್ಟ್ರಪತಿ ಆಳ್ವಿಕೆಯನ್ನು ಹೇರುವುದಿಲ್ಲ. ಯಾವುದೇ ಹೈಕೋರ್ಟ್ ಅದನ್ನು ಮಾಡುವುದಿಲ್ಲ. ಅವರು ತೀರ್ಮಾನಕ್ಕೆ ಬರುತ್ತಾರೆ. ಅವರು ಸ್ವಲ್ಪ ಸಮಯ ತೆಗೆದುಕೊಳ್ಳಬಹುದು. ಇದರಲ್ಲಿ ನ್ಯಾಯಾಂಗ ಹಸ್ತಕ್ಷೇಪಕ್ಕೆ ಯಾವುದೇ ಅವಕಾಶವಿಲ್ಲ ಎಂದು ನ್ಯಾಯಮೂರ್ತಿ ಮನಮೋಹನ್ ಅವರು ಹೇಳಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shivamogga Police ಗಾಡಿಕೊಪ್ಪ ಸಂಚಾರ ನಿಯತ್ರಣ ಓಕೆ. ಆದರೆ ಮಿಕ್ಕ ಸಮಸ್ಯೆಗಳಿಗೆ ಪರಿಹಾರವಿಲ್ಲ ಯಾಕೆ?

Shivamogga Police ಗಾಡಿಕೊಪ್ಪ‌,ಶಿವಮೊಗ್ಗದ ಸೆಟಲೈಟ್ ಟೌನ್ ಎಂಬ ವ್ಯಾಪ್ತಿಗೆ ಬೆಳೆದುಬಿಟ್ಟಿದೆ. ಅಲ್ಕಿನ ವೃತ್ತಕ್ಕೆ...

Shivamogga Airport ಶಿವಮೊಗ್ಗಏರ್ ಪೋರ್ಟ್ ನಲ್ಲಿನೈಟ್ ಲ್ಯಾಂಡಿಂಗ್ಕಾಮಗಾರಿಯು ಜೂನ್ ತಿಂಗಳಲ್ಲಿ ಮುಗಿಯಲಿದೆ- ನಂಜಯ್ಯ‌ಮಠ

Shivamogga Airport ಕರ್ನಾಟಕ ರಾಜ್ಯ ಕೈಗಾರಿಕಾ ಮತ್ತು ಮೂಲಸೌಕರ್ಯ ನಿಗಮ ಮಂಡಳಿಯ (ಕೆಎಸ್‌ಐಡಿಸಿ)...

B.Y. Raghavendra ಬಿಎಸ್ ವೈ ಅಭಿಮಾನೋತ್ಸವ ಕೇವಲ ಸಮಾರಂಭವಲ್ಲ.ನಮ್ಮನಾಯಕರಿಗೆ ಸಲ್ಲಿಸುವ ಗೌರವ- ಬಿ.ವೈ.ರಾಘವೇಂದ್ರ.

B.Y. Raghavendra ಇದೇ ಮೇ 9ರಂದು ಚಿತ್ರದುರ್ಗದಲ್ಲಿ ಆಯೋಜಿಸಲಾಗಿರುವ ರೈತ ನಾಯಕ, ಮಾಜಿ...