Friday, March 20, 2026
Friday, March 20, 2026

Assembly Election  ನೈಋತ್ಯ ಪದವೀಧರರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಟಿಕೆಟ್ ಗಾಗಿ ಎಸ್.ಪಿ.ದಿನೇಶ್ ಮನವಿ

Date:

Assembly Election ಪದವೀಧರ ಕ್ಷೇತ್ರಕ್ಕೆ ಕಾಂಗ್ರೆಸ್ ನಿಂದ ಆಯನೂರು ಮಂಜುನಾಥ್ ಅಭ್ಯರ್ಥಿ ಎಂದು ಘೋಷಿಸಿರುವುದನ್ನು ತಡೆಹಿಡಿಯಬೇಕೆಂದು ಇನ್ನಿಬ್ಬರು ಟಿಕೆಟ್ ಆಕಾಂಕ್ಷಿಗಳಾದ ಎಸ್ ಪಿ ದಿನೇಶ್ ಮತ್ತು ರಂಗಸ್ವಾಮಿ ಗೌಡ ಎಐಸಿಸಿ ಅಧ್ಯಕ್ಷರನ್ನು ಆಗ್ರಹಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಈ ಬಗ್ಗೆ ಮಾತನಾಡಿದ ಅವರು , ವಿಧಾನ ಪರಿಷತ್ ಚುನಾವಣೆಗೆ
ಪಕ್ಷದ ಫಲಿತಾಂಶದ ದೃಷ್ಠಿಯಿಂದ ಘೋಷಣೆಯಾಗಿರುವ ಆಯನೂರು ಅವರ ಹೆಸರು ತಡೆಹಿಡಿಯಬೇಕು. ನೈರುತ್ಯ ಪದವೀಧರರ ಕ್ಷೇತ್ರದಲ್ಲಿ ಮತ್ತೊಮ್ಮೆ ಸರ್ವೆ ಮಾಡಿಸಿ, ಪಕ್ಷದ ಮುಖಂಡರುಗಳ, ಬ್ಲಾಕ್ ಅಧ್ಯಕ್ಷರುಗಳ, ಜಿಲ್ಲಾ ಅಧ್ಯಕ್ಷರುಗಳ, ಶಾಸಕರುಗಳ ಅಭಿಪ್ರಾಯ ಪಡೆದು ತನಗೆ ಟಿಕೆಟ್ ಘೋಷಿಸಬೇಕೆಂದು ಕೋರಿದರು.
ಕೆಪಿಸಿಸಿ ಅಧ್ಯಕ್ಷರ ನಿರ್ದೇಶಾನುಸಾರ ನಾನು ಪದವೀಧರರ ನೋಂದಣಿ ಪ್ರಕ್ರಿಯೆ ಕೈಗೊಂಡು ಮತದಾರರನ್ನು ಸಂಭಾವ್ಯ ಅಭ್ಯರ್ಥಿ ಎಂದು ಕ್ಷೇತ್ರದಾದ್ಯಂತ ಪ್ರಚಾರ ಕೈಗೊಂಡಿದ್ದೆ. ನನಗೆ ಟಿಕೆಟ್ ನಿರಾಕರಿಸಿದಲ್ಲಿ ನಾನು ಮತದಾರರನ್ನು ಗೊಂದಲಕ್ಕಿಡು ಮಾಡಿದಂತಾಗುವುದು. ಯುವ ಕಾಂಗ್ರಸ್‌ನಿಂದ ಪಕಗಷದ ಕೆಲಸ ಮಾಡಿದ್ದೇನೆ. ಎನ್.ಎಸ್.ಯು.ಐ 33 ವರ್ಷಗಳ ಅವಧಿಯಲ್ಲಿ ನನ್ನ ಪಕ್ಷ ನಿಷ್ಠೆ, ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಸಮಿತಿಯ ಕಟ್ಟಡ ನಿರ್ಮಾಣ ಜವಾಬ್ದಾರಿ ನಿರ್ಮಾಣದಲ್ಲಿ ಪ್ರಮುಖ ಪಾತ್ರ ವಹಿಸಿದ್ದೇನೆ ಎಂದು ವಿವರಿಸಿದರು.
Assembly Election   ಆದ್ದರಿಂದ ನೈರುತ್ಯ ಪದವೀಧರರ ಕ್ಷೇತ್ರಕ್ಕೆ ಘೋಷಣೆಯಾದ ಟಿಕೆಟ್‌ನ್ನು ಮರು ಪರಿಶೀಲನೆ ಮಾಡಿ ನನ್ನನ್ನು ಅಭ್ಯರ್ಥಿಯನ್ನಾಗಿ ಘೋಷಿಸುವಂತೆ ಆಗ್ರಹಿಸಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shimoga News ಗೋಪಾಲ ಗೌಡರು ಶಿವಮೊಗ್ಗ ಜಿಲ್ಲೆಯನ್ನ ಸಮಾಜವಾದದ ತೊಟ್ಟಿಲನ್ನಾಗಿ ರೂಪಿಸಿದವರು- ವೈ.ಎಸ್.ವಿ.ದತ್ತ.

Shimoga News ನಗರದ ಮಥುರಾ ಪ್ಯಾರಡೈಸ್ ಸಭಾಂಗಣದಲ್ಲಿ ಮಾಜಿ ಶಾಸಕ ಹಾಗೂ...

Klive Special Article ಕೆ ಲೈವ್ ವಿಶೇಷ.” ವಿಕ್ರಮ ಮತ್ತು ಶಾಲಿವಾಹನ ಶಕಪುರುಷರು” ಒಂದು ಚಿಂತನೆ.ಲೇ: ದಿಲೀಪ್ ನಾಡಿಗ್,ಶಿವಮೊಗ್ಗ.

ಎನ್.ಜಯಭೀಮ ಜೊಯ್ಸ್. ಶಿವಮೊಗ್ಗ. Klive Special Article ತೈತ್ತಿರೀಯ ಅರಣ್ಯಕದಲ್ಲಿರುವ ಶ್ಲೋಕದಂತೆ "ಕ್ವೇದಮಭ್ರಂ ನಿವಿಶತೇ...

Kote SeethaRamanjaneya Temple ಇಂದಿನಿಂದ ಕೋಟೆ ಶ್ರೀಸೀತಾರಾಮಾಂಜನೇಯ ಸ್ವಾಮಿ ದೇಗುಲದಲ್ಲಿ ಶ್ರೀರಾಮ ನವಮಿ ಉತ್ಸವಕ್ಕೆ ಚಾಲನೆ

Kote SeethaRamanjaneya Temple ಕೋಟೇ ಶ್ರೀ ಸೀತಾರಾಮಾಂಜನೇಯ ಸ್ವಾಮಿ ದೇವಾಲಯದಲ್ಲಿ ಶ್ರೀ...

Women’s Day ವೃದ್ಧಾಪ್ಯದ ಆರೋಗ್ಯ ಸಮಸ್ಯೆಗಳ ಬಗ್ಗೆ ಅರಿವಿರಲಿ- ಡಾ.ಪ್ರಿಯಾಂಕ ಚೌಹಾಣ್.

Women's Day ಜೆಸಿ ಶಿವಮೊಗ್ಗ ಚಿರಂತನದ ವತಿಯಿಂದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು...