Wednesday, December 17, 2025
Wednesday, December 17, 2025

Kuvempu University ಹೊಸ ಯೋಜನೆಗಳ ಬದಲು ಪ್ರಸ್ತುತ ಜಾರಿಯಲ್ಲಿನ ಯೋಜನೆ ಪೂರೈಸಲು ಕ್ರಮ- ಜಿ.ಬಂಗಾರಪ್ಪ

Date:

Kuvempu University ಕುವೆಂಪು ವಿಶ್ವವಿದ್ಯಾಲಯವ 2024-25 ನೇ ಸಾಲಿಗೆ 137.7 ಕೋಟಿ ರೂಗಳ ಬಜೆಟ್ ಮಂಡನೆ ಮಾಡಿದೆ.

ಕುವೆಂಪು ವಿವಿಯಲ್ಲಿ ಇತ್ತೀಚಿಗೆ ನಡೆದ ವಿದ್ಯಾ ವಿಷಯಕ ಪರಿಷತ್ನ ಸಭೆಯಲ್ಲಿ 2024, 25 ನೇ ಸಾಲಿನ ಆಯವ್ಯಯವನ್ನು ಮಂಡಿಸಲಾಗಿತ್ತು 1.85 ಕೋಟಿ ರೂಗಳ ಕೊರತೆ ಬಜೆಟನ್ನು ಸಿದ್ಧಪಡಿಸಲಾಗಿದೆ.

ಹೊಸ ಯೋಜನೆಗಳ ಬದಲು ಪ್ರಸ್ತುತ ಜಾರಿಯಲ್ಲಿರುವ ಕಾಮಗಾರಿಗಳನ್ನು ಪೂರ್ಣಗೊಳಿಸಲು ಸಭೆಯಲ್ಲಿ ತೀರ್ಮಾನಿಸಲಾಗಿದೆ ಎಂದು ಹಣಕಾಸು ಅಧಿಕಾರಿ ಜಿ ಬಂಗಾರಪ್ಪ ಮಾಹಿತಿ ನೀಡಿದ್ದಾರೆ.

ಕುವೆಂಪು ಬಿವಿಯು ವಿವಿಧ ಮೂಲಗಳಿಂದ 135.55 ಕೋಟಿಗಳ ಸ್ವೀಕೃತಿಯನ್ನು ನಿರೀಕ್ಷಿಸುತ್ತಿದೆ ಹಾಗೂ 137.34ಕೋಟಿ ರೂಗಳನ್ನು ವೆಚ್ಚಕ್ಕಾಗಿ ನಿಗದಿಗೊಳಿಸಲಾಗಿದೆ.

ಸ್ವೀಕೃತಿಯನ್ನು ವೇತನ ಶೈಕ್ಷಣಿಕ ಮತ್ತು ಆಡಳಿತಾತ್ಮಕ ವೆಚ್ಚಗಳು ಪರೀಕ್ಷಾ ವೆಚ್ಚಗಳು ಅಭಿವೃದ್ಧಿ ಕಾಮಗಾರಿಗಳಿಗಾಗಿ ಬಳಸಲು ಉದ್ದೇಶಿಸಲಾಗಿದೆ. ಒಟ್ಟು 185 ಕೋಟಿ ರೂಗಳ ಕೊರತೆ ಬಜೆಟ್ ಸಿದ್ಧಪಡಿಸಲಾಗಿದ್ದು, ಹೆಚ್ಚುವರಿ ಅನುದಾನಕ್ಕಾಗಿ ಸರ್ಕಾರವನ್ನು ಕೋರಲು ತೀರ್ಮಾನಿಸಲಾಗಿದೆ.

ಸಹ್ಯಾದ್ರಿ ಕಾಲೇಜಿನಲ್ಲಿ 22 ತರಗತಿ ಕೊಠಡಿಗಳನ್ನು ಪೂರ್ಣಗೊಳಿಸಲಾಗಿದ್ದು ಶೀಘ್ರವೇ ಪಾಠ ಪ್ರವಚನಕ್ಕೆ ಮುಕ್ತಗೊಳಿಸಲಾಗುವುದು.

ರೂಸ ಯೋಜನೆ ಅಡಿ ಸ್ನಾತಕೋತ್ತರ ವಿದ್ಯಾರ್ಥಿಗಳ ವಸತಿ ನಿಲಯವನ್ನು ಪೂರ್ಣಗೊಳಿಸಿದ್ದು ಸದ್ಯದಲ್ಲೇ ಬಳಕೆಗೆ ನೀಡಲಾಗುವುದು. ಈ ವರ್ಷ ನ್ಯಾಕ್ ಸಮಿತಿಯ ನಾಲ್ಕನೇ ಆವೃತ್ತಿಯ ಮೌಲ್ಯಮಾಪನ ಇರುವುದರಿಂದ ಬೋಧನೆ ಮತ್ತು ಸಂಶೋಧನೆಗೆ ಹೆಚ್ಚು ಹೊತ್ತು ನೀಡಲು ವಿವಿ ಶ್ರಮಿಸುತ್ತಿದೆ ಎಂದು ಪ್ರಕಟಣೆ ತಿಳಿಸಿದೆ.

Kuvempu University ಈ ಸಂದರ್ಭದಲ್ಲಿ ಸಭೆಯಲ್ಲಿ ವಿವಿಯ ಕುಲಪತಿ ಪ್ರೊ. ಶರತ್ ಅನಂತಮೂರ್ತಿ, ಕುಲಸಚಿವ ಮಂಜುನಾಥ್, ಪರೀಕ್ಷಾಂಗ ಕುಲಸಚಿವ ಪ್ರೊ. ಎಸ್ ಎಂ ಗೋಪಿನಾಥ್ ಹಾಗೂ ವಿದ್ಯಾವಿಶಯಕ ಪರಿಷತ್ನ ಸದಸ್ಯರು ಹಾಜರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Scheduled Castes Welfare Department ಮಾನಿಸಿಕ ಒತ್ತಡ ನಿರ್ವಹಣೆ ಬಗ್ಗೆ ಆನ್ ಲೈನ್ ಪಾಡ್ ಕ್ಯಾಸ್ಟ್ ವಿಡಿಯೊ ಸಂವಾದ

Scheduled Castes Welfare Department ಶಿವಮೊಗ್ಗ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್,...

Kuvempu University ಶ್ರೀಕಾಂತ್ ಬಿರಾದಾರ್ ಅವರಿಗೆ ಕುವೆಂಪು ವಿವಿ ಡಾಕ್ಟರೇಟ್ ಪದವಿ

Kuvempu University ಮೂಡಲಗಿ ಶ್ರೀ ಶ್ರೀಪಾದಬೋಧ ಸ್ವಾಮೀಜಿ ಸರ್ಕಾರಿ ಪ್ರಥಮ ದರ್ಜೆ...

Karnataka Information Commission ಡಿಸೆಂಬರ್ 20. ರಾಜ್ಯ ಮಾಹಿತಿ ಆಯುಕ್ತರ ಶಿವಮೊಗ್ಗ ಜಿಲ್ಲಾ ಪ್ರವಾಸ ಮಾಹಿತಿ

Karnataka Information Commission ರಾಜ್ಯ ಮಾಹಿತಿ ಆಯೋಗದ ಆಯುಕ್ತರಾದ ರುದ್ರಣ್ಣ ಹರ್ತಿಕೋಟೆ...

B.Y. Raghavendra ವೈಯಕ್ತಿಕವಾಗಿ ಕುಟುಂಬದ ಹಿರಿಯರನ್ನ ಕಳೆದುಕೊಂಡಂತಾಗಿದೆ, ಶಾಮನೂರು ನಿಧನಕ್ಕೆ ಬಿ.ವೈ.ರಾಘವೇಂದ್ರ ಕಂಬನಿ

B.Y. Raghavendra ಅಖಿಲಭಾರತ ವೀರಶೈವ ಲಿಂಗಾಯತ ಮಹಾಸಭಾದ ರಾಷ್ಟ್ರೀಯ ಅಧ್ಯಕ್ಷರು, ಹಿರಿಯ...