Thursday, September 17, 2026
Thursday, September 17, 2026

Lok Sabha Election 2024 ಇಬ್ಬರ ಜಗಳ ಮೂರನೇಯವರಿಗೆ ಲಾಭ ಕೋಲಾರ ಟಿಕೆಟ್ ಫೈನಲ್

Date:

Lok Sabha Election 2024 ಲೋಕಸಭಾ ಕ್ಷೇತ್ರಕ್ಕೆ ಕಾಂಗ್ರೆಸ್‌ ಪಕ್ಷ ತನ್ನ ಅಭ್ಯರ್ಥಿಯನ್ನು ಘೋಷಿಸಿದ್ದು, ಕೆ.ವಿ.ಗೌತಮ್ ಅವರಿಗೆ ಟಿಕೆಟ್‌ ನೀಡಿದೆ.

ಈ ಕುರಿತು ಕಾಂಗ್ರೆಸ್‌ ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಪತ್ರಿಕಾ ಪ್ರಕಟಣೆ ಹೊರಡಿಸಿದ್ದು, ಗೌತಮ್ ಅವರನ್ನು ಅಭ್ಯರ್ಥಿಯನ್ನಾಗಿ ಆಯ್ಕೆ ಮಾಡಲಾಗಿದೆ ಎಂದು ತಿಳಿಸಿದ್ದಾರೆ.

ಕೋಲಾರ ಜಿಲ್ಲೆಯ ಕಾಂಗ್ರೆಸ್‌ ಅಭ್ಯರ್ಥಿ ಆಯ್ಕೆ ವಿಚಾರದಲ್ಲಿ ಸಚಿವ ಕೆ.ಎಚ್ ಮುನಿಯಪ್ಪ ಮತ್ತು ಕೋಲಾರ ಜಿಲ್ಲೆಯ ಶಾಸಕರ ನಡುವೆ ಜಟಾಪಟಿ ನಡೆದಿತ್ತು. ಸಚಿವ ಕೆ.ಹೆಚ್‌ ಮುನಿಯಪ್ಪ ಮತ್ತು ಮಾಜಿ ಸಚಿವ ಕೆ.ಆರ್‌ ರಮೇಶ್ ಕುಮಾರ್ ಬಣಗಳ ನಡುವೆ ಕಿತ್ತಾಟ ನಡೆದಿದೆ. ಮುನಿಯಪ್ಪ ಸಂಬಂಧಿಕರಿಗೆ ಟಿಕೆಟ್ ನೀಡುವುದಕ್ಕೆ ಜಿಲ್ಲೆಯ ಕಾಂಗ್ರೆಸ್ ಶಾಸಕರು ವಿರೋಧ ವ್ಯಕ್ತಪಡಿಸಿ ರಾಜೀನಾಮೆ ಬೆದರಿಕೆ ಹಾಕಿದ್ದರು. ಅತ್ತ ಮುನಿಯಪ್ಪ ಬಣ ತಮ್ಮವರಿಗೇ ಟಿಕೆಟ್ ನೀಡುವಂತೆ ಪಟ್ಟು ಹಿಡಿದಿದ್ದರು. ಈ ಕುರಿತು ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್‌ ನೇತೃತ್ವದಲ್ಲಿ ಸಂಧಾನ ಸಭೆಯೂ ನಡೆದಿತ್ತು. ಇದೀಗ ಎಲ್ಲಾ ಗೊಂದಲಗಳಿಗೆ Lok Sabha Election 2024 ತೆರೆಬಿದ್ದಿದ್ದು, ಕೋಲಾರದ ಅಭ್ಯರ್ಥಿ ಆಯ್ಕೆ ಅಂತಿಮಗೊಂಡಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಗುಡ್ ಲಕ್ ಆರೈಕೆ ಕೇಂದ್ರಕ್ಕೆ ಹೇಮಾ ಗೋಣೂರು ಅವರಿಂದ ರೂ.50 ಸಾವಿರ ದೇಣಿಗೆ

ಅಶಕ್ತರು ಹಾಗೂ ಹಿರಿಯರ ಸೇವೆ ದೇವರ ಸೇವೆಗೆ ಸಮಾನವಾಗಿದೆ. ನಾವು ಮಾಡುವ...

MESCOM ಸೆ.16. ಜೋಗದ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಜನಸಂಪರ್ಕ ಸಭೆ

MESCOM ಜೋಗ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಸೆ. 16 ರಂದು ಬೆಳಿಗ್ಗೆ...