Saturday, December 6, 2025
Saturday, December 6, 2025

lok sabha election ಶಿವಮೊಗ್ಗ ಜಿಲ್ಲಾ ವಿಧಾನಸಭಾ ಕ್ಷೇತ್ರಗಳಿಗೆ ಕಾಂಗ್ರೆಸ್ ಪಕ್ಷದಿಂದ ಉಸ್ತುವಾರಿಗಳ ನೇಮಕ

Date:

lok sabha election ಶಿವಮೊಗ್ಗ ಲೋಕಸಭಾ ಚುನಾವಣೆ : ಜಿಲ್ಲೆಯ ಏಳು ವಿಧಾನಸಭಾ ಕ್ಷೇತ್ರಗಳಿಗೆ ಡಾ.ಆರ್.ಎಂ.ಮಂಜುನಾಥಗೌಡ, ಆಯನೂರು ಮಂಜುನಾಥ್ ಸೇರಿದಂತೆ ಉಸ್ತುವಾರಿಗಳ ನೇಮಕ….
ಶಿವಮೊಗ್ಗ ಮಾ.30: ಲೋಕಸಭಾ ಚುನಾವಣೆಯ ಸಿದ್ಧತೆ ಹಿನ್ನಲೆಯಲ್ಲಿ ಕಾಂಗ್ರೆಸ್ ಪಕ್ಷದ ಸಂಘಟನೆ ದೃಷ್ಟಿಯಿಂದ ಜಿಲ್ಲೆಯ ವಿವಿಧ ವಿಧಾನಸಭಾ ಕ್ಷೇತ್ರಗಳ ಉಸ್ತುವಾರಿಗಳನ್ನಾಗಿ ಡಾ.ಆರ್.ಎಂ.ಮಂಜುನಾಥಗೌಡ, ಆಯನೂರು ಮಂಜುನಾಥ್ ಸೇರಿದಂತೆ ಕಾಂಗ್ರೆಸ್ ಪಕ್ಷದ ಕೆಳಕಂಡ 7 ಜನ ಮುಖಂಡರುಗಳನ್ನು ಉಸ್ತುವಾರಿಗಳನ್ನಾಗಿ ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷರಾದ ಹೆಚ್.ಎಸ್.ಸುಂದರೇಶ್ ಇವರು ನೇಮಿಸಿದ್ದಾರೆ.
ಸಾಗರ ವಿಧಾನಸಭಾ ಕ್ಷೇತ್ರಕ್ಕೆ ಎಂಎಡಿಬಿ ಅಧ್ಯಕ್ಷರಾದ ಡಾ.ಆರ್.ಮಂಜುನಾಥಗೌಡ,ಶಿವಮೊಗ್ಗ ಗ್ರಾಮಾಂತರ-ಕೆಪಿಸಿಸಿ ವಕ್ತಾರ ಆಯನೂರು ಮಂಜುನಾಥ್, ಶಿಕಾರಿಪುರ-ಮಾಜಿ ವಿಧಾನಪರಿಷತ್ ಸದಸ್ಯ ಆರ್. ಪ್ರಸನ್ನಕುಮಾರ್, ಭದ್ರಾವತಿ-ಕಾಂಗ್ರೆಸ್ ಮುಖಂಡ ಎಂ.ಶ್ರೀಕಾಂತ್, ಸೊರಬ-ಕಲಗೋಡು ರತ್ನಾಕರ್, ಶಿವಮೊಗ್ಗ ನಗರ- ಕೆಪಿಸಿಸಿ ಪ್ರಧಾನಕಾರ್ಯದರ್ಶಿ ಬಲ್ಕೀಶ್ ಬಾನು ಹಾಗೂ ತೀರ್ಥಹಳ್ಳಿ- ಜಿಲ್ಲಾ ವಕ್ತಾರ ಎಂ.ರಮೇಶ್ ಶೆಟ್ಟಿ ಶಂಕರಘಟ್ಟ ಇವರುಗಳನ್ನು ನೇಮಿಸಲಾಗಿದೆ.
ವಿಧಾನಸಭಾ ಕ್ಷೇತ್ರ ಮಟ್ಟದಲ್ಲಿ ಲೋಕಸಭಾ ಚುನಾವಣೆಯ ಸಿದ್ಧತೆಯ ಬಗ್ಗೆ ಆಯಾಯ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ lok sabha election ಸಭೆಗಳನ್ನು ಆಯೋಜಿಸಿ ಪಕ್ಷದ ಕಾರ್ಯಕರ್ತರನ್ನು ಜಾಗೃತಿಗೊಳಿಸಲು ಜಿಲ್ಲಾ ಅಧ್ಯಕ್ಷರು ನೇಮಕಾತಿ ಅದೇಶದಲ್ಲಿ ಉಸ್ತುವಾರಿಗಳಿಗೆ ಸೂಚನೆ ನೀಡಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Indian Medical Association 30 ವರ್ಷ ದಾಟಿದ ಮಹಿಳೆಯರು ಪ್ಯಾಪ್ಸ್ ಮಿಯರ್ ಟೆಸ್ಟ್ ಅನ್ನು 3 ವರ್ಷಕ್ಕೆ ಒಂದು ಬಾರಿ‌ ಮಾಡಿಸಬೇಕು- ಡಾ.ರಕ್ಷಾರಾವ್

Indian Medical Association ಮಹಿಳೆಯರು ಉತ್ತಮ ಆರೋಗ್ಯ ಕಾಪಾಡಿಕೊಳ್ಳಲು ಜಾಗ್ರತೆ ವಹಿಸಬೇಕು...

MESCOM ಡಿಸೆಂಬರ್ ‌9. ಕುಂಸಿ ಮೆಸ್ಕಾಂ ಉಪವಿಭಾಗ ಕಚೇರಿಯಲ್ಲಿ ಜನ ಸಂಪರ್ಕ ಸಭೆ

MESCOM ಕುಂಸಿ ಮೆಸ್ಕಾಂ ಉಪವಿಭಾಗದಲ್ಲಿ ಡಿ. 09 ರಂದು ಬೆಳಗ್ಗೆ 11.00...