Sunday, February 1, 2026
Sunday, February 1, 2026

Crime News ಮಹಿಳೆಯನ್ನು ಕೊಲೆಗೈದು ಶವ ಕೆರೆಗೆಸೆದ ಪಾತಕಿಗಳ ಬಂಧನ

Date:

Crime News ಮಾ.18 ರಂದು ರಿಪ್ಪನ್ ಪೇಟೆ ಠಾಣೆಯ ಹುಂಚದ ಮುತ್ತಿನಕೆರೆಯಲ್ಲಿ ಶವವಾಗಿ ಪತ್ತೆಯಾಗಿದ್ದ ಜಯಮ್ಮನವರ ಹಂತಕರನ್ನ ಬಂಧಿಸುವಲ್ಲಿ ರಿಪ್ಪನ್ ಪೇಟೆ ಪೊಲೀಸರು ಬಂಧಿಸಿದ್ದಾರೆ.

ರಿಪ್ಪನ್‌ಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯ
ಕೋಡೂರು ಗ್ರಾಪಂ ವ್ಯಾಪ್ತಿಯ,
ಯಳಗಲ್ಲು ಗ್ರಾಮದ ಮಯೂರ ಕೆ. (24) ತನ್ನ ಅತ್ತೆ ಹೊಳಲೂರು ಗ್ರಾಮದ ಸೀತಾರ ರವರು ಕೆಲಸ ಮಾಡುತ್ತಿದ್ದ ಮಠದಲ್ಲಿ,
ಕಸಗುಡಿಸುವ ಕೆಲಸ ಮಾಡುತ್ತಿದ್ದ
ಜಯಮ್ಮ ಕೋಂ ಕುಮಾರ (62) ರವರ
ಹತ್ತಿರ ಕೈಸಾಲವಾಗಿ ಹಣ ತೆಗೆದುಕೊಂಡು ಅದನ್ನು ವಾಪಾಸ್ ಕೊಡಲು ಸಾಧ್ಯವಾಗಿರಲಿಲ್ಲ.

ಜಯಮ್ಮನ ಹತ್ತಿರ ಹಣ ಮತ್ತು ಬಂಗಾರವಿರುವುದನ್ನು ಗಮನಿಸಿದ ಮಯೂರ ಕೆ ಅಪ್ರಾಪ್ತ ಸ್ನೇಹಿತನೊಂದಿಗೆ
ಬುದ್ಧಿವಂತಿಕೆಯಿಂದ ರಿಪ್ಪನ್‌ಪೇಟೆಯಲ್ಲಿ ಸೈಟ್ ಕೊಡಿಸುವುದಾಗಿ ನಂಬಿಸಿ ವ್ಯಾಗನಾರ್ ಕಾರಿನಲ್ಲಿ ಕೂರಿಸಿಕೊಂಡು ಬಂದ ಯುವಕ ಹಗ್ಗದ ಸಹಾಯದಿಂದ ಕುತ್ತಿಗೆಗೆ ಬಿಗಿದು ಕೊಲೆ ಮಾಡಿರುವುದು ತಿಳಿದು ಬಂದಿದೆ.

ಕೊಲೆಯನ್ನು ಮರೆ ಮಾಚುವ ಉದ್ದೇಶದಿಂದ ಬೇಲಿ ಕಂಬದ ಕಲ್ಲನ್ನು ಜೊತೆಗೆ ಪ್ಲಾಸ್ಟಿಕ್ ಹಗ್ಗದಿಂದ ಸುತ್ತಿ ಬಿಗಿದು ಅದೇ ದಿನ ರಾತ್ರಿ ಸುಮಾರು 10:45ರ ಸುಮಾರಿಗೆ ಹುಂಚ ಮುತ್ತಿನಕೆರೆಯಲ್ಲಿ ಮೃತದೇಹವನ್ನು ಬಿಸಾಕಿ ಹೋಗಿದ್ದರು.

Crime News ಮೊದಲಿಗೆ ಜಯಮ್ಮನ ಶವ ಪತ್ತೆಯಾಗಿರಲಿಲ್ಲ. ಎರಡುದಿನಗಳ ನಂತರ ಪತ್ತೆಯಾಗಿತ್ತು. ನಂತರ ಪೊಲೀಸರ ಖಡಕ್ ಕಾರ್ಯಾಚರಣೆಯಿಂದ ಪ್ರಕರಣ ಬೇಧಿಸಲಾಗಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...

MESCOM ಹೊಳೆಹೊನ್ನೂರು ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಹೊಳೆಹೊನ್ನೂರು ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಫೆ. 03 ರಂದು ಬೆಳಿಗ್ಗೆ...

Shivamogga Police ವ್ಯಕ್ತಿ ಮೇಲೆ ಮಾರಣಾಂತಿಕ ಹಲ್ಲೆ, ಮೂವರಿಗೆ 5 ವರ್ಷ ಜೈಲು ಶಿಕ್ಷೆ

Shivamogga Police ಮಾರಣಾಂತಿಕವಾಗಿ ಹಲ್ಲೆ ಮಾಡಿ ಹಾಗೂ ಅವಾಚ್ಯ ಶಬ್ದಗಳಿಂದ ಬೈದು...