Thursday, March 19, 2026
Thursday, March 19, 2026

Crime News ಮಹಿಳೆಯನ್ನು ಕೊಲೆಗೈದು ಶವ ಕೆರೆಗೆಸೆದ ಪಾತಕಿಗಳ ಬಂಧನ

Date:

Crime News ಮಾ.18 ರಂದು ರಿಪ್ಪನ್ ಪೇಟೆ ಠಾಣೆಯ ಹುಂಚದ ಮುತ್ತಿನಕೆರೆಯಲ್ಲಿ ಶವವಾಗಿ ಪತ್ತೆಯಾಗಿದ್ದ ಜಯಮ್ಮನವರ ಹಂತಕರನ್ನ ಬಂಧಿಸುವಲ್ಲಿ ರಿಪ್ಪನ್ ಪೇಟೆ ಪೊಲೀಸರು ಬಂಧಿಸಿದ್ದಾರೆ.

ರಿಪ್ಪನ್‌ಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯ
ಕೋಡೂರು ಗ್ರಾಪಂ ವ್ಯಾಪ್ತಿಯ,
ಯಳಗಲ್ಲು ಗ್ರಾಮದ ಮಯೂರ ಕೆ. (24) ತನ್ನ ಅತ್ತೆ ಹೊಳಲೂರು ಗ್ರಾಮದ ಸೀತಾರ ರವರು ಕೆಲಸ ಮಾಡುತ್ತಿದ್ದ ಮಠದಲ್ಲಿ,
ಕಸಗುಡಿಸುವ ಕೆಲಸ ಮಾಡುತ್ತಿದ್ದ
ಜಯಮ್ಮ ಕೋಂ ಕುಮಾರ (62) ರವರ
ಹತ್ತಿರ ಕೈಸಾಲವಾಗಿ ಹಣ ತೆಗೆದುಕೊಂಡು ಅದನ್ನು ವಾಪಾಸ್ ಕೊಡಲು ಸಾಧ್ಯವಾಗಿರಲಿಲ್ಲ.

ಜಯಮ್ಮನ ಹತ್ತಿರ ಹಣ ಮತ್ತು ಬಂಗಾರವಿರುವುದನ್ನು ಗಮನಿಸಿದ ಮಯೂರ ಕೆ ಅಪ್ರಾಪ್ತ ಸ್ನೇಹಿತನೊಂದಿಗೆ
ಬುದ್ಧಿವಂತಿಕೆಯಿಂದ ರಿಪ್ಪನ್‌ಪೇಟೆಯಲ್ಲಿ ಸೈಟ್ ಕೊಡಿಸುವುದಾಗಿ ನಂಬಿಸಿ ವ್ಯಾಗನಾರ್ ಕಾರಿನಲ್ಲಿ ಕೂರಿಸಿಕೊಂಡು ಬಂದ ಯುವಕ ಹಗ್ಗದ ಸಹಾಯದಿಂದ ಕುತ್ತಿಗೆಗೆ ಬಿಗಿದು ಕೊಲೆ ಮಾಡಿರುವುದು ತಿಳಿದು ಬಂದಿದೆ.

ಕೊಲೆಯನ್ನು ಮರೆ ಮಾಚುವ ಉದ್ದೇಶದಿಂದ ಬೇಲಿ ಕಂಬದ ಕಲ್ಲನ್ನು ಜೊತೆಗೆ ಪ್ಲಾಸ್ಟಿಕ್ ಹಗ್ಗದಿಂದ ಸುತ್ತಿ ಬಿಗಿದು ಅದೇ ದಿನ ರಾತ್ರಿ ಸುಮಾರು 10:45ರ ಸುಮಾರಿಗೆ ಹುಂಚ ಮುತ್ತಿನಕೆರೆಯಲ್ಲಿ ಮೃತದೇಹವನ್ನು ಬಿಸಾಕಿ ಹೋಗಿದ್ದರು.

Crime News ಮೊದಲಿಗೆ ಜಯಮ್ಮನ ಶವ ಪತ್ತೆಯಾಗಿರಲಿಲ್ಲ. ಎರಡುದಿನಗಳ ನಂತರ ಪತ್ತೆಯಾಗಿತ್ತು. ನಂತರ ಪೊಲೀಸರ ಖಡಕ್ ಕಾರ್ಯಾಚರಣೆಯಿಂದ ಪ್ರಕರಣ ಬೇಧಿಸಲಾಗಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S.N. Channabasappa “ಸಹ್ಯಾದ್ರಿ ಉತ್ಸವ” ಕ್ಕೆ ಸರ್ಕಾರವು ಮತ್ತೆ ಚಾಲನೆ ನೀಡಲು ಒತ್ತಾಯಿಸುತ್ತೇನೆ- ಶಾಸಕ ಎಸ್.ಎನ್. ಚನ್ನಬಸಪ್ಪ

S.N. Channabasappa ಶಿವಮೊಗ್ಗ ಜಿಲ್ಲೆಯ ಸಮೃದ್ಧ ಸಾಂಸ್ಕೃತಿಕ ಮತ್ತು ಐತಿಹಾಸಿಕ ಪರಂಪರೆಯನ್ನು...

Madhu Bangarappa ಎಸ್ಎಸ್ಎಲ್ ಸಿ ಪರೀಕ್ಷಾರ್ಥಿಗಳಿಗೆ ಶುಭ ಹಾರೈಸಿದ ಸಚಿವ ಮಧು ಬಂಗಾರಪ್ಪ

Madhu Bangarappa ರಾಜ್ಯಾದ್ಯಂತ ಇಂದಿನಿಂದ 2026ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1...

Jawahar Navodaya Vidyalaya ಕುಂದಗಸವಿಯ ಎಂ.ಎನ್.ಅಪೂರ್ವ ನವೋದಯ ವಿದ್ಯಾಲಯಕ್ಕೆ ಆಯ್ಕೆ

Jawahar Navodaya Vidyalaya ಜವಾಹರ ನವೋದಯ ವಿದ್ಯಾಲಯ ನಡೆಸುವ ಪ್ರಸಕ್ತ ಸಾಲಿನ...