Sunday, December 14, 2025
Sunday, December 14, 2025

K. S. Eshwarappa ಹಣಬಲ ಮತ್ತು ಧರ್ಮದ ನಡುವೆ ಯುದ್ಧ.ಅಂತಿಮವಾಗಿ ಧರ್ಮಕ್ಕೇ ಜಯ-ಕೆ.ಎಸ್. ಈಶ್ವರಪ್ಪ

Date:

K. S. Eshwarappa ನನ್ನ ಎದೆಯಲ್ಲಿ ಒಂದು ಕಡೆ ರಾಮ, ಮತ್ತೊಂದು ಕಡೆ ಮೋದಿ ಅವರಿದ್ದಾರೆ. ಮೋದಿ ನನಗೆ ಸ್ಫೂರ್ತಿ. ರಾಜ್ಯದಲ್ಲಿ ಯಡಿಯೂರಪ್ಪ ಮತ್ತವರ ಮಕ್ಕಳ ರಾಜಕಾರಣ ಅಂತ್ಯ ಆಗಬೇಕು ಎಂಬ ಆಸೆ ಅವರಿಗೂ, ಸಾವಿರಾರು ಹಿಂದೂ ಕಾರ್ಯಕರ್ತರ ಅಭಿಪ್ರಾಯವೂ ಇದೆ ಆಗಿದೆ. ಮೋದಿ ಅಮಿತ್ ಷಾ ಅವರೇ ನನ್ನನ್ನು ನಿಲ್ಲಿಸಿದ್ದಾರೆ ಎಂಬ ಅಭಿಪ್ರಾಯ ನನ್ನ ಬೆಂಬಲಿಸುತ್ತಿರುವವರಿಗೂ ಬಂದಿರಬಹುದು ಎಂದು ಮಾಜಿ ಉಪಮುಖ್ಯಮಂತ್ರಿ ಕೆ ಎಸ್ ಈಶ್ವರಪ್ಪ ಹೇಳಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಶನಿವಾರ ಮಾತನಾಡಿದ ಅವರು, ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಮತ್ತು ಅವರ ಮಕ್ಕಳ ಕುಟುಂಬ ರಾಜಕಾರಣ ಮುಗಿಸಲು ಹೋರಾಟಕ್ಕಿಳಿದಿದ್ದೇನೆ. ಯಡಿಯೂರಪ್ಪನವರ ಜಾತಿ ಮತ್ತು º Àಣ ಬಲ ಮತ್ತು ಧರ್ಮದ ನಡುವೆ ಯುದ್ಧ ನಡೆಯುತ್ತಿದೆ. ಅಂತಿಮವಾಗಿ ಧರ್ಮ ಗೆಲ್ಲುತ್ತದೆ ಎಂದು ಈಶ್ವರಪ್ಪ ಹೇಳಿದರು.
ಪಕ್ಷ ಬಿಟ್ಟು ಹೋಗಿದ್ದ ಯಡಿಯೂರಪ್ಪ ಮೋಸ ಮಾಡಿರಲಿಲ್ಲವೇ? ಯಡಿಯೂರಪ್ಪನವರು ಯಾವ ಮುಖ ಇಟ್ಟುಕೊಂಡು ನನ್ನ ಜೊತೆ ಮಾತುಕತೆ ಗೆ ಬರುತ್ತಾರೆ? ಇಷ್ಟು ಮೋಸ ಮಾಡಿದ್ದೇನೆ ಎನ್ನುವುದು ಅವರ ಮನಸ್ಸಿನಲ್ಲಿದ್ದರೆ ನನ್ನ ಹತ್ತಿರ ಬರುವುದಿಲ್ಲ. ನಲವತ್ತು ವರ್ಷದಿಂದ ಸಂಘಟನೆಯಲ್ಲಿದ್ದೇನೆ. ಸಾಯುವವರೆಗೂ ಇರುತ್ತೇನೆ ಎಂದ ಅವರು, ಈಶ್ವರಪ್ಪನವರನ್ನು ಬೆಂಬಲಿಸುವ ಯಾವುದೇ ಮಠಾಧೀಶರಿಗೆ, ಬೆಂಬಲಿಗರಿಗೆ ಬೆದರಿಕೆ ಹಾಕಿಲ್ಲ, ಇಂತಹ ಆರೋಪ ಮಾಡುತ್ತಿರುವ ಈಶ್ವರಪ್ಪನವರು ಚಂದ್ರಗುತ್ತಿ ರೇಣುಕಾ ದೇವಿ ದೇವಸ್ಥಾನದಲ್ಲಿ ಬಂದು ಗಂಟೆ ಹೊಡೆದು ಪ್ರಮಾಣ ಮಾಡಲಿ ಎಂಬ ಬಿಜೆಪಿ ಲೋಕಸಭಾ ಅಭ್ಯರ್ಥಿ ಬಿ. ವೈ ರಾಘವೇಂದ್ರ ಅವರ ಆಹ್ವಾನಕ್ಕೆ ತೀಕ್ಷ್ಣ ಪ್ರತಿಕ್ರಿಯೆ ನೀಡಿದ ಈಶ್ವರಪ್ಪ, ರಾಘವೇಂದ್ರ ಮತ್ತು ಅವರಪ್ಪನಿಗೆ (ಯಡಿಯೂರಪ್ಪ) ಸುಳ್ಳು ಹೇಳುವುದು ಅಭ್ಯಾಸವಾಗಿದೆ. ಯಡಿಯೂರಪ್ಪ ಹಾವೇರಿಯಲ್ಲಿ ಕಾಂತೇಶ್‌ಗೆ ಟಿಕೆಟ್ ಕೊಡಿಸುತ್ತೇನೆ, ನಾನೇ ಬಂದು ಕ್ಷೇತ್ರದಲ್ಲಿ K. S. Eshwarappa ಓಡಾಡಿ ಗೆಲ್ಲಿಸುತ್ತೇನೆ. ಅಂತ ಹೇಳಿರಲಿಲ್ಲ ಎಂದು ಯಡಿಯೂರಪ್ಪ ಅವರು ಗಂಟೆ ಹೊಡೆದು ಪ್ರಮಾಣ ಮಾಡುತ್ತಾರಾ? ಸಾಧುಸಂತರಿಗೆ ನೋವುಂಟು ಮಾಡಿಲ್ಲ, ಬೆದರಿಕೆ ಹಾಕಿಲ್ಲ ಎಂದು ರಾಘವೇಂದ್ರ ಗಂಟೆ ಹೊಡೆದು ಪ್ರಮಾಣ ಮಾಡುತ್ತಾರಾ ಎಂದು ಪ್ರಶ್ನಿಸಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Alvas Cultural Fest ಡಿಸೆಂಬರ್ 15. ಶಿವಮೊಗ್ಗದಲ್ಲಿ ಆಳ್ವಾಸ್ ಸಾಂಸ್ಕೃತಿಕ ವೈಭವ ಅನಾವರಣ.

Alvas Cultural Fest ಆಳ್ವಾಸ್ ನುಡಿಸಿರಿ ವಿರಾಸತ್ ಜಿಲ್ಲಾ ಘಟಕ, ಕರ್ನಾಟಕ...

Shimoga News ದೇಸಿವಸ್ತುಗಳ ಮಾರಾಟ ಮಳಿಗೆಯಲ್ಲಿ ಸೋಲಾರ್ ಬುಕ್ ಗೆ ಚಾಲನೆ.

Shimoga News ನಗರದ ಗೋಪಾಳ ರಸ್ತೆ ಆಲ್ಕೊಳ ಸಮೀಪದ ಬಂಟರ ಭವನದಲ್ಲಿ...

D S Arun ಗ್ರಾಮ ಪಂಚಾಯತ್ ನಿರ್ವಹಣೆಯಗ್ರಂಥಪಾಲಕರಿಗೆ ಕನಿಷ್ಠ ವೇತನ ಪಾವತಿಗೆಶಾಸಕ ಡಿ.ಎಸ್.ಅರುಣ್ ಒತ್ತಾಯ.

D S Arun ಗ್ರಾಮ ಪಂಚಾಯಿತಿಗಳ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಗ್ರಂಥಪಾಲಕರಿಗೆ ಸರ್ಕಾರ...

Shimoga News ಸೂಗೂರು ಗ್ರಾಮ ಪಂಚಾಯತಿಯ ಸಾಮಾಜಿಕ‌ನ್ಯಾಯ ಸಮಿತಿ ಅಧ್ಯಕ್ಷರಾಗಿ ವೀರೇಶ್ ಕ್ಯಾತಿನಕೊಪ್ಪಅಧಿಕಾರ ಸ್ವೀಕಾರ.

Shimoga News ಶಿವಮೊಗ್ಗ ತಾಲೂಕಿನ ಸೂಗುರು ಗ್ರಾಮ ಪಂಚಾಯತಿಯ ಸಾಮಾಜಿಕ ನ್ಯಾಯ...