Monday, December 15, 2025
Monday, December 15, 2025

B.Y.Raghavendra ಮಹಿಳಾ ಶಕ್ತಿಗೆ ಆದ್ಯತೆ : ಗಾಂಧೀಜಿಯ ಕನಸು- ಬಿ.ವೈ.ರಾಘವೇಂದ್ರ

Date:

B.Y.Raghavendra ಲೋಕಸಭಾ ಚುನಾವಣೆಯ ನಿಮಿತ್ತ ತೀರ್ಥಹಳ್ಳಿ ತಾಲ್ಲೂಕು ಆರಗ ಗ್ರಾಮದಲ್ಲಿ ಭಾರತೀಯ ಜನತಾ ಪಕ್ಷ ತೀರ್ಥಹಳ್ಳಿ ಮಂಡಲದ ವತಿಯಿಂದ ಇಂದು ಹಮ್ಮಿಕೊಂಡಿದ್ದ “ಮಹಿಳಾ ಸಮಾವೇಶ” ದಲ್ಲಿ ಭಾಗಿಯಾಗಿ ಸಭಾ ಕಾರ್ಯಕ್ರಮವನ್ನು ಶಾಸಕರಾದ ಶ್ರೀ ಆರಗ ಜ್ಞಾನೇಂದ್ರ ಅವರೊಂದಿಗೆ ಉದ್ಘಾಟಿಸಿ ನೆರೆದಿದ್ದ ಸಾವಿರಾರು ಸಂಖ್ಯೆಯ ಸಹೋದರಿಯರನ್ನು ಹಾಗೂ ತಾಯಂದಿರನ್ನು ಉದ್ದೇಶಿಸಿ ಸಂಸದರಾದ ಬಿ.ವೈ. ರಾಘವೇಂದ್ರ ಅವರು ಮಾತನಾಡಿದರು.

ಮಹಾತ್ಮ ಗಾಂಧೀಜಿ ಅವರು ಗ್ರಾಮಗಳು ವಿಕಾಸವಾಗಬೇಕಾದರೆ ದೇಶವು ಅಭಿವೃದ್ಧಿ ಪಥದಲ್ಲಿ ಹೆಜ್ಜೆ ಇಡಬೇಕಾದರೆ “ಮಹಿಳಾ ಶಕ್ತಿ” ಗೆ ಹೆಚ್ಚಿನ ಆದ್ಯತೆ ನೀಡಬೇಕು ಎಂದು ಕನಸನ್ನು ಕಂಡಿದ್ದರು. ಸ್ವಾತಂತ್ರ್ಯದ ನಂತರ ಆರಿಸಿ ಬಂದಂತಹ ಯಾವುದೇ ಸರ್ಕಾರಗಳು ಈ ನಿಟ್ಟಿನಲ್ಲಿ ಹೆಚ್ಚಿನ ಗಮನ ನೀಡಿರಲಿಲ್ಲ. ಆದರೆ ಮಹಿಳಾ ವಲಯದ ಸಬಲೀಕರಣಕ್ಕೆ ಹೆಚ್ಚಿನ ಪ್ರಾಶಸ್ತ್ಯ ನೀಡಿದ್ದು ಕೇಂದ್ರದ ಶ್ರೀ ನರೇಂದ್ರ ಮೋದಿ ನೇತೃತ್ವದ ಸರ್ಕಾರ ಎಂಬುದನ್ನು ಗಮನಿಸಬೇಕು ಎಂದರು.

ರಾಜ್ಯದಲ್ಲಿ ಶ್ರೀ ಬಿ.ಎಸ್. ಯಡಿಯೂರಪ್ಪ ನೇತೃತ್ವದ ರಾಜ್ಯ ಸರ್ಕಾರ ಅಸ್ತಿತ್ವದಲ್ಲಿದ್ದ ಸಮಯದಲ್ಲಿ ಹೆಣ್ಣು ಮಕ್ಕಳ ಸಬಲೀಕರಣಕ್ಕೆ ಆದ್ಯತೆ ನೀಡುವ ಸಲುವಾಗಿ ಶಾಲೆಗೆ ಹೋಗುವ ಹೆಣ್ಣು ಮಕ್ಕಳಿಗೆ “ಉಚಿತ ಸೈಕಲ್” ನೀಡಿದ್ದರು. ಇನ್ನು ಒಂದು ಹೆಜ್ಜೆ ಮುಂದೆ ನಿಂತು ಹೆಣ್ಣು ಮಕ್ಕಳ ಭವಿಷ್ಯದ ಹಿತದೃಷ್ಟಿಯಿಂದ ಆಲೋಚಿಸಿ “ಭಾಗ್ಯಲಕ್ಷ್ಮಿ” ಎಂಬ ದೂರದೃಷ್ಟಿಯ ಯೋಜನೆ ನೀಡಿದ್ದು ಮಹತ್ತರ ಮೈಲಿಗಲ್ಲಾಗಿದೆ.

B.Y.Raghavendra ಕೇಂದ್ರದ ಶ್ರೀ ನರೇಂದ್ರ ಮೋದಿ ಸರ್ಕಾರ ಕಳೆದ ಹತ್ತು ವರ್ಷಗಳಲ್ಲಿ ಹೆಣ್ಣು ಮಕ್ಕಳ ಆರ್ಥಿಕ ಉನ್ನತಿಕರಣಕ್ಕೆ ದೇಶದ ಆಡಳಿತದ ಇತಿಹಾಸದಲ್ಲಿ ದಾಖಲಾಗುವಂತ ಜನ-ಧನ ಯೋಜನೆ, ಭೇಟಿ ಬಾಚವೋ-ಭೇಟಿ ಪಡಾವೋ ಯೋಜನೆ, ಉಜ್ವಲ ಯೋಜನೆ, ಮಾತೃ ವಂದನಾ ಯೋಜನೆ, ಸುಕನ್ಯಾ ಸಮೃದ್ಧಿ ಯೋಜನೆ ಸೇರಿದಂತೆ ಇನ್ನೂ ಅನೇಕ ಐತಿಹಾಸಿಕ ಯೋಜನೆಗಳು ಜಾರಿಗೆ ತಂದು ಮಹಿಳಾ ವಲಯಕ್ಕೆ ಹೆಚ್ಚಿನ ಬಲ ಕೊಟ್ಟಿದ್ದು, ಇದು ಹೆಣ್ಣುಮಕ್ಕಳ ಅಭಿವೃದ್ಧಿಗೆ ಭವಿಷ್ಯದ ಗ್ಯಾರಂಟಿ ಯೋಜನೆಗಳಾಗಿದೆ ಎಂದು ಮನವರಿಕೆ ಮಾಡಲಾಯಿತು.

ಈಗಾಗಲೇ ದೇಶವು ಸರ್ವತೋಮುಖ ಅಭಿವೃದ್ಧಿಯೊಂದಿಗೆ ಆರ್ಥಿಕ ಬಲಿಷ್ಠತೆ ಮೂಲಕ “ವಿಶ್ವಗುರು” ಸ್ಥಾನವನ್ನು ಅಲಂಕರಿಸುವತ್ತ ದಾಪುಗಾಲು ಇಟ್ಟಿದ್ದು, ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಶ್ರೀ ನರೇಂದ್ರ ಮೋದಿ ಅವರ ಕೈಯನ್ನು ಬಲ ಪಡಿಸಲು ಹಾಗೂ “ವಿಕಸಿತ ಭಾರತ” ನಿರ್ಮಾಣ ಮಾಡಲು ಹೆಚ್ಚಿನ ಶಕ್ತಿ ತುಂಬಲು ಜೊತೆಗೆ ನನ್ನ ಲೋಕಸಭಾ ಅವಧಿಯಲ್ಲಿ ನಡೆದಿರುವ ಕ್ಷೇತ್ರದ ಅಭಿವೃದ್ಧಿ ಕಾರ್ಯಗಳನ್ನು ಜನರಿಗೆ ತಲುಪಿಸಲು ಮುಂದಿನ ನಲವತ್ತು ದಿನಗಳು ಶಕ್ತಿ ಮೀರಿ ಪ್ರಯತ್ನ ನಡೆಸಿ ಪಕ್ಷದತ್ತ ಮತದಾರರನ್ನು ಸೆಳೆಯುವ ಪ್ರಾಮಾಣಿಕ ಪ್ರಯತ್ನ ನಡೆಸಬೇಕು ಎಂದು ಕರೆಕೊಡಲಾಯಿತು.

ಈ ಸಂದರ್ಭದಲ್ಲಿ ಪ್ರಮುಖರಾದ ಶ್ರೀಮತಿ ಮಂಜುಳಾ ಅವರು, ಶ್ರೀಮತಿ ಗಾಯತ್ರಿ ಮಲ್ಲಪ್ಪ ಅವರು, ಶ್ರೀಮತಿ ಯಶೋಧ ಅವರು, ಶ್ರೀ ನವೀನ್ ಅವರು ಸೇರಿದಂತೆ ಬೂತ್, ಶಕ್ತಿಕೇಂದ್ರ ಹಾಗೂ ಮಹಾಶಕ್ತಿಕೇಂದ್ರ ಅಧ್ಯಕ್ಷರು ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Alvas Cultural Fest ಡಿಸೆಂಬರ್ 15. ಶಿವಮೊಗ್ಗದಲ್ಲಿ ಆಳ್ವಾಸ್ ಸಾಂಸ್ಕೃತಿಕ ವೈಭವ ಅನಾವರಣ.

Alvas Cultural Fest ಆಳ್ವಾಸ್ ನುಡಿಸಿರಿ ವಿರಾಸತ್ ಜಿಲ್ಲಾ ಘಟಕ, ಕರ್ನಾಟಕ...

Shimoga News ದೇಸಿವಸ್ತುಗಳ ಮಾರಾಟ ಮಳಿಗೆಯಲ್ಲಿ ಸೋಲಾರ್ ಬುಕ್ ಗೆ ಚಾಲನೆ.

Shimoga News ನಗರದ ಗೋಪಾಳ ರಸ್ತೆ ಆಲ್ಕೊಳ ಸಮೀಪದ ಬಂಟರ ಭವನದಲ್ಲಿ...

D S Arun ಗ್ರಾಮ ಪಂಚಾಯತ್ ನಿರ್ವಹಣೆಯಗ್ರಂಥಪಾಲಕರಿಗೆ ಕನಿಷ್ಠ ವೇತನ ಪಾವತಿಗೆಶಾಸಕ ಡಿ.ಎಸ್.ಅರುಣ್ ಒತ್ತಾಯ.

D S Arun ಗ್ರಾಮ ಪಂಚಾಯಿತಿಗಳ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಗ್ರಂಥಪಾಲಕರಿಗೆ ಸರ್ಕಾರ...

Shimoga News ಸೂಗೂರು ಗ್ರಾಮ ಪಂಚಾಯತಿಯ ಸಾಮಾಜಿಕ‌ನ್ಯಾಯ ಸಮಿತಿ ಅಧ್ಯಕ್ಷರಾಗಿ ವೀರೇಶ್ ಕ್ಯಾತಿನಕೊಪ್ಪಅಧಿಕಾರ ಸ್ವೀಕಾರ.

Shimoga News ಶಿವಮೊಗ್ಗ ತಾಲೂಕಿನ ಸೂಗುರು ಗ್ರಾಮ ಪಂಚಾಯತಿಯ ಸಾಮಾಜಿಕ ನ್ಯಾಯ...