Monday, February 2, 2026
Monday, February 2, 2026

Sahyadri Arts College ಅಸಾಧ್ಯವೆನ್ನುವ ಕ್ಷೇತ್ರಗಳಲ್ಲೂ ಮಹಿಳೆಯರು ಸಾಧನೆ ಮಾಡಿದ್ದಾರೆ- ಡಾ.ಹಾಲಮ್ಮ

Date:

Sahyadri Arts College ಬದಲಾದ ಸಾಮಾಜಿಕ ಸನ್ನಿವೇಶದಲ್ಲಿ ಹೆಣ್ಣಿನ ಆದರ್ಶಕರಣ ಮಾದರಿಗಳು ಭಿನ್ನವಾಗಿವೆ. ಯಾವ ಕ್ಷೇತ್ರದಲ್ಲಿ ಹೆಣ್ಣಿನ ಸಾಧನೆ ಅಸಾಧ್ಯ ಎಂದು ಭಾವಿಸಲಾಗಿತ್ತೋ ಅಂತ ಕ್ಷೇತ್ರಗಳಲ್ಲಿ ಮಹಿಳೆಯರು ಸಾಧನೆ ಮಾಡುತ್ತಿದ್ದಾರೆ ಎಂದು ಸಹ್ಯಾದ್ರಿ ಕಲಾ ಕಾಲೇಜಿನ ಸಹ ಪ್ರಾಧ್ಯಾಪಕಿ ಡಾ. ಹಾಲಮ್ಮ ಹೇಳಿದರು.

ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಪ್ರಯುಕ್ತ ಶಿವಮೊಗ್ಗ ನಗರದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮಹಿಳೆ ವರ್ತಮಾನದ ತಲ್ಲಣಗಳ ಕುರಿತು ಮಾತನಾಡಿ, ಎಲ್ಲ ಕಡೆಯಲ್ಲೂ ಇಂದು ಮಹಿಳೆಯರು ಸಶಕ್ತವಾಗಿ ಸಾಮರ್ಥ್ಯವನ್ನು ಸಾಬೀತುಪಡಿಸಿದ್ದಾರೆ. ಸ್ವಾಸ್ತ್ಯ ಸಮಾಜ ನಿರ್ಮಿತಿಯು ಗಂಡು ಹೆಣ್ಣು ಸಹವರ್ತಿಯಾಗಿ ನಡೆದಾಗ ಮಾತ್ರ ಸಾಧ್ಯ ಎಂದು ತಿಳಿಸಿದರು.

ಮನೆಯ ಒಳಗೆ ಹೊರಗೆ ದುಡಿಯುತ್ತಿರುವ ಅನೇಕ ಮಹಿಳೆಯರು ಹೆಚ್ಚಿನ ಒತ್ತಡದಿಂದ ಬಳಲುತ್ತಿದ್ದಾರೆ. ವೃತ್ತಿ ಬದುಕಿನಷ್ಟೆ ಮುಖ್ಯವಾದದ್ದು ಕೌಟುಂಬಿಕ ಬದುಕು. ಅದನ್ನು ಕಾಪಿಟ್ಟುಕೊಳ್ಳಬೇಕಾದ ಹೊಣೆಯನ್ನು ಮಹಿಳೆ ಮತ್ತು ಪುರುಷರು ಸಮಭಾವದಿಂದ ನಿರ್ವಹಿಸಬೇಕು ಎಂದರು.

ಸ್ಕೌಟ್ ಜಿಲ್ಲಾ ಆಯುಕ್ತ ಕೆ.ಪಿ.ಬಿಂದುಕುಮಾರ್ ಮಾತನಾಡಿ, ಮಹಿಳೆಯರು ಭಯವಿಲ್ಲದೆ ಓಡಾಡುವ ವಾತಾವರಣ ನಿರ್ಮಾಣವಾಗಬೇಕು. ಹೆಣ್ಣಿನ ಕೊಲೆ, ಸುಲಿಗೆ, ಅತ್ಯಾಚಾರದಂತ ಘಟನೆಗಳು ನಡೆದಾಗ ಆಕೆಯನ್ನೆ ದೂಷಿಸಿ ಜವಾಬ್ಧಾರಿಯಿಂದ ನುಣುಚಿಕೊಳ್ಳುವ ಬದಲು ನೀಚ ಕೃತ್ಯಕ್ಕೆ ಕೈ ಹಾಕಿದ ದುರುಳರನ್ನು ಹಿಡಿದು ಕಠಿಣ ಶಿಕ್ಷೆ ನೀಡುವುದರ ಮೂಲಕ ಮುಂದೆ ಇಂತಹ ಕೃತ್ಯಗಳು ನಡೆಯದಂತೆ ನೋಡಿಕೊಳ್ಳಬೇಕು ಎಂದು ಹೇಳಿದರು.

Sahyadri Arts College ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಗೈಡ್ ಜಿಲ್ಲಾ ಆಯುಕ್ತೆ ಶಕುಂತಲಾ ಚಂದ್ರಶೇಖರ್ ಮಾತನಾಡಿ, ಮಹಿಳೆಯರು ಎಲ್ಲ ಕ್ಷೇತ್ರಗಳಲ್ಲಿ ಸಾಧನೆ ಮಾಡುತ್ತಿದ್ದು, ಎಲ್ಲರೂ ಸೂಕ್ತ ಪ್ರೋತ್ಸಾಹ ಹಾಗೂ ಸಹಕಾರ ನೀಡಬೇಕು. ಮಹಿಳೆಯರು ಉನ್ನತ ಸ್ಥಾನ ತಲುಪುತ್ತಿದ್ದಾರೆ ಎಂದು ತಿಳಿಸಿದರು.

ರಾಜ್ಯ ಸಂಘಟನಾ ಆಯುಕ್ತರಾದ ಭಾರತಿ ಡಯಾಸ್. ವೈ ಆರ್ ವೀರೇಶಪ್ಪ , ಕೇಂದ್ರ ಸ್ಥಾನಿಕ ಆಯುಕ್ತ ಜಿ.ವಿಜಯಕುಮಾರ್, ಮಲ್ಲಿಕಾರ್ಜುನ್ ಕಾನೂರ್, ಚಂದ್ರಶೇಖರ್, ರಾಜೇಶ್ ಅವಲಕ್ಕಿ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...

MESCOM ಹೊಳೆಹೊನ್ನೂರು ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಹೊಳೆಹೊನ್ನೂರು ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಫೆ. 03 ರಂದು ಬೆಳಿಗ್ಗೆ...

Shivamogga Police ವ್ಯಕ್ತಿ ಮೇಲೆ ಮಾರಣಾಂತಿಕ ಹಲ್ಲೆ, ಮೂವರಿಗೆ 5 ವರ್ಷ ಜೈಲು ಶಿಕ್ಷೆ

Shivamogga Police ಮಾರಣಾಂತಿಕವಾಗಿ ಹಲ್ಲೆ ಮಾಡಿ ಹಾಗೂ ಅವಾಚ್ಯ ಶಬ್ದಗಳಿಂದ ಬೈದು...