Monday, February 2, 2026
Monday, February 2, 2026

Lok Sabha Election ಗ್ರಾಮಾಂತರದಲ್ಲಿ ಬಿ.ವೈ.ರಾಘವೇಂದ್ರಗೆ ಅತಿ ಹೆಚ್ಚು ಮತಗಳು ರಘುಪತಿ ಭಟ್ ವಿಶ್ವಾಸ

Date:

Lok Sabha Election ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಮತಯಾಚನೆಗೆ ಜೆಡಿಎಸ್ ಮತ್ತು ಬಿಜೆಪಿ ಜಂಟಿಯಾಗಿ ಮನೆ ಮನೆಗೆ ಹೋಗಿ ಪ್ರಚಾರ ಮಾಡಲಿದ್ದಾರೆ.
ಗ್ರಾಮಾಂತರ ಪ್ರಭಾರಿಯಾಗಿ ಡಾ|| ಧನಂಜಯ್ ಸರ್ಜಿ ನೇಮಕವಾಗಿದ್ದಾರೆ. ಗ್ರಾಮಾಂತರದಲ್ಲಿ ಬಿಜೆಪಿ ಅಭ್ಯರ್ಥಿ ರಾಘವೇಂದ್ರ ಅತಿ ಹೆಚ್ಚು ಮತ ಗಳಿಸುವ ವಿಶ್ವಾಸವಿದೆ ಎಂದು ಸಿವಮೊಗ್ಗ ಕ್ಷೇತ್ರದ ಪ್ರಭಾರಿ, ಉಡುಪಿಯ ಮಾಜಿ ಶಾಸಕ ರಘುಪತಿ ಭಟ್ ಹೇಳಿದರು.
ಸುದ್ದಿಗೋಷ್ಠಿಯಲ್ಲಿ ಸೋಮವಾರ ಮಾತನಾಡಿದ ಅವರು,
ಜೆಡಿಎಸ್ ನೊಂದಿಗೆ ರಾಷ್ಟ್ರಮಟ್ಟದಲ್ಲಿ ಬಿಜೆಪಿ ಜೊತೆ ಹೊಂದಾಣಿಕೆಯದ ಬಳಿಕ ಸಮನ್ವಯ ಸಮಿತಿ ರಚನೆ ಆಗಿರಲಿಲ್ಲ. ಈಗ ರಚನೆ ಆಗಿದೆ. ಅದೇ ರೀತಿ ವಿಧಾನಸಭಾ ಕ್ಷೇತ್ರವಾರು ರಚನೆ ಮಾಡಲಾಗಿದೆ. ಜೆಡಿಎಸ್ ಮತ್ತು ಬಿಜೆಪಿಯ ತಲಾ ೧೦ ಸದಸ್ಯರು ಸಮನ್ವಯ ಸಮಿತಿಯಲ್ಲಿರುತ್ತಾರೆ. ಈಗಾಗಲೆ ಸಭೆನಡೆಸಲಾಗಿದೆ. ಜಿಲ್ಲಾ ಪಂಚಾಯಿತಿ ಮಟ್ಟದಲ್ಲಿ, ತಾಪಂ, ಗ್ರಾಪಂ ಮಟ್ಟದಲ್ಲಿ ಪ್ರಚಾರ ಮಾಡಲಾಗುವುದು ಎಂದರು.
Lok Sabha Election ಪ್ರತಿ ಬೂತ್ ಮಟ್ಟಕ್ಕೆ ತೆರಳಿ ಸಮನ್ವಯತೆಯಲ್ಲಿನಡೆಸಲು ಪ್ರಯತ್ನಿಸಲಾಗುತ್ತಿದೆ. ಲೋಕಸಭಾ ಕ್ಷೇತ್ರದಲ್ಲಿ ಜೆಡಿಎಸ್ ಬೆಂಬಲಿತ ಬಿಜೆಪಿ ಅಭ್ಯರ್ಥಿ ಎಂಬುದ ಕರಪತ್ರಗಳಲ್ಲಿ ಇರುತ್ತದೆ. ಚಿಹ್ನೆ ಕಮಲ ಇರುತ್ತದೆ ಎಂದರು. ಜೆಡಿಎಸ್ ಬೆಂಬಲಿತ ಅಭ್ಯರ್ಥಿಯಾಗಿ ರಾಘವೇಂದ್ರ ಇರುತ್ತಾರೆ. ಗ್ರಾಮಾಂತರ ಭಾಗದಲ್ಲಿ ಯಾವುದೇ ಭಿನ್ನಾಭಿಪ್ರಾಯಗಳು ಇಲ್ಲ. ಹರಿಗೆ ವಾರ್ಡ್ನಿಂದ ಪ್ರಚಾರ ಆರಂಭಿಸಲಾಗಿದೆ ಎಂದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...

MESCOM ಹೊಳೆಹೊನ್ನೂರು ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಹೊಳೆಹೊನ್ನೂರು ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಫೆ. 03 ರಂದು ಬೆಳಿಗ್ಗೆ...

Shivamogga Police ವ್ಯಕ್ತಿ ಮೇಲೆ ಮಾರಣಾಂತಿಕ ಹಲ್ಲೆ, ಮೂವರಿಗೆ 5 ವರ್ಷ ಜೈಲು ಶಿಕ್ಷೆ

Shivamogga Police ಮಾರಣಾಂತಿಕವಾಗಿ ಹಲ್ಲೆ ಮಾಡಿ ಹಾಗೂ ಅವಾಚ್ಯ ಶಬ್ದಗಳಿಂದ ಬೈದು...