Monday, August 3, 2026
Monday, August 3, 2026

Voter Awareness ಶಿವಮೊಗ್ಗ ಜನ: ಮಾಡೇ ಮಾಡ್ತೀವಿ ಮತದಾನ ಜಾಗೃತಿ ಬೈಕ್ ಜಾಥಾ

Date:

Voter Awareness  ಜಿಲ್ಲಾಡಳಿತ, ಜಿ.ಪಂ ಹಾಗೂ ಜಿಲ್ಲಾ ಸ್ವೀಪ್ ಸಮಿತಿ ವತಿಯಿಂದ ಇಂದು ಜಿಲ್ಲಾಡಳಿತ ಕಚೇರಿ ಆವರಣದಿಂದ ಅಲ್ಲಮಪ್ರಭು ಮೈದಾನದವರೆಗೆ ಮತದಾನ ಕುರಿತು ಜಾಗೃತಿ ಮೂಡಿಸುವ ಬೈಕ್ ರ್ಯಾಲಿಯನ್ನು ನಡೆಸಲಾಯಿತು.


ಲೋಕಸಭಾ ಚುನಾವಣೆ -2024 ಪ್ರಯುಕ್ತ ಸಾರ್ವಜನಿಕರಲ್ಲಿ ಮತದಾನದ ಕುರಿತು ವ್ಯಾಪಕವಾಗಿ ಜಾಗೃತಿ ಮೂಡಿಸಲು ಜಿಲ್ಲಾ ಸ್ವೀಪ್ ವತಿಯಿಂದ ಇಂದು ಏರ್ಪಡಿಸಲಾಗಿದ್ದ ಬೈಕ್ ರ್ಯಾಲಿಗೆ ಜಿ.ಪಂ.ಸಿಇಒ ನೀಡಿ, ತಾವೂ ಬೈಕ್ ಚಲಾಯಿಸಿಕೊಂಡು ಅಲ್ಲಮಪ್ರಭು ಮೈದಾನ(ಫ್ರೀಡಂ ಪಾರ್ಕ್) ತಲುಪಿದರು.


Voter Awareness  ರ್ಯಾಲಿಯಲ್ಲಿ ವಿವಿಧ ಇಲಾಖೆಗಳ ಅಧಿಕಾರಿಗಳು, ಸಿಬ್ಬಂದಿಗಳು ಪಾಲ್ಗೊಂಡು, ಮತದಾನದ ಜಾಗೃತಿ ಕುರಿತು ಘೋಷಣೆಗಳುಳ್ಳ ಪ್ಲೆಕಾರ್ಡ್ ಗಳನ್ನು ಹಿಡುದು ಘೋಷಣೆ ಕೂಗುತ್ತಾ ಸಾಗಿದರು. ರ್ಯಾಲಿಯು ಡಿಸಿ ಕಚೇರಿಯಿಂದ ಹೊರಟು ಗೋಪಿ ಸರ್ಕಲ್ ಮುಖಾಂತರ ಕೆಎಸ್‍ಆರ್‍ಟಿಸಿ ಬಸ್ ನಿಲ್ದಾಣ ತಲುಪಿ ನಂತರ ಸಕ್ರ್ಯೂಟ್ ಹೌಸ್, ಜೈಲ್ ಸರ್ಕಲ್, ಲಕ್ಷ್ಮೀ ಟಾಕೀಸ್ ಸಿಗ್ನಲ್ ಮೂಲಕ ಅಲ್ಲಮ ಪ್ರಭು ಮೈದಾನ ತಲುಪಿತು.
“ನೋಡಿ ನಾವು ಶಿವಮೊಗ್ಗ ಜನ, ಮಾಡೇ ಮಾಡ್ತಿವಿ ಮತದಾನ” “ಜೋಗ ನೋಡೋದು ವೈಭೋಗ ಮತದಾನ ಮಾಡೋದು ಸುಯೋಗ” ಎಂಬಿತ್ಯಾದಿ ಘೋಷಣೆಗಳೊಂದಿಗೆ ರ್ಯಾಲಿನಿರತರು ಸಾಗಿದರು. ಜಿಲ್ಲಾಡಳಿತ ಆವರಣದಲ್ಲಿ ಜಿಲ್ಲಾಡಳಿತ ಮತ್ತು ಸ್ವೀಪ್ ಸಮಿತಿಯಿಂದ ಇರಿಸಲಾಗಿರುವ ಸೆಲ್ಫಿ ಕಾರ್ನರ್‍ನಲ್ಲಿ ಮಹಿಳೆಯರು, ರ್ಯಾಲಿಯಲ್ಲಿ ಪಾಲ್ಗೊಂಡವರು ಸೆಲ್ಫಿಗಳನ್ನು ಕ್ಲಿಕ್ಕಿಸಿಕೊಂಡರು.
ಈ ವೇಳೆ ಅಪರ ಜಿಲ್ಲಾಧಿಕಾರಿ ಸಿದ್ದಲಿಂಗ ರೆಡ್ಡಿ, ಜಿ.ಪಂ ಯೋಜನಾ ನಿರ್ದೇಶಕ ರಂಗಸ್ವಾಮಿ, ಮುಖ್ಯ ಯೋಜನಾಧಿಕಾರಿ ಗಾಯತ್ರಿ, ಸ್ವೀಪ್ ನೋಡಲ್ ಆಧಿಕಾರಿಗಳು, ವಿವಿಧ ಇಲಾಖೆಗಳ ಅಧಿಕಾರಿ, ಸಿಬ್ಬಂದಿಗಳು ಹಾಜರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Breaking News ತೀರ್ಥಹಳ್ಳಿಯಲ್ಲಿ ಮಳೆಗೆ ಶೆಡ್ ಕುಸಿತ: ಮೂವರ ಸಾವು.ಡಿಸಿಎಂ. ಡಾ.ಜಿ.ಪರಮೇಶ್ವರ ಸಂತಾಪ.

Breaking News ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿಯ ಇಂದಿರಾನಗರದಲ್ಲಿ ಭಾರೀ ಮಳೆಗೆ ಗುಡ್ಡ...

D.K.Shivakumar ರಾಜಕೀಯಕ್ಕಿಂತ ರಾಜ್ಯದ ರೈತರ ಮತ್ತುಜನರ ಹಿತವೇ ಮುಖ್ಯ,- ಡಿ.ಕೆ.ಶಿವಕುಮಾರ್

D.K.Shivakumar ಕಾವೇರಿ ವಿವಾದ ನಮಗೂ ಹೊಸದಲ್ಲ, ನಿಮಗೂ ಹೊಸದಲ್ಲ. ಈ...

S.N. Channabasappa ಇಂದು ಪ್ರತಿಭಟನೆ ಎನ್ನುವುದು ಜಗತ್ತಿನ ವರ್ತಮಾನವಾಗಿದೆ- ಎಸ್.ಎನ್.ಚನ್ನಬಸಪ್ಪ

S.N. Channabasappa ಇಂಗ್ಲಿಷ್ ಪ್ರಾಧ್ಯಾಪಕ ಡಾ.ಸಿ. ಚನ್ನಪ್ಪ ವಾಲೆಮನೆ ಅವರ ‘ವಾಯ್ಸ್...