Wednesday, October 2, 2024
Wednesday, October 2, 2024

Kuvempu University ಆಹಾರ ತಂತ್ರಜ್ಞತೆಯಿಂದ ಕಲಬೆರಕೆ ತಡೆದು ಆಹಾರದಲ್ಲಿ ಸುರಕ್ಷತರ ಸಾಧಿಸಬಹುದು- ಡಾ..ಎಸ್.ಇ.ನೀಲಗುಂದ

Date:

Kuvempu University ಆಹಾರ ತಂತ್ರಜ್ಞಾನ ಸರಿಯಾಗಿ ತಿಳಿದು ಉಪಯೋಗಿಸಿದರೆ ಕಲಬೆರೆಕೆ ತಡೆದು, ಆಹಾರ ಸುರಕ್ಷತೆ ಮತ್ತು ಗುಣಮಟ್ಟತೆಯನ್ನು ಸಾಧಿಸಬಹುದು ಎಂದು ಕುವೆಂಪು ವಿಶ್ವವಿದ್ಯಾಲಯ ಸ್ನಾತಕೋತ್ತರ ಆಹಾರ ತಂತ್ರಜ್ಞಾನ ವಿಭಾಗದ ಪ್ರಾಧ್ಯಾಪಕ ಡಾ. ಎಸ್.ಇ.ನೀಲಗುಂದ ಹೇಳಿದರು.

ರಾಜೇಂದ್ರ ನಗರದ ರೋಟರಿ ಶಾಲೆ ಸಭಾಂಗಣದಲ್ಲಿ ರೋಟರಿ ಶಿವಮೊಗ್ಗ ಪೂರ್ವ ವತಿಯಿಂದ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಆಹಾರ ತಂತ್ರಜ್ಞಾನ ಮತ್ತು ಪೌಷ್ಠಿಕಾಂಶ ಕುರಿತು ಮಾತನಾಡಿ, ಇಂದಿನ ಮಕ್ಕಳ ಮತ್ತು ಯುವಜನತೆಯ ಆರೋಗ್ಯದ ಭವಿಷ್ಯ ನಾವು ಉಪಯೋಗಿಸುವ ಆಹಾರದ ಮೇಲೆ ನಿಂತಿದೆ ಎಂದು ತಿಳಿಸಿದರು.

ಇಂದಿನ ವಿಶ್ವದ ಅತಿದೊಡ್ಡ ಮಾರುಕಟ್ಟೆಗಳಲ್ಲಿ ಒಂದಾಗಿರುವ ಆಹಾರವಲಯ, ಬೀದಿ ಬದಿಯ ಗೂಡು ಅಂಗಡಿಯಿಂದ ಸ್ಟಾರ್ ಹೋಟೇಲ್‌ಗಳಲ್ಲಿ ತಯಾರುಗುವ ಆಹಾರವು ಒಂದಲ್ಲಾ ಒಂದು ಕೃತಕ ರಾಸಾಯನಿಕಗಳನ್ನು ಒಳಗೊಂಡಿರುತ್ತದೆ. ಇದು ಮಾರುಕಟ್ಟೆಯ ತಂತ್ರಗಾರಿಕರಿಕೆ, ಗ್ರಾಹಕರು ಕೂಡ ಮಾನಸಿಕವಾಗಿ ಇಚಿಥ ಆಹಾರ ಪದಾರ್ಥಗಳಿಗೆ ಮಾರುಹೋಗುತ್ತಿದ್ದಾರೆ ಎಂದರು.

Kuvempu University ಮಾಹಿತಿ ಕಾರ್ಯಗಾರದ ಅಧ್ಯಕ್ಷತೆ ವಹಿಸಿದ್ದ ರೋಟರಿ ಶಿವಮೊಗ್ಗ ಪೂರ್ವದ ಅಧ್ಯಕ್ಷ ಸತೀಶ್ ಚಂದ್ರ ಮಾತನಾಡಿ, ಕಡಿಮೆ ತಂತ್ರಜ್ಞಾನವನ್ನು ಬಳಸಿ ತಯಾರಿಸಲಾದ ಆಹಾರ ಯಥೇಚ್ಚಾವಾಗಿ ಮನುಷ್ಯನ ದೇಹ ಸೇರುತ್ತದೆ ಮತ್ತು ಅಪಾಯಾಕಾರಿ ಮಾರಣಾಂತಿಕ ಕಾಯಿಲೆಗಳಿಗೆ ಕಾರಣವಾಗುತ್ತದೆ. ಈಗ ಕೆಲವು ಪ್ರಸಿದ್ಧ ಕಂಪನಿಗಳು ಆಹಾರ ತಂತ್ರಜ್ಞಾನ ಸಹಾಯದಿಂದ ಕಲಬೆರೆಕೆಯಿರದ ಮತ್ತು ಉತ್ತಮ ಗುಣಮಟ್ಟದ ಆಹಾರ ತಯಾರಿಕೆ ಮಾಡುತ್ತಿದ್ದರೆ ಎಂದು ತಿಳಿಸಿದರು.

ರೋಟರಿ ಮಾಜಿ ಸಹಾಯಕ ಗವರ್ನರ್ ಜಿ.ವಿಜಯಕುಮಾರ್, ವಸಂತ ಹೋಬಳಿದಾರ್, ರೋಟರಿ ಶಿವಮೊಗ್ಗ ಪೂರ್ವ ಕಾರ್ಯದರ್ಶಿ ಕಿಶೋರ್‌ಕುಮಾರ್, ಡಾಕ್ಟರ್ ಪರಮೇಶ್ವರ್ ಶಿಗ್ಗಾವ್, ಶೇಷಗಿರಿ, ಡಾ. ಅರುಣ್, ಡಾ. ರವಿಕಿರಣ್, ಕೇಶವಪ್ಪ, ಕೃಷ್ಣಮೂರ್ತಿ, ಅರುಣ್ ದೀಕ್ಷಿತ್, ಡಾ. ಧನಂಜಯ, ನಾಗರಾಜ್, ಎಸ್.ಗಣೇಶ್, ದೀಪಾ, ರವಿಕಿರಣ್ ಹಾಗೂ ಸದಸ್ಯರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

CM Siddharamaih ಪರಿಹಾರ ರೂಪದಲ್ಲಿ ಪಡೆದಿದ್ದ ನಿವೇಶನಗಳನ್ನ ಪತ್ನಿ ಹಿಂದಿರುಗಿಸಿದ್ದಾರೆ- ಸಿದ್ಧರಾಮಯ್ಯ

CM Siddharamaih ಮೈಸೂರಿನ ಮುಡಾ ಭೂಸ್ವಾಧೀನ ನಡೆಸದೆ ವಶಕ್ಕೆ ಪಡೆದಿದ್ದ...

R. Ashok ಸಿದ್ಧರಾಮಯ್ಯನವರಿಗೆ ತಮ್ಮ ತಪ್ಪಿನ ಅರಿವಾಯಿತಲ್ಲ”-ಆರ್ .ಅಶೋಕ್ ಪ್ರತಿಕ್ರಿಯೆ

R. Ashok ಮೂಡಾ ಹಗರಣದಲ್ಲಿ ಕಾನೂನಿನ ಕುಣಿಕೆ ಬಿಗಿಯಾಗುತ್ತಿದ್ದಂತೆ ಸಿಎಂ ಸಿದ್ಧರಾಮಯ್ಯ...

Shivamogga-Bhadravathi Urban Development Authority ಊರಗಡೂರು ನಿವೇಶನ ಪಡೆಯಲು ಅರ್ಜಿ ಸಲ್ಲಿಕೆ ಅಂತಿಮ ದಿನಾಂಕ ಮುಂದೂಡಿಕೆ

Shivamogga-Bhadravathi Urban Development Authority ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರವು ಶಿವಮೊಗ್ಗ ನಗರದ...